ಪ್ರಿಯಾಂಕಾ ನನ್ನ ಉತ್ತರಾಧಿಕಾರಿ ಎಂದಿದ್ದ ಇಂದಿರಾ ಗಾಂಧಿ!
ನವದೆಹಲಿ, ಅ.21: ಮಾಜಿ ಪ್ರಧಾನಿ, ದಿವಂಗತ ಇಂದಿರಾಗಾಂಧಿ ಅವರು ತಮ್ಮ ಬದುಕಿನ ಅಂತ್ಯ ಕಾಲದಲ್ಲಿ ತಮ್ಮ ಉತ್ತರಾಧಿಕಾರಿಯ ಬಗ್ಗೆ ಸುಳಿವು ನೀಡಿದ್ದರು. ಮೊಮ್ಮಗಳು ಪ್ರಿಯಾಂಕಾ ಗಾಂಧಿ ಭವಿಷ್ಯದ ನಾಯಕಿ ಎಂದಿದ್ದರು ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂಎಲ್ ಫೋತೆದಾರ್ ಹೇಳಿದ್ದಾರೆ.
ಪ್ರಧಾನಿ ಇಂದಿರಾಗಾಂಧಿ ಅವರಿಗೆ ದೀರ್ಘಕಾಲ ರಾಜಕೀಯ ಸಲಹೆಗಾರರಾಗಿದ್ದ ಫೋತೇದಾರ್, ಇಂದಿರಾ ಅವರು ಪ್ರಿಯಾಂಕಾಳಲ್ಲಿ ತಮ್ಮ ಪ್ರತಿಬಿಂಬವನ್ನೇ ಕಂಡಿದ್ದಿರಬಹುದು. ಅದಕ್ಕೇ ಅವರು, ಪ್ರಿಯಾಂಕಾ ಮುಂದೆ ಉತ್ತಮ ನಾಯಕಿಯಾಗಬಲ್ಲಳು ಎಂದು ಹೇಳಿದ್ದರು. ಆಕೆ ಹೇಳಿದ ಪ್ರತಿ ಮಾತುಗಳನ್ನು ನಾನು ದಾಖಲಿಸಿದೆ.
ಹತ್ಯೆಯಾಗುವ ಕೇವಲ ಮೂರು ದಿನಗಳ ಮೊದಲಷ್ಟೇ ಜಮ್ಮು-ಕಾಶ್ಮೀರಕ್ಕೆ ತೆರಳಿದ್ದ ಇಂದಿರಾ, ಅಲ್ಲಿನ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಂಡು ಬಂದಿದ್ದರು. ಅಂದು ಶನಿವಾರ ನಾವು ಕಾಶ್ಮೀರದಲ್ಲಿದ್ದೆವು. ಇಂದಿರಾ ಹಿಂದೂ ಹಾಗೂ ಮುಸಲ್ಮಾನರ ಮಂದಿರಗಳ ದರ್ಶನ ಮಾಡಿದ್ದರು. ದೆಹಲಿಗೆ ಹಿಂದಿರುಗುವಾಗ ಅವರು ಪ್ರಿಯಾಂಕಾ ನನ್ನ ಉತ್ತರಾಧಿಕಾರಿ ಎಂದಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಆಕೆಯಲ್ಲಿ ನಾಯಕತ್ವದ ಗುಣ ಇತ್ತು ಎನ್ನುವುದನ್ನು ಬಲವಾಗಿ ನಂಬಿದ್ದರು ಎಂದಿದ್ದಾರೆ. ಅಲ್ಲದೇ ಅವರು ಹತ್ಯೆಯಾಗುವುದಕ್ಕೂ ಕೆಲವೇ ದಿನಗಳ ಮೊದಲು ತನ್ನನ್ನು ಹತ್ಯೆ ಮಾಡುತ್ತಾರೆನ್ನುವ ಅನುಮಾನ ಅವರನ್ನು ಕಾಡಿತ್ತು ಈ ಬಗ್ಗೆ ಪುಸ್ತಕದಲ್ಲಿ ವಿವರಿಸಿದ್ದೇನೆ ಎಂದು ಫೊತೆದಾರ್ ತಿಳಿಸಿದ್ದಾರೆ.
ಪ್ರಿಯಾಂಕಾ ಸಮರ್ಥ ನಾಯಕಿ: ಇಂದಿರಾಗಾಂಧಿ ಅವರ ಮನದ ಇಂಗಿತವನ್ನು ನಾನು ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ತಿಳಿಸಿದೆ. ನನಗೆ ಇಂದಿರಾಜೀ ಹಾಗೂ ಪ್ರಿಯಾಂಕಾಜೀ ಅವರಲ್ಲಿ ಸಾಮ್ಯತೆ ಕಾಣಿಸುತ್ತದೆ. ಮುಂದಿನ ದಿನಗಳಲ್ಲಿ ಪ್ರಿಯಾಂಕಾ ಅವರು ಸಮರ್ಥ ನಾಯಕಿಯಾಗಿ ಆಡಳಿತ ನಡೆಸುವುದನ್ನು ಕಾಣಬಹುದು ಎಂದು ಫೋತೆದಾರ್ ಹೇಳಿದ್ದಾರೆ.
ಇಂದಿರಾಗಾಂಧಿ ಅವರು ಅಕ್ಟೋಬರ್ 31,1984ರಲ್ಲಿ ನವದೆಹಲಿಯಲ್ಲಿ ಹತ್ಯೆಗೀಡಾದರು. ಇಂದಿರಾಗಾಂಧಿ ಅವರ ರಾಜಕೀಯ ಸಲಹೆಗಾರರಾಗಿದ್ದ ಫೋತೆದಾರ್ ಅವರು 'ಚಿನಾರ್ ಲೀವ್ಸ್' ಹೆಸರಿನಲ್ಲಿ ಅಕ್ಟೋಬರ್ 30ರಂದು ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications