Tirupati Tirumala: ತಿರುಮಲ ಭಕ್ತಾದಿಗಳಿಗೆ ಟಿಟಿಡಿಯಿಂದ ಗುಡ್ ನ್ಯೂಸ್, ಇನ್ಮುಂದೆ ಸುಲಭವಾಗಿ ಲಭ್ಯವಾಗಲಿದೆ ದೇವಸ್ಥಾನದ ಮಾಹಿತಿ
ತಿರುಮಲಕ್ಕೆ ಹೋಗುವ ಭಕ್ತಾದಿಗಳಿಗೆ ಅನುಕೂಲವಾಗಲು ಟಿಟಿಡಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಸ್ಥಳೀಯ ದೇವಾಲಯಗಳು ಮತ್ತು ಸಂಯೋಜಿತ ದೇವಾಲಯಗಳ ಮಾಹಿತಿಯನ್ನು ಭಕ್ತರಿಗೆ ಲಭ್ಯವಾಗುವಂತೆ ಮಾಡಲು ಟಿಟಿಡಿ ಯೋಚಿಸಿದೆ.
ಈ ಹಿನ್ನೆಲೆಯಲ್ಲಿ ದೇವಸ್ಥಾನದ ಎಲ್ಲಾ ವಿವರಗಳು ವೆಬ್ಸೈಟ್ನಲ್ಲಿ ಅಪ್ಡೇಟ್ ಆಗಬೇಕು ಎಂದು ಟಿಟಿಡಿ ಇಒ ಧರ್ಮಾ ರೆಡ್ಡಿ ತಿಳಿಸಿದ್ದಾರೆ. ಅಂದರೆ ದೇವಸ್ಥಾನದಲ್ಲಿ ನಡೆಯುವ ಪೂಜೆ, ವಿಶೇಷ ದಿನಗಳ ಬಗ್ಗೆ ಮಾಹಿತಿಯನ್ನು ಭಕ್ತರಿಗೆ ಒದಗಿಸಲು ಇದು ಅನುಕೂಲಕರವಾಗಿದೆ. ತಿರುಮಲಕ್ಕೆ ಹೋಗುವ ಭಕ್ತರಿಗೆ ಪ್ರಮುಖ ಸೂಚನೆಯನ್ನು ನೀಡಲು ಇದು ಸಹಾಯವಾಗಲಿದೆ.

ಜೊತೆಗೆ ಟಿಟಿಡಿ ಸ್ಥಳೀಯ ದೇವಾಲಯಗಳು ಮತ್ತು ತಿರುಪತಿ ಹಾಗೂ ಇತರ ಪ್ರದೇಶಗಳಲ್ಲಿನ ಸಂಯೋಜಿತ ದೇವಾಲಯಗಳಿಗೆ ವ್ಯಾಪಕ ಪ್ರಚಾರ ನೀಡುವ ಸಲುವಾಗಿ ಎಲ್ಲಾ ವಿವರಗಳೊಂದಿಗೆ ವೆಬ್ಸೈಟ್ ಅನ್ನು ನವೀಕರಿಸುವಂತೆ ಟಿಟಿಡಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಮಂಗಳವಾರ ತಿರುಪತಿಯ ಟಿಟಿಡಿ ಆಡಳಿತ ಭವನದಲ್ಲಿ ಇಒ ಸ್ಥಳೀಯ ದೇವಸ್ಥಾನಗಳ ಪರಿಶೀಲನೆ ನಡೆಸಿದರು.
ಟಿಟಿಡಿಯಲ್ಲಿ 60 ಕ್ಕೂ ಹೆಚ್ಚು ಸ್ಥಳೀಯ ದೇವಾಲಯಗಳು ಮತ್ತು ಸಂಯೋಜಿತ ದೇವಾಲಯಗಳಿವೆ. ಇವುಗಳಿಗೆ ಸಂಬಂಧಿಸಿದ ಸ್ಥಳ, ಸೇವೆಗಳು, ದರ್ಶನ ಸಮಯ ಮತ್ತು ಇತರ ಸೌಲಭ್ಯಗಳ ಬಗ್ಗೆ ವೆಬ್ಸೈಟ್ ಮೂಲಕ ಭಕ್ತರಿಗೆ ತಿಳಿಸಲು ಟಿಟಿಡಿ ತಿಳಿಸಿದೆ.
ಈ ಹಿಂದೆ ಕರಪತ್ರಗಳು ಹಾಗೂ ಪ್ರಚಾರ ಸಾಮಗ್ರಿಗಳನ್ನು ಭಕ್ತರಿಗೆ ವಿವಿಧ ರೀತಿಯಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮಾಧ್ಯಮದತ್ತ ಒಲವು ತೋರುತ್ತಿರುವ ಹಿನ್ನೆಲೆಯಲ್ಲಿ ವೆಬ್ ಸೈಟ್ ಆಧುನೀಕರಣಗೊಳಿಸಲು ಸೂಚಿಸಲಾಗಿದೆ. ಎಸ್ವಿಬಿಸಿ ಮೂಲಕ ದೇವಾಲಯದ ವಿಶಿಷ್ಟತೆಗೆ ಸಂಬಂಧಿಸಿದ ಕಿರು ವಿಡಿಯೋ ತುಣುಕುಗಳನ್ನು ಮಾಡಿ ವಿವಿಧ ಮಾಧ್ಯಮಗಳ ಮೂಲಕ ಜನಸಾಮಾನ್ಯರಿಗೆ ತಲುಪಿಸಲು ತಿಳಿಸಲಾಯಿತು. ಆ ಮೂಲಕ ದೇವಸ್ಥಾನಗಳ ಬಗ್ಗೆ ಹೆಚ್ಚು ಜನರಿಗೆ ತಿಳಿಯುತ್ತದೆ ಎಂಬುದು ಉದ್ದೇಶವಾಗಿದೆ.
ಶ್ರೀವಾರಿ ದೇವಸ್ಥಾನದಲ್ಲಿ ಅಧ್ಯಯನ ಉತ್ಸವಗಳು ಪ್ರಾರಂಭ
ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ 25 ದಿನಗಳ ಅಧ್ಯಯನ ಮಹೋತ್ಸವ ಮಂಗಳವಾರ ಆರಂಭವಾಯಿತು. ಇದರ ಅಂಗವಾಗಿ ಸಂಜೆ 7.30ರಿಂದ 8.30ರವರೆಗೆ ರಂಗನಾಯಕುಲ ಮಂಟಪದಲ್ಲಿ ಅಧ್ಯಾಯನೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಧನುರ್ಮಾಸದ ವೈಕುಂಠ ಏಕಾದಶಿಯ 11 ದಿನಗಳ ಮೊದಲು ಶ್ರೀವಾರಿಯ ಸನ್ನಿಧಿಯಲ್ಲಿ ಅಧ್ಯಯನ ಮಹೋತ್ಸವ ನಡೆಸುವುದು ವಾಡಿಕೆ ಇದೆ.
ಅದ್ಧೂರಿಯಾಗಿ ನೆರವೇರಿದ ಕಪಿಲೇಶ್ವರ ದೇವಸ್ಥಾನದಲ್ಲಿ ಹೋಮ ಮಹೋತ್ಸವ
ಕಾರ್ತಿಕ ಮಾಸದ ನಿಮಿತ್ತ ತಿರುಪತಿಯ ಕಪಿಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಒಂದು ತಿಂಗಳ ಹೋಮ ಮಹೋತ್ಸವ ಮಂಗಳವಾರ ಅದ್ಧೂರಿಯಾಗಿ ನೆರವೇರಿತು. ಬೆಳಗ್ಗೆಚಂಡಿಕೇಶ್ವರ ಸ್ವಾಮಿಯ ಹೋಮ ನಡೆಯಿತು. ಬಳಿಕ ಮಹಾಪೂರ್ಣಾಹುತಿ, ಕಲಶ ಉದ್ವಾಸನೆ, ಮಹಾಶಾಂತಿ ಅಭಿಷೇಕ, ಕಲಶಾಭಿಷೇಕ, ತ್ರಿಶೂಲಸ್ನಾನ, ಅಂಕುರ ವಿಸರ್ಜನ ಕಾರ್ಯಕ್ರಮ ಜರುಗಿತು. ಸಂಜೆ ಲಕ್ಷದೀಪಪಾರಾಧನೆ ನಂತರ ಪಂಚಮೂರ್ತಿಗಳನ್ನು ನಗರದ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗುತ್ತದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications