ಮೋದಿ ಸರಕಾರ ಸೂಕ್ಷ್ಮತೆ ಕಳೆದುಕೊಂಡಿದೆ : ರಾಹುಲ್
ನವದೆಹಲಿ, ಜುಲೈ 03 : "ವಿಕಲಚೇತನರ ಗಾಲಿಕುರ್ಚಿ, ಬ್ರೈಲ್ ಟೈಪ್ ರೈಟರ್ ಮುಂತಾದ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆಯನ್ನು ಹೇರಿರುವುದು ಇಂಥ ದುರ್ಬಲ ವರ್ಗದ ಬಗೆಗೆ ನರೇಂದ್ರ ಮೋದಿ ಸರಕಾರ ಸೂಕ್ಷ್ಮತೆ ಕಳೆದುಕೊಂಡಿರುವುದು ಗೊತ್ತಾಗುತ್ತದೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ವಿಕಲಚೇತನರಿಗೆ ಬೇಕಾಗುವ ಈ ಪರಿಕರಗಳ ಮೇಲೆ ಹೇರಲಾಗಿರುವ 'ವಿಕಲಚೇತನ ತೆರಿಗೆ'ಯನ್ನು ಕೂಡಲೆ ಹಿಂಪಡೆಯಬೇಕು. ಇಲ್ಲದಿದ್ದರೆ, ಲಕ್ಷಾಂತರ ವಿಕಲಚೇತನರು ಮತ್ತಷ್ಟು ಸಂಕಷ್ಟಕ್ಕೀಡಾಗುತ್ತಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ಟ್ವೀಟ್ ಮಾಡಿದ್ದಾರೆ.

ಜಿಎಸ್ಟಿಯನ್ನು ಜಾರಿಗೆ ತಂದು ಇಂಥ ಅವಲಂಬಿತ ವ್ಯಕ್ತಿಗಳ ಕೈಹಿಡಿಯುವ ಬದಲು ನರೇಂದ್ರ ಮೋದಿ ಸರಕಾರ ಕೈಬಿಟ್ಟಿದೆ. ಗಾಲಿ ಕುರ್ಚಿ, ಬ್ರೈಲ್ ಟೈಪ್ ರೈಟರ್, ಬ್ರೈಲ್ ಪೇಪರ್ ಮುಂತಾದ ವಸ್ತುಗಳ ಮೇಲೆ ಶೇ.5, ಶೇ.12 ಮತ್ತು ಶೇ.18ರಷ್ಟು ತೆರಿಗೆಯನ್ನು ವಿಧಿಸಲಾಗಿದೆ.
ಬ್ರೈಲ್ ಟೈಪ್ ರೈಟರ್ ಮೇಲೆ ಶೇ.18ರಷ್ಟು, ಬ್ರೈಲ್ ಪೇಪರ್ ಮೇಲೆ ಶೇ.12ರಷ್ಟು, ಗಾಲಿ ಕುರ್ಚಿ ಮತ್ತು ತತ್ ಸಂಬಂಧಿ ವಸ್ತುಗಳ ಮೇಲೆ ಶೇ.5ರಷ್ಟು, ಶ್ರವಣ ಸಾಧನಗಳ ಮೇಲೆ ಶೇ.12ರಷ್ಟು ತೆರಿಗೆಯನ್ನು ಹೇರಲಾಗಿದೆ. ಜಿಎಸ್ಟಿ ಜಾರಿಯಾಗುವ ಮುನ್ನ ಈ ವಸ್ತುಗಳನ್ನು ತೆರಿಗೆಯಿಂದ ಮುಕ್ತಗೊಳಿಸಲಾಗಿತ್ತು.
Youth Congress completely shares the concerns raised by Disability Rights Group on GST and demands rollback #RollbackDisabilityTax pic.twitter.com/uTF9szVrfh
— Youth Congress (@IYC) July 3, 2017
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications