Breaking: ಅಂತರ್ಜಾತಿ ವಿವಾಹ, ಬ್ರಾಹ್ಮಣನ ಶವ ಮುಟ್ಟದ ಗ್ರಾಮಸ್ಥರು!
ಗುವಾಹಟಿ, ಆಗಸ್ಟ್ 12: ಮೂರು ದಶಕಗಳ ಹಿಂದೆ ತನ್ನ ಜಾತಿಯ ಹೊರತಾಗಿ ಬೇರೆ ಜಾತಿಯ ಮಹಿಳೆಯನ್ನು ಮದುವೆಯಾಗಿದ್ದ ಬ್ರಾಹ್ಮಣ ವ್ಯಕ್ತಿಯ ಮೃತದೇಹಕ್ಕೆ ಅಂತ್ಯಸಂಸ್ಕಾರ ಮಾಡಲು ಗ್ರಾಮಸ್ಥರು ಒಪ್ಪದಿರುವ ಘಟನೆ ಅಸ್ಸಾಂನ ದರಾಂಗ್ ಜಿಲ್ಲೆಯಲ್ಲಿ ನಡೆದಿದೆ.
ಶವವನ್ನು ಮುಟ್ಟಲು ಗ್ರಾಮಸ್ಥರು ನಿರಾಕರಿಸಿದ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಸಹೋದರ ನದಿಯ ದಡದಲ್ಲಿ ಅಂತ್ಯಕ್ರಿಯೆ ಮಾಡದೆಯೇ ಸಮಾಧಿ ಮಾಡಿದ್ದಾರೆ. ಈಗ ಮಧ್ಯ ಅಸ್ಸಾಂನ ದರಾಂಗ್ ಜಿಲ್ಲೆಯ ಅಧಿಕಾರಿಗಳು ಶವವನ್ನು ಹೊರತೆಗೆದಿದ್ದಾರೆ.
60 ವರ್ಷದ ಮೃತನ ಕುಟುಂಬದವರ ಆಶಯದಂತೆ ಹಿಂದೂ ಧಾರ್ಮಿಕ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ದರಾಂಗ್ ಜಿಲ್ಲಾಧಿಕಾರಿ ಪ್ರಣಬ್ ಕುಮಾರ್ ಶರ್ಮಾ ತಿಳಿಸಿದ್ದಾರೆ.

ಅತುಲ್ ಶರ್ಮಾ ಎಂಬುವವರು 27 ವರ್ಷಗಳ ಹಿಂದೆ ರಾಜ್ಯದ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿರುವ ಕೋಚ್ ಸಮುದಾಯದ ಪ್ರಣಿತಾ ದೇವಿ ಎಂಬುವವರನ್ನು ವಿವಾಹವಾಗಿದ್ದರು. ಅವರ ಮದುವೆಯ ನಂತರ, ಅತುಲ್ ಶರ್ಮಾ ಮತ್ತು ಅವರ ಇಡೀ ಕುಟುಂಬವನ್ನು ಗ್ರಾಮದಿಂದ ಬಹಿಷ್ಕರಿಸಲಾಗಿದೆ. ಗ್ರಾಮದಲ್ಲಿ ನಡೆಯುವ ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿದೆ.
"ಬುಧವಾರ ರಾತ್ರಿ ನನ್ನ ಪತಿ ತೀರಿಕೊಂಡ ನಂತರ, ಬೆಳಿಗ್ಗೆ ನಾನು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದೇನೆ. ಆದರೆ ಅವರು ನನ್ನ ಪತಿಯ ದೇಹವನ್ನು ಮುಟ್ಟುವುದಿಲ್ಲ ಮತ್ತು ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದರು. ನಾನು ಕೋಚ್ ಸಮುದಾಯದವಳು ಎಂಬ ಕಾರಣಕ್ಕೆ ನನ್ನ ಪತಿ ಬ್ರಾಹ್ಮಣನಾಗಿದ್ದರೂ ಗ್ರಾಮಸ್ಥರು ಅವರನ್ನು ಮುಟ್ಟಲಿಲ್ಲ" ಎಂದು ಪ್ರಣಿತಾ ದೇವಿ ಸುದ್ದಿಗಾರರಿಗೆ ತಿಳಿಸಿದರು.
"ಗ್ರಾಮಸ್ಥರು ಯಾವುದೇ ಸಹಾಯವನ್ನು ಮಾಡಲಿಲ್ಲ. ಆಗ ನನ್ನ ಗಂಡನ ಸಹೋದರರೊಬ್ಬರು ಶವವನ್ನು ಹತ್ತಿರದ ನದಿಯ ದಡಕ್ಕೆ ತೆಗೆದುಕೊಂಡು ಹೋಗಿ ಹೂಳಿದರು. ನನ್ನ ಪತಿಯ ಅಂತ್ಯಸಂಸ್ಕಾರ ಮಾಡದೇ ಸಮಾಧಿ ಮಾಡಲಾಗಿದೆ. ಇದರಿಂದ ನನಗೆ ನೋವಾಗಿದೆ" ಎಂದು ಆಕೆ ದುಖಃ ತೊಡಿಕೊಂಡಿದ್ದಾರೆ.
ಘಟನೆಯ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ಬಂದ ನಂತರ ಜಿಲ್ಲಾಧಿಕಾರಿ ಪ್ರಣಬ್ ಕುಮಾರ್ ಶರ್ಮಾ "ಮೃತರ ದೇಹವನ್ನು ಸಮಾಧಿಯಿಂದ ತೆಗೆದು ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸುವಂತೆ ನಾವು ಸೂಚನೆ ನೀಡಿದ್ದೇವೆ" ಎಂದಿದ್ದಾರೆ.
ಶರ್ಮಾ ಅವರ ಮೃತದೇಹವನ್ನು ಶುಕ್ರವಾರ ಮಧ್ಯಾಹ್ನ ಹೊರತೆಗೆಯಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಕೇಂದ್ರವಾದ ಮಂಗಳದಾಯಿಗೆ ಕೊಂಡೊಯ್ಯಲಾಗಿದೆ. ಶವಪರೀಕ್ಷೆ ಬಳಿಕ ಸಾರ್ವಜನಿಕ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತದೆ.
ಘಟನೆ ಬಗ್ಗೆ ಇನ್ನು ಯಾವುದೇ ಎಫ್ಐಆರ್ ದಾಖಲಿಸಿಲ್ಲ, ನಮ್ಮ ಕಡೆಯಿಂದ ಯಾವುದೇ ತನಿಖೆ ನಡೆಯುತ್ತಿಲ್ಲ ಎಂದು ದಾರಾಂಗ್ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications