Video: ಉತ್ತರಾಖಂಡ್ ನಲ್ಲಿ ಕಾರ್ಮಿಕರ ರಕ್ಷಿಸಲು ಸುರಂಗಕ್ಕೆ ಇಳಿದ ಐಟಿಬಿಪಿ!
ಡೆಹ್ರಾಡೂನ್, ಫೆಬ್ರವರಿ.09: ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮಪಾತದಿಂದ ಸೃಷ್ಟಿಯಾಗಿರುವ ಪ್ರವಾಹ ಪರಿಸ್ಥಿತಿ ನಡುವೆ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವುದಕ್ಕೆ ಇಂಡೋ-ಟಿಬೆಟಿಯನ್ ಗಡಿ ಪೊಲೀಸರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ.
ಕಗ್ಗತ್ತಲಿನ ಸುರಂಗದಲ್ಲಿ ಹಗ್ಗದ ಸಹಾಯದಿಂದ ಇಳಿದು ಅಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವಲ್ಲಿ ಭದ್ರತಾ ಸಿಬ್ಬಂದಿಯು ನಿರತರಾಗಿದ್ದಾರೆ. ಚಮೋಲಿ ಜಿಲ್ಲೆಯ ಒಂದು ಸುರಂಗದಲ್ಲಿ ಸಿಲುಕಿದ್ದ 12 ಕಾರ್ಮಿಕರನ್ನು ಈಗಾಗಲೇ ರಕ್ಷಿಸಲಾಗಿದೆ. ಕಳೆದ ಜನವರಿ.07ರಂದು ಐಟಿಬಿಪಿ ಸಿಬ್ಬಂದಿಯೊಬ್ಬರು ಸುರಂಗದಲ್ಲಿ ಸಿಲುಕಿದ ಕಾರ್ಮಿಕನಿಗಾಗಿ ಸುರಂಗಕ್ಕಿಳಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಫೆ. 8ರ ರಾತ್ರಿ ಎಂಟು ಗಂಟೆಯವರೆಗೂ 26 ಮೃತದೇಹಗಳು ಪತ್ತೆಯಾಗಿವೆ. 171 ಜನರು ಇನ್ನೂ ಪತ್ತೆಯಾಗಿಲ್ಲ. ಸುಮಾರು 35 ಜನರು ಸುರಂಗದ ಒಳಗೆ ಇದ್ದಾರೆ ಎಂದು ಶಂಕಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.
#WATCH: Indo-Tibetan Border Police personnel rescued people who were trapped in a tunnel in Chamoli on 7th February.
— ANI (@ANI) February 9, 2021
Rescue operation is underway at another tunnel where around 35 people are trapped, as per DGP Uttarakhand.
(Video source: ITBP) pic.twitter.com/x4EexJkjL7
ಉತ್ತರಾಖಂಡ್ ಹಿಮಪಾತದಲ್ಲಿ 26 ಮಂದಿ ಸಾವು:
ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಜೋಶಿಮಠ್ ಪ್ರದೇಶದಲ್ಲಿ ಹಿಮಪರ್ವತ ಸ್ಫೋಟದಿಂದ ಅಲಕ್ ನಂದ್, ದೌಲಿಗಂಗಾ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. 171ಕ್ಕೂ ಅಧಿಕ ಮಂದಿ ಕಾರ್ಮಿಕರು ನಾಪತ್ತೆ ಆಗಿದ್ದಾರೆ. ಉತ್ತರಾಖಂಡ್ ನಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಇಂಡೋ-ಟಿಬೆಟಿಯನ್ ಗಡಿ ಪೊಲೀಸರ ತಂಡವು ಉತ್ತರಾಖಂಡ್ ನ ಹಲವು ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಭಾರತೀಯ ಸೇನಾ ಪಡೆಯ 6 ತಂಡ ಮತ್ತು ನೌಕಾಪಡೆಯ ಆರು ತಂಡವನ್ನು ಕಾರ್ಯಾಚರಣೆಯಲ್ಲಿ ಕೈಜೋಡಿಸಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications