ಐಎಸ್ಐಎಸ್ ಚಟುವಟಿಕೆ : ದಕ್ಷಿಣ ಭಾರತದಲ್ಲಿ ಕೇರಳದಲ್ಲಿ ಹೆಚ್ಚು
ಬೆಂಗಳೂರು, ನವೆಂಬರ್ 28 : ದಕ್ಷಿಣ ಭಾರತದ ರಾಜ್ಯಗಳಲ್ಲಿ ಕೇರಳದಲ್ಲಿ ಐಎಸ್ಐಎಸ್ ಚಟುವಟಿಕೆಗಳು ಹೆಚ್ಚಿವೆ ಎಂದು ಗುಪ್ತಚರ ಇಲಾಖೆ ಹೇಳಿದೆ. ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು ರಾಜ್ಯಗಳಲ್ಲಿನ ಚಟುವಟಿಕೆ ಮೇಲೆ ಇಲಾಖೆ ಕಣ್ಣಿಟ್ಟಿದೆ.
ಪ್ರಪಂಚದ ಇತರ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಐಎಸ್ಐಎಸ್ ಉಗ್ರರ ಚಟುವಟಿಕೆಗಳು ಕಡಿಮೆ. ಆದರೆ, ಪ್ರಚಾರಗಳು ಹೆಚ್ಚು ಇಲ್ಲಿ ನಡೆಯುತ್ತಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.
ಕೇರಳ ರಾಜ್ಯದಲ್ಲಿ ಐಎಸ್ಐಎಸ್ ಉಗ್ರ ಚಟುವಟಿಕೆಗಳು ಹೆಚ್ಚು ನಡೆಯುತ್ತಿರುವುದು ಮಾತ್ರವಲ್ಲ, ರಾಜ್ಯದ ಹಲವು ಯುವಕರು ಸಂಘಟನೆ ಸೇರಿದ್ದಾರೆ. ಕೆಲವು ದಿನಗಳ ಹಿಂದೆ ಕೇರಳದ ಯುವಕನೊಬ್ಬ ಸಂಘಟನೆ ಸೇರಿದ್ದ ವಿಚಾರ ಬಹಿರಂಗವಾಗಿತ್ತು.

ಭಾರತದಿಂದ ಹೋಗುವ ಯುವಕರು ಆಘಾನಿಸ್ತಾನ ಮೂಲಕ ತೆರಳಿ ಸಂಘಟನೆ ಸೇರುತ್ತಾರೆ. ಸುಮಾರು 60 ಮಂದಿ ನೇರವಾಗಿ ಹೋಗಿದ್ದಾರೆ ಎಂದು ಮಾಹಿತಿ ಸಂಗ್ರಹಣೆ ಮಾಡಲಾಗಿದೆ. ಸಿರಿಯಾ ಮೂಲಕವೂ ಹಲವು ಮಂದಿ ತೆರಳಿ ಉಗ್ರ ಸಂಘಟನೆ ಸೇರಿದ್ದಾರೆ.
ಗುಪ್ತಚರ ಇಲಾಖೆ ಉಗ್ರರ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡುತ್ತಿದೆ. 'ಆಪರೇಷನ್ ಚಕ್ರವ್ಯೂಹ' ಎಂಬ ಹೆಸರಿನಲ್ಲಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮಹಾರಾಷ್ಟ್ರದ ಮುಂಬೈನಲ್ಲಿಯೂ ಚಟುವಟಿಕೆಗಳು ಹೆಚ್ಚಿವೆ.
ಉಗ್ರರ ಚಟುವಟಿಕೆ ಇರುವ ದಕ್ಷಿಣ ಭಾರತದ ಐದು ರಾಜ್ಯಗಳ ಪೈಕಿ ಮಹಾರಾಷ್ಟ್ರ 5ನೇ ಸ್ಥಾನದಲ್ಲಿದೆ. ಭಾರತದಿಂದ 100 ಯುವಕರು ಐಎಸ್ಐಎಸ್ ಸೇರಿದ್ದಾರೆ ಎಂದು ಇಲಾಖೆ ಹೇಳಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications