ವಿಶ್ವದ ಟಾಪ್-10 ವಿಮಾನಯಾನ ಸಂಸ್ಥೆಗಳಲ್ಲಿ ಗುರುತಿಸಿಕೊಂಡ IndiGo
ನವದೆಹಲಿ, ಸಪ್ಟೆಂಬರ್.10: ವಿಶ್ವದಲ್ಲೇ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುವ ವಿಮಾನಯಾನಗಳ ಷೇರುಗಳಲ್ಲಿ ಭಾರತದ ಇಂಡಿಗೋ ಸ್ಥಾನ ಪಡೆದುಕೊಂಡಿದೆ. ಜಗತ್ತಿನ ಟಾಪ್-10 ವಿಮಾನಯಾನ ಷೇರುಗಳಲ್ಲಿ ಚೀನಾದ 9 ವಿಮಾನಯಾನ ಕಂಪನಿಗಲಿದ್ದರೆ, ಭಾರತದ ಒಂದು ಕಂಪನಿಯಿದೆ.
ಕಳೆದ ಮೂರು ತಿಂಗಳಿನಲ್ಲಿ ನಡೆದ ಷೇರು ವಹಿವಾಟಿನಲ್ಲಿ ಚೀನಾಗೆ ಸೇರಿದ 9 ಕಂಪನಿಗಳು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿವೆ. ಭಾರತದಲ್ಲಿ ಅತ್ಯುತ್ತಮ ಸೇವೆ ನೀಡುತ್ತಿರುವ ಇಂಡಿಗೋ ಸಂಸ್ಥೆಯ ಷೇರುಗಳು 6ನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ.
ಇಂಡಿಗೋ ಸಂಸ್ಥೆ ಷೇರುಗಳಲ್ಲಿ ಶೇ.13ರಷ್ಟು ಏರಿಕೆ ಕಂಡು ಬಂದಿದ್ದು, ಅಗ್ರಸ್ಥಾನದಲ್ಲಿರುವ ಚೀನಾದ ಸ್ಪ್ರಿಂಗ್ ಏರ್ ಲೈನ್ಸ್ ಸಂಸ್ಥೆ ಷೇರುಗಳಲ್ಲಿ ಶೇ.22ರಷ್ಟು ಏರಿಕೆ ಕಂಡುಬಂದಿದೆ. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಜಾಗತಿಕ ವಿಮಾನಯಾನಕ್ಕೆ ಆರ್ಥಿಕ ಹೊಡೆತ ಬಿದ್ದಿದೆ.

2024ರವರೆಗೂ ವಾಯು ಸಾರಿಗೆಗೆ ಸಂಕಷ್ಟ:
"ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಪ್ರಭಾವ 2024ಕ್ಕಿಂತ ಮೊದಲ ಕಡಿಮೆಯಾಗುವ ನಿರೀಕ್ಷೆಗಳೇ ಸುಳ್ಳು ಎಂದು 290 ವಿಮಾನಗಳನ್ನು ಪ್ರತಿನಿಧಿಸಿರುವ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಸ್ಥೆಯೊಂದು ತಿಳಿಸಿದೆ. ಕೊರೊನಾವೈರಸ್ ಸೋಂಕಿನ ಪೂರ್ವದಲ್ಲಿದ್ದಂತೆ ಪ್ರಯಾಣಿಕರ ಸಂಖ್ಯೆಯು ಹೆಚ್ಚಾಗಬೇಕಿದ್ದಲ್ಲಿ ಇನ್ನೂ ನಾಲ್ಕು ವರ್ಷಗಳ ಕಾಯಬೇಕಾಗಬಹುದು" ಎಂದು ಸಂಸ್ಥೆಯು ತಿಳಿಸಿದೆ.
ಚೀನಾದಲ್ಲಿ ಕೊವಿಡ್-19 ಪರಿಸ್ಥಿತಿ ನಿಯಂತ್ರಣ:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಚೀನಾದಲ್ಲಿ ವೇಗವಾಗಿ ನಿಯಂತ್ರಣಕ್ಕೆ ಬಂದಿತು. ಇದರಿಂದ ಆಂತರಿಕ ವಿಮಾನಯಾನ ಸಂಚಾರ, ಸರಕು-ಸೇವೆಗಳ ಸರಬರಾಜುಗೆ ವಿಮಾನಗಳ ಬಳಕೆಯನ್ನು ಆರಂಭಿಸಲಾಗಿದ್ದು, ಚೀನಾದ ವಿಮಾನಯಾನ ಸಂಸ್ಥೆಯ ನಿರ್ವಹಣೆಗೆ ಹೆಚ್ಚು ಅನುಕೂಲವಾಯಿತು ಎಂದು ತಿಳಿದು ಬಂದಿದೆ.
ಇಂಡಿಗೊ ವಿಮಾನಯಾನ ಸಂಸ್ಥೆಯನ್ನು ಖಾಸಗಿ ಕಂಪನಿಯಾಗಿ ಇಂಟರ್ ಗ್ಲೋಬ್ ಎಂಟರ್ಪ್ರೈಸಸ್ನ ರಾಹುಲ್ ಭಾಟಿಯಾ ಮತ್ತು ರಾಕೇಶ್ ಗಂಗ್ವಾಲ್ ಅವರು 2006ರಲ್ಲಿ ಸ್ಥಾಪಿಸಿದರು. ಹರಿಯಾಣದ ಗುರುಗ್ರಾಮ್ ನಲ್ಲಿ ಇಂಡಿಗೋ ಪ್ರಧಾನ ಕಚೇರಿಯಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications