Get Updates
Get notified of breaking news, exclusive insights, and must-see stories!

ಭಜರಂಗದಳ ಕಾರ್ಯಕರ್ತರನ್ನು ಮನಬಂದಂತೆ ತಳಿಸಿದ ಮಧ್ಯಪ್ರದೇಶ ಪೋಲಿಸರು- ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಇಂದೋರ್‌, ಜೂನ್‌ 16: ಪ್ರತಿಭಟನಾ ನಿರತ ಭಜರಂಗ ಕಾರ್ಯಕರ್ತರ ಮೇಲೆ ಮಧ್ಯಪ್ರದೇಶ ಪೊಲೀಸರು ಲಾಟಿಯಿಂದ ಹಲ್ಲೆ ನಡೆಸಿದ್ದಾರೆ. ಇಂದೋರ್ ನಗರದಲ್ಲಿ ಅಕ್ರಮ ಮಾದಕ ದ್ರವ್ಯ ದಂಧೆಯಲ್ಲಿ ತೊಡಗಿರುವವರ ವಿರುದ್ಧ ದೂರು ನೀಡಿದ್ದಕ್ಕಾಗಿ ಸಂಘಟನೆಯ ಸದಸ್ಯರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಇದರ ವಿರುದ್ಧ ಧರಣಿ ನಡೆಸುತ್ತಿದ್ದಾಗ ಪೊಲೀಸರು ಭಜರಂಗದಳದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿ 11 ಮಂದಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ಭಜರಂಗದಳದ ಕಾರ್ಯಕರ್ತರು ನಗರದ ಜನನಿಬಿಡ ಜಂಕ್ಷನ್ ಪಲೇಶಿಯಾ ಚೌಕದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Indore Police Lathi-charged On Bajrang Dal Activist While Protesting in Citys Busy Junction

ಪೊಲೀಸ್ ಲಾಠಿ ಚಾರ್ಜ್‌ನಲ್ಲಿ ಕೆಲವು ಭಜರಂಗದಳ ಸದಸ್ಯರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಪ್ರತಿಭಟನೆ ಮತ್ತು ಪೊಲೀಸ್ ಕ್ರಮದ ಬಗ್ಗೆ ತನಿಖೆಗೆ ಆದೇಶಿಸಿದೆ.

ಭಜರಂಗದಳದ ಕಾರ್ಯಕರ್ತರ ಗುಂಪು ಯಾವುದೇ ಅನುಮತಿಯಿಲ್ಲದೆ ದಟ್ಟಣೆಯ ಜಾಗದಲ್ಲಿ ಏಕಾಏಕಿ ಜಮಾಯಿಸಿ ಧರಣಿ ಪ್ರತಿಭಟನೆ ನಡೆಸಿತು. ಇದು ನಾಲ್ಕೂ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್‌ಗೆ ಕಾರಣವಾಯಿತು. ಪೊಲೀಸರು ಪದೇ ಪದೇ ಮನವಿ ಮಾಡಿದರೂ ಪ್ರತಿಭಟನಾಕಾರರು ಮಣಿಯಲು ನಿರಾಕರಿಸಿದರು. ಅವರನ್ನು ಸ್ಥಳಾಂತರಿಸಲಾಯಿತು. ಲಘು ಲಾಟಿ ಬಲವನ್ನು ಬಳಸಿ ಸ್ಥಳದಿಂದ ಅವರನ್ನು ಹೊರ ಕಳಿಸಲಾಯಿತು ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಧರ್ಮೇಂದ್ರ ಸಿಂಗ್ ಭಡೋರಿಯಾ ಹೇಳಿದ್ದಾರೆ.

ಇವರಲ್ಲಿ ಹನ್ನೊಂದು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ಹೇಳಿದರು.

'ಚಕ್ಕಾ ಜಾಮ್' ಪ್ರತಿಭಟನೆಯ ವೇಳೆ ಭಜರಂಗದಳದ ಕಾರ್ಯಕರ್ತರನ್ನು ನಿಯಂತ್ರಿಸಲು ಯತ್ನಿಸುತ್ತಿದ್ದಾಗ ಐವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು ಎಂದು ವರದಿಯಾಗಿದೆ.

ಈ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಭಜರಂಗದಳದ ಕಾರ್ಯಕರ್ತರು ಗಂಟೆಗಟ್ಟಲೆ ಧರಣಿ ನಡೆಸಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು. ಪಲಾಸಿಯಾ ಡಿವೈಡರ್‌ನಲ್ಲಿ ವಾಹನಗಳ ಉದ್ದನೆಯ ಸರತಿ ಸಾಲಿನಲ್ಲಿ ನಿಂತಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪೊಲೀಸ್ ಲಾಠಿ ಚಾರ್ಜ್‌ನಲ್ಲಿ 11 ಭಜರಂಗದಳ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ರಾಜ್ಯದ ಆಡಳಿತಾರೂಢ ಬಿಜೆಪಿ ಹೇಳಿದೆ.

ಭಜರಂಗದಳದ ಕಾರ್ಯಕರ್ತರ ಮೇಲೆ ಪೊಲೀಸರು ಕ್ರೂರವಾಗಿ ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದಾಗಿ 11 ಜನರು ಗಾಯಗೊಂಡಿದ್ದಾರೆ ಎಂದು ಬಿಜೆಪಿಯ ಇಂದೋರ್ ಘಟಕದ ಅಧ್ಯಕ್ಷ ಗೌರವ್ ರಾಂದಿವ್ ಪಿಟಿಐಗೆ ತಿಳಿಸಿದ್ದಾರೆ.

ಘಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಏತನ್ಮಧ್ಯೆ, ಶುಕ್ರವಾರ ಭೋಪಾಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಗೃಹ ಸಚಿವ ಮತ್ತು ಸರ್ಕಾರದ ವಕ್ತಾರ ನರೋತ್ತಮ್ ಮಿಶ್ರಾ ಅವರು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

'ನಾವು ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ಕ್ರಮದ ಬಗ್ಗೆ ಗಮನಹರಿಸಿದ್ದೇವೆ. ಅದಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮಟ್ಟದ ಅಧಿಕಾರಿಯನ್ನು ಕಳುಹಿಸಲು ನಿರ್ಧರಿಸಿದ್ದೇವೆ' ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+