ಲವ್ ಜಿಹಾದ್ ಹಿಂದೆ ಅಂತಾರಾಷ್ಟ್ರೀಯ ಕುತಂತ್ರ
ಮುಂಬಯಿ, ಸೆ. 10 : ದೇಶವನ್ನು ಕಾಡುತ್ತಿರುವವ 'ಲವ್ ಜಿಹಾದ್' ಹಿಂದೆ ಹಿಂದೂ ಸಮಾಜ ನಾಶಮಾಡುವ ಅಂತಾರಾಷ್ಟ್ರೀಯ ಕುತಂತ್ರ ಅಡಗಿದೆ ಎಂದು ಶಿವಸೇನೆ ಆತಂಕ ವ್ಯಕ್ತಪಡಿಸಿದೆ.
ಅಲ್ಲದೇ ಹಿಂದೂ ಹೆಣ್ಣು ಮಕ್ಕಳು 'ಲವ್ ಜಿಹಾದ್' ಬಲೆಗೆ ಬೀಳುವುದರಿಂದ ದೂರ ಇರಬೇಕು ಎಂಬ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಮೋಹನ್ ಭಾಗ್ವತ್ ಹೇಳಿಕೆಯನ್ನು ಶಿವಸೇನೆ ಬೆಂಬಲಿಸಿದೆ.

ತನ್ನ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಶಿವಸೇನೆ, ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯರನ್ನು ಮರಳು ಮಾಡುವ ಯುವಕರು ಆಕೆಯನ್ನು ಮುಸ್ಮಿಂಆಗಿ ಮತಾಂತರ ಮಾಡುತ್ತಾರೆ. ಇದರ ಹಿಂದೆ ಅಂತಾರಾಷ್ಟ್ರೀಯ ಕುತಂತ್ರವಿರುವಂತೆ ಕಂಡುಬರುತ್ತಿದೆ. ಈ ಪಿಡುಗು ಹಿಂದೂ ಸಂಸ್ಕೃತಿಯನ್ನೇ ಬಲಿ ತೆಗೆದುಕೊಳ್ಳುವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಶಿವಸೇನೆ ಆತಂಕ ವ್ಯಕ್ತಪಡಿಸಿದೆ.(ವಿವಾದಾತ್ಮಕ 'ಲವ್ ಜಿಹಾದ್'? ಎಂದರೇನು)
ಈ ಬಗೆಯ ಲವ್ ಜಿಹಾದ್ ಗೆ ಮರುಳಾದವರು ಖಂಡಿತ ಪಾಠ ಕಲಿಯಲೆಬೇಕು. ಮುಸ್ಲಿಂ ಉಗ್ರಗಾಮಿ ಸಂಘಟನೆಗಳಾದ ಲಷ್ಕರ್-ಇ-ತೊಯ್ಬಾ, ಸಿಮಿ, ಆಲ್ ಖಯಿದಾ ಪ್ರಪಂಚವನ್ನು ಇಸ್ಲಾಮೀಕರಣ ಮಾಡ ಹೊರಟಿವೆ. ಹಿಂದೂಗಳೇ ಅವರ ಪ್ರಮುಖ ಗುರಿಯಾಗಿದ್ದಾರೆ ಎಂದು ಶಿವಸೇನೆ ಹೇಳಿದೆ.
ಬಿಜೆಪಿ ನಾಯಕ ಸ್ವಾಮಿ ಆದಿತ್ಯಾನಾಥ್ ಹೇಳಿಕೆಯನ್ನು ಸಮರ್ಥಿಸಿರುವ ಶಿವಸೇನೆ, ಆದಿತ್ಯಾನಾಥ್ ಸಿಟ್ಟು ಸರಿಯಾಗಿಯೇ ಇದೆ. ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ರಾಜ್ಯದಲ್ಲಿ ಪಿಡಿಗು ಹೆಚ್ಚಾಗುತ್ತಿದೆ ಎಂದು ಆರೋಪಿಸಿದೆ.('ಲವ್ ಜಿಹಾದ್' ವಿವಾದದಲ್ಲಿ ಯೋಗಿ ಆದಿತ್ಯಾನಾಥ್)
ಹಿಂದೂ ಸಮಾಜದ ಮುಗ್ಧ ಹೆಣ್ಣು ಮಕ್ಕಳು ಲವ್ ಜಿಹಾದ್ ಬಲೆಗೆ ಬಿದ್ದು ಬುರ್ಕಾ ಒಳಗೆ ಇಡಿ ಜೀವನ ಕಳೆಯುವ ಕೆಟ್ಟ ಪರಿಸ್ಥಿತಿ ತಂದುಕೊಳ್ಳುತ್ತಿದ್ದಾರೆ ಎಂದು ಸಮ್ನಾದ ಸಂಪಾದಕೀಯ ಹೇಳಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications