ಟೊಮ್ಯಾಟೋ ಕಾಯಲು ಭದ್ರತಾ ಸಿಬ್ಬಂದಿ
ಇಂದೋರ್, ಜುಲೈ 23: ಟೊಮ್ಯಾಟೊ ಬೆಲೆ ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಒಂದು ಕೆ.ಜಿಗೆ ನೂರರ ಗಡಿ ದಾಟಿದೆ. ಜತೆಗೆ ಅಂಗಡಿಕಾರರಿಗೆ ಕಳ್ಳರ ಭೀತಿ ಎದುರಾಗಿದೆ. ಅಲ್ಪಾಯುಷಿ ಟೊಮ್ಯಾಟೋಗೆ ಈಗ ಎಲ್ಲಿಲ್ಲದ ಬೆಲೆ ಬಂದಿದೆ.
ಮುಂಬೈನ ದಾಹಿಸರ್ ಮಾರ್ಕೆಟ್ ನಲ್ಲಿ 900 ಕೆ.ಜಿ ಟೊಮೆಟೊಗಳನ್ನು ಕಳ್ಳರು ಕದ್ದ ಸುದ್ದಿ ಹಬ್ಬಿದ ಬೆನ್ನಲ್ಲೇ ಮಧ್ಯಪ್ರದೇಶದ ಇಂದೋರ್ ನಲ್ಲಿ ಭಾರಿ ಆತಂಕ ಶುರುವಾಗಿದೆ. ಜುಲೈ 20ರಂದು ಮುಂಬೈನ ದಾಹಿಸರ್ ಮಾರ್ಕೆಟ್ನಲ್ಲಿ 900 ಕೆ.ಜಿ ಟೊಮ್ಯಾಟೋ ಕದ್ದವರ ಸುಳಿವು ಇನ್ನೂ ಸಿಕ್ಕಿಲ್ಲ.

ಈ ನಡುವೆ ಇಂದೋರ್ ನಲ್ಲಿ ಆತಂಕಕ್ಕೊಳಗಾಗಿರುವ ವ್ಯಾಪಾರಿಗಳು ಟೊಮೆಟೊಗೆ ಬಂದೂಕುಧಾರಿಯ ಭದ್ರತೆ ನೀಡಿದ್ದಾರೆ. ಮಾರ್ಕೆಟ್ ಗೆ ಟೊಮೆಟೊ ಟ್ರಕ್ ಗಳು ಬರುತ್ತಿದಂತೆ ಭದ್ರತಾ ಸಿಬ್ಬಂದಿ, ಟೊಮೆಟೊವನ್ನು ಗನ್ ಗಳನ್ನು ಹಿಡಿದುಕೊಂಡು ಭದ್ರತೆ ನೀಡುತ್ತಿದ್ದಾರೆ.
ಕರ್ನಾಟಕ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬೆಂಗಾಲ ಹಾಗೂ ಒಡಿಶಾ ರಾಜ್ಯಗಳು ದೇಶದಲ್ಲಿ ಹೆಚ್ಚು ಟೊಮ್ಯಾಟೊ ಉತ್ಪಾದಿಸುವ ರಾಜ್ಯಗಳಾಗಿವೆ.
Madhya Pradesh: Men with arms guard tomatoes at Indore vegetable market due to fear of them being stolen as prices soar. pic.twitter.com/czyCAPRcqE
— ANI (@ANI_news) July 22, 2017
ಸರಿಯಾದ ಪೂರೈಕೆ ಇಲ್ಲದ ಕಾರಣ, ಮಾರುಕಟ್ಟೆಯಲ್ಲಿ ದಿಢೀರ್ ಆಗಿ ಬೆಲೆ ವ್ಯತ್ಯಾಸ ಕಂಡು ಬಂದಿದೆ. ಇನ್ನು ಹರ್ಯಾಣ, ಪಂಜಾಬ್ ಸೇರಿದಂತೆ ಹಲವೆಡೆ ಅಕಾಲಿಕ ಮಳೆಗೆ ಟೊಮ್ಯಾಟೊ ಬೆಳೆ ಹಾಳಾಗಿದೆ. ಉತ್ತರ ಭಾರತದಲ್ಲಿ ಕಳೆದ ತಿಂಗಳು ಬಿಸಿಲಿಗೂ ಟೊಮ್ಯಾಟೊ ಬಾಡಿ ಹೋಗಿದೆ.
ಈರುಳ್ಳಿಗೆ ಹೋಲಿಸಿದರೆ ಟೊಮ್ಯಾಟೊಗೆ ಆಯಸ್ಸು ಕಮ್ಮಿ. ಚಟ್ನಿ, ಸಾರು, ಜಾಮ್, ಗೊಜ್ಜು ಹೀಗೆ ಮಾರುಕಟ್ಟೆಯಿಂದ ತಂದ ದಿನವೇ ಬಳಸುವುದು ಮಾಮೂಲಿ. ಹೀಗಾಗಿ ಕಳೆದ ವಾರದ ಟೊಮ್ಯಾಟೊ ಯಾರು ಇಟ್ಟುಕೊಳ್ಳುವುದಿಲ್ಲ. ಹೀಗಾಗಿ ಮಾರಾಟಗಾರರು ಹಾಗೂ ಗ್ರಾಹಕರಿಬ್ಬರಿಗೂ ಆತಂಕ ಸಹಜವಾಗಿದೆ.(ಎಎನ್ಐ)
-
LPG ಪೂರೈಕೆ ವ್ಯತ್ಯಯ: ಬೆಂಗಳೂರಿನ ಪಿಜಿಗಳಲ್ಲೂ ಆಹಾರ ಪೂರೈಕೆ ಸ್ಥಗಿತದ ಭೀತಿ, ಆತಂಕದಲ್ಲಿ 10 ಲಕ್ಷ ಮಂದಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications