ಭಾರತ- ಚೀನಾ ಯುದ್ಧ? ದೋಕ್ಲಾಂ ಹತ್ತಿರದ ಹಳ್ಳಿಗರ ಸ್ಥಳಾಂತರ
ನವದೆಹಲಿ, ಆಗಸ್ಟ್ 10: ಚೀನಾ- ಭಾರತದ ಮಧ್ಯೆ ಯುದ್ಧ ಸನ್ನಿಹಿತವಾಗುತ್ತಿದೆಯಾ? ದೋಕ್ಲಾಂ ಉದ್ವಿಗ್ನತೆಯ ನಂತರ ಮೊದಲ ಬಾರಿಗೆ ಅಲ್ಲಿಂದ ಮೂವತ್ತೈದು ಕಿಲೋಮೀಟರ್ ದೂರದ ನತಾಂಗ್ ಗ್ರಾಮಸ್ಥರನ್ನು ತಕ್ಷಣವೇ ಸ್ಥಳಾಂತರ ಮಾಡುವಂತೆ ಸೂಚಿಸಲಾಗಿದೆ. ಆ ಸುಳಿವು ಈಗ ಪ್ರಶ್ನೆ ಹುಟ್ಟುಹಾಕಿದೆ.
2007-2017ರ ಮಧ್ಯೆ 37 ಬಾರಿ ಭಾರತಕ್ಕೆ ಕಾಲಿಟ್ಟಿತ್ತು ಚೀನಾ ಸೇನೆ!
ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಸೈನಿಕರ ಗುಂಪುಗಳ ಚಟುವಟಿಕೆ ವಿಪರೀತವಾಗಿದೆ. ಈ ಬಗ್ಗೆ ನ್ಯೂಸ್ 18 ವರದಿ ಮಾಡಿದೆ. ದೋಕ್ಲಾಂನಿಂದ ಸಂಘರ್ಷದ ಬಗ್ಗೆ ಸಂದೇಶಗಳು ರವಾನೆಯಾಗುತ್ತಿವೆ. ಆದರೆ ಮೂಲಗಳ ಪ್ರಕಾರ, ಹಳ್ಳಿಗರನ್ನು ಸ್ಥಳಾಂತರ ಮಾಡುವಂತೆ ಸೂಚನೆ ನೀಡಿರುವುದಕ್ಕೂ ದೋಕ್ಲಾಂ ಬಿಕ್ಕಟ್ಟಿಗೂ ಸಂಬಂಧವಿಲ್ಲ.

ಇದು ಸೈನಿಕರು ನಡೆಸುವ ವಾರ್ಷಿಕ ತಾಲೀಮು. ಯೋಧರು ಸುಕ್ನಾದಿಂದ ದೋಕ್ಲಾಂಗೆ ತೆರಳುತ್ತಾರೆ ಎಂದು ಮೂಲಗಳು ತಿಳಿಸಿವೆ. ಇದು ವಾರ್ಷಿಕವಾಗಿ ನಡೆಯುವ ಯೋಧರ ತಾಲೀಮು ಅಷ್ಟೇ ಎನ್ನಲಾಗಿದೆ.
ಈ ತಾಲೀಮು ಮಾಮೂಲಿ ನಿರ್ವಹಣಾ ನಡೆ ಎಂದಿದೆ ಸೈನ್ಯ. ಈ ಬಗ್ಗೆ ಅಧಿಕಾರಿಗಳು ಮಾತನಾಡಿದ್ದು, ದೋಕ್ಲಾಂ ಸನ್ನಿವೇಶ 'ಯುದ್ಧವೂ ಇಲ್ಲ, ಶಾಂತಿಯೂ ಇಲ್ಲ' ಎಂಬಂತಿದೆ ಎಂದಿದ್ದಾರೆ.
ಈ ಮಧ್ಯೆ ದೋಕ್ಲಾಂನಿಂದ ಹಿಂತಿರುಗುವಂತೆ ಚೀನಾವು ಭಾರತದ ಮೇಲೆ ಒತ್ತಡ ಹೇರುತ್ತಿದೆ. ಚೀನಾವು ಅಲ್ಲಿ ಸೈನ್ಯವನ್ನು ವಾಪಸ್ ಕರೆಸಿಕೊಂಡರೆ ಮಾತ್ರ ಭಾರತವು ಸೇನೆ ವಾಪಸ್ ಕರೆಸಿಕೊಳ್ಳುತ್ತದೆ ಎಂದು ಖಡಾಖಡಿ ಹೇಳಿದೆ. ಜತೆಗೆ ಚೀನಾದ ಮಾಧ್ಯಮಗಳು ಕೂಡ ಈ ವಿಚಾರದಲ್ಲಿ ವರದಿ ಮಾಡುತ್ತಿವೆ.
ಪ್ರತಿ ದಿನವೂ ಯುದ್ಧ ಸಾಧ್ಯತೆ ಬಗ್ಗೆ ವರದಿ ಮಾಡುತ್ತಿದ್ದು, ಭಾರತಕ್ಕೆ 1962ರ ಚೀನಾ ಯುದ್ಧವನ್ನು ನೆನಪಿಸುತ್ತಿವೆ. ಕೇಂದ್ರ ರಕ್ಷಣಾ ಸಚಿವ ಅರುಣ್ ಜೇಟ್ಲಿ, ಇದು 2017ನೇ ಇಸವಿ 1962 ಅಲ್ಲ ಎಂದು ಚೀನಿಯರಿಗೆ ನೆನಪಿಸಿದ್ದಾರೆ. 1962ರ ಯುದ್ಧದಿಂದ ಭಾರತ ಪಾಠ ಕಲಿತಿದೆ. ಈಗ ಹೆಚ್ಚು ಪ್ರಬಲವಾಗಿದೆ ಎಂದಿದ್ದಾರೆ.
ಒನ್ಇಂಡಿಯಾ ನ್ಯೂಸ್
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications