ಕಚ್ಚಾ ತೈಲ ಬೆಲೆ ಏರಿದರೂ ಹಣದುಬ್ಬರ ಹತೋಟಿಯಲ್ಲಿ, ಗ್ರಾಹಕರು ನಿರಾಳ
ನವದೆಹಲಿ, ಅಕ್ಟೋಬರ್ 17: ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಏರಿಕೆ, ಡಾಲರ್ ವಿರುದ್ಧ ರುಪಾಯಿ ಮೌಲ್ಯದಲ್ಲಿನ ಕುಸಿತ ಇವೆರಡರಿಂದ ಉಂಟಾಗಬಹುದಾದ ಹಣದುಬ್ಬರವನ್ನು ನಿಯಂತ್ರಣದಲ್ಲಿ ಇಡಲು ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ.
ಈ ಸನ್ನಿವೇಶದಲ್ಲಿ ಉತ್ತಮ ಬೆಳೆ ಹಾಗೂ ಕೃಷಿ ಇಳುವರಿಯಲ್ಲಿನ ಹೆಚ್ಚಳದ ಕಾರಣಕ್ಕೆ ಆಹಾರ ಧಾನ್ಯಗಳ ಬೆಲೆ ಕಡಿಮೆ ಇದೆ. ಭಾರತದ ಹೋಲ್ ಸೇಲ್ ಪ್ರೈಸ್ ಇಂಡೆಕ್ಸ್ (WPI) ಅಂದರೆ ಸಗಡು ಮಾರಾಟ ದರ ಸೂಚ್ಯಂಕವು ಈ ವರ್ಷ ಸೆಪ್ಟೆಂಬರ್ ನಲ್ಲಿ 5.13% ತಲುಪಿತ್ತು. ಇದೇ ವರ್ಷದ ಆಗಸ್ಟ್ ನಲ್ಲಿ ಆ ಪ್ರಮಾಣ 4.53% ಇತ್ತು.
ಕಳೆದ ವರ್ಷದ ಸೆಪ್ಟೆಂಬರ್ ತ್ರೈ ಮಾಸಿಕಕ್ಕೆ ಹೋಲಿಸಿದರೆ ವಾರ್ಷಿಕ 4.98% ನಷ್ಟು ಏರಿಕೆ ಕಂಡಿದೆ. ಗ್ರಾಹಕ ದರ ಸೂಚ್ಯಂಕವು ಇದೇ ಅವಧಿಯಲ್ಲಿ 3.88% ಏರಿದೆ. ಕಳೆದ ಮೂರು ಅವಧಿಯಲ್ಲಿ 4%ಗಿಂತ ಹೆಚ್ಚು ಏರಿಕೆ ಆಗಿತ್ತು. ಹಣದುಬ್ಬರ ಏರಿಕೆ ಆಗಿದ್ದು ಹೌದಾದರೂ ಅದು ಅಪಾಯಕಾರಿ ಮಟ್ಟವೇನೂ ತಲುಪಿಲ್ಲ.

ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ಡಾಲರ್ ವಿರುದ್ಧ ಕುಸಿಯುತ್ತಿರುವ ರುಪಾಯಿ ಮೌಲ್ಯದ ಇಂದಿನ ಸನ್ನಿವೇಶದಲ್ಲಿ ಇಂಥ ಬೆಳವಣಿಗೆಯನ್ನು ಸಕಾರಾತ್ಮಕ ಎಂದೇ ಪರಿಗಣಿಸಬಹುದು. ಹಣದುಬ್ಬರ ಅಂದರೇನು ಅನ್ನೋದನ್ನು ಬಹಳ ಸರಳವಾಗಿ ವಿವರಿಸಬೇಕು ಅಂದರೆ, ಮಾರುಕಟ್ಟೆಗೆ ಹೋಗಿ ನಾವು ವಸ್ತುಗಳನ್ನು ಖರೀದಿಸುತ್ತಿವಲ್ಲಾ ಅವುಗಳ ಬೆಲೆ.
ಹಣದುಬ್ಬರ ಸರಿಯಾದ ಸ್ಥಿತಿಯಲ್ಲಿದೆ ಅಂದರೆ, ಬೆಲೆ ಏರಿಕೆ ಮೇಲೆ ಸರಕಾರದ ನಿಯಂತ್ರಣ ಇದೆ ಅಂತಲೇ ಅರ್ಥ. ಗ್ರಾಹಕರಿಗೆ ಇದು ಶುಭ ಸುದ್ದಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಖರ್ಚು ಮಾಡುವ ವಿಚಾರದಲ್ಲಿ ಸರಕಾರಕ್ಕೆ ಸಮಸ್ಯೆ ಆಗುತ್ತದೆ. ಯಾವಾಗ ಆಹಾರ ಪದಾರ್ಥಗಳ ಬೆಲೆ ಕಡಿಮೆ ಇರುತ್ತದೋ ಆಗ ರೈತರ ನೆರವಿಗೆ ಸರಕಾರ ಬಂದು, ಕೆಲವು ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕಾಗುತ್ತದೆ.

ಕನಿಷ್ಠ ಬೆಂಬಲ ಬೆಲೆ ನೀತಿಗೆ ಈಗಿನ ಮೋದಿ ಸರಕಾರ ಜಾರಿಗೆ ಬದ್ಧವಾಗಿದ್ದು, ಇನ್ನು ನಾಲ್ಕು ವರ್ಷದಲ್ಲಿ ಕೃಷಿ ಆದಾಯವನ್ನು ದ್ವಿಗುಣಗೊಳಿಸುವ ಭರವಸೆ ಗುರಿ ಹಾಕಿಕೊಂಡಿದೆ. ಬಜೆಟ್ ನ ವಿಚಾರ ಪಕ್ಕಕ್ಕಿಟ್ಟು ಹೇಳಬೇಕು ಅಂದರೆ ಹಣದುಬ್ಬರ ನಿಯಂತ್ರಣದಲ್ಲಿದೆ. ಇದರಿಂದ ಗ್ರಾಹಕರಿಗೆ ಒಳ್ಳೆಯದು.
ಭತ್ತ, ಹಾಲು, ಎಣ್ಣೆಕಾಳುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಬೇಳೆ ಕಾಳುಗಳು, ಗೋಧಿ ಮತ್ತು ಆಲೂಗಡ್ಡೆಯ ಬೆಲೆಯಲ್ಲಿ ಕ್ರಮವಾಗಿ 5.54%, 8.87% ಹಾಗೂ 80% ಏರಿಕೆ ಆಗಿದೆ. ಇದಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಕಳೆದ ವಾರ ಬಿಡುಗಡೆ ಮಾಡಲಾಗಿದೆ. ಈರುಳ್ಳಿ, ಮೊಟ್ಟೆ ಹಾಗೂ ಮಾಂಸದ ಬೆಲೆ ಏರಿಕೆ ಪ್ರಮಾಣದಲ್ಲಿ ಇಳಿಕೆ ಆಗಿದೆ.

ಯಾವಾಗ ಕಚ್ಚಾ ತೈಲ ಬೆಲೆ ಏರುತ್ತಲೇ ಹೋಯಿತೋ ಹಣದುಬ್ಬರ ಹೆಚ್ಚಬಹುದು ಎಂದೇ ಹಲವರು ಅಂದಾಜು ಮಾಡಿದ್ದರು. ತೈಲ ಬೆಲೆ ಮೇಲಕ್ಕೋ ಅಥವಾ ಕೆಳಕ್ಕೋ ಯಾವ ದಿಕ್ಕಿನಲ್ಲಿ ಸಾಗುತ್ತದೋ ಹಣದುಬ್ಬರ ದರ ಅದನ್ನೇ ಅನುಸರಿಸುತ್ತದೆ. ತೈಲ ಬೆಲೆ ಏರಿಕೆಯಿಂದ ವಿತ್ತೀಯ ಕೊರತೆ ಮೇಲೆ ಪರಿಣಾಮ ಆಗುತ್ತದೆ. ಹಣಕಾಸು ನೀತಿ ಸೇರಿ ಒಟ್ಟಾರೆ ಆರ್ಥಿಕ ನೀತಿ ಮೇಲೂ ಪರಿಣಾಮ ಆಗುತ್ತದೆ.
ಹಣದುಬ್ಬರ ದರ ವೇಗವಾಗಿ ಏರಿಕೆ ಆಗುತ್ತಿತ್ತು. ಗ್ರಾಹಕ ದರ ಸೂಚ್ಯಂಕ ಎರಡಂಕಿಯಲ್ಲಿ ಏರುತ್ತಿತ್ತು. ಅದು ಕಳೆದ ಲೋಕಸಭೆ ಚುನಾವಣೆ ಮುನ್ನ. ಆಹಾರ ಪದಾರ್ಥಗಳ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಲೇ ಹೋಗಿತ್ತು. ಈ ಹಿಂದೆ ಸಗಟು ದೂರ ಸೂಚ್ಯಂಕ ಹಣದುಬ್ಬರವನ್ನು ಹಣಕಾಸು ನೀತಿಗೆ ಆರ್ ಬಿಐ ಮಾರ್ಗದರ್ಶಿಯಾಗಿ ಬಳಸುತ್ತಿತ್ತು. ಈಗ ಗ್ರಾಹಕ ದರ ಸೂಚ್ಯಂಕವನ್ನು ತೆಗೆದುಕೊಳ್ಳುತ್ತಿದೆ. ಅಂದರೆ ಗ್ರಾಹಕರಿಗೆ ಗ್ರಾಹಕ ದರ ಸೂಚ್ಯಂಕವು ನಿಯಂತ್ರಣದಲ್ಲಿರುವುದು ಬಹಳ ಮುಖ್ಯ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications