ಉದ್ವಿಗ್ನಗೊಂಡ ಮಣಿಪುರ; ಮತ್ತೆ ಇಂಟರ್ನೆಟ್ ಸ್ಥಗಿತ: ಕಾರವೇನು? ಇಲ್ಲಿದೆ ನೋಡಿ
ಇಂಫಾಲ್, ಸೆಪ್ಟೆಂಬರ್ 26: ಮಣಿಪುರದಲ್ಲಿ ಇಂಟರ್ನೆಟ್ ಸೇವೆ ಪುನರ್ ಆರಂಭಗೊಂಡ ಎರಡನೇ ದಿನಕ್ಕೆ ಮಣಿಪುರ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿದ್ದು, ಮತ್ತೆ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಹೌದು, ಜುಲೈ 6 ರಂದು ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಬರ್ಬರ ಹತ್ಯೆ ಬಳಿಕ ಮಣಿಪುರದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತೆ ಮೊಬೈಲ್ ನೆಟ್ವರ್ಕ್ ಹಾಗೂ ಇಂಟರ್ನೆಟ್ ಸೇವೆಗಳನ್ನು ಐದು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

17 ವರ್ಷದ ಹಿಮಾಜ್ ಲಿಂಥೋಯಿನ್ಗಂಬಿ ಹಾಗೂ 20 ವರ್ಷದ ಫಿಮಜ್ ಹೇಮಜಿತ್ ಮೃತ ದುರ್ದೈವಿಗಳು. ಇಬ್ಬರು ಮೈತೇಯಿ ಸಮುದಾಯಕ್ಕೆ ಸೇರಿದವರು ಎನ್ನಲಾಗಿದೆ. ಇಬ್ಬರು ವಿದ್ಯಾರ್ಥಿಗಳನ್ನು ಕಾಡು ಪ್ರದೇಶದ ಹುಲ್ಲಿನ ಮೇಲೆ ಕುಳ್ಳಿರಿಸಲಾಗಿದೆ. ಈ ಫೋಟೋದಲ್ಲಿ ಕುಕಿ ಸಮುದಾಯದ ಬಂಡುಕೋರರು ಎಂದು ಹೇಳಲಾಗುತ್ತಿರುವ ಇಬ್ಬರು ಹಿಂಭಾಗದಲ್ಲಿ ನಿಂತಿದ್ದಾರೆ. ಈ ಫೋಟೋ ವೈರಲ್ ಆದ ಬೆನ್ನಲ್ಲೇ ಇದೇ ವಿದ್ಯಾರ್ಥಿಗಳ ಮೃತದೇಹ ಫೋಟೋ ವೈರಲ್ ಆಗಿದೆ.
ಮಂಗಳವಾರ ಇಂಫಾಲ್ನಲ್ಲಿ ಭಾರೀ ಸಾರ್ವಜನಿಕ ಆಕ್ರೋಶದ ನಂತರ, ಇಬ್ಬರು ಹದಿಹರೆಯದವರ ಶವಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ, ಮಣಿಪುರ ಸರ್ಕಾರವು ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದೇಶಿಸಿದೆ.
ಮಣಿಪುರದಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳ ಮೂಲಕ ತಪ್ಪು ಮಾಹಿತಿ, ಸುಳ್ಳು ವದಂತಿಗಳು ಮತ್ತು ಇತರ ರೀತಿಯ ಹಿಂಸಾತ್ಮಕ ಚಟುವಟಿಕೆಗಳನ್ನು ವರದಿ ಮಾಡುವುದನ್ನು ರಾಜ್ಯ ಸರ್ಕಾರವು ಅತ್ಯಂತ ಸೂಕ್ಷ್ಮವಾಗಿ ಗಂಭೀರವಾಗಿ ಪರಿಗಣಿಸುತ್ತದೆ.
ಈ ವರ್ಷದ ಮೇ ತಿಂಗಳಿನಿಂದ, ಮಣಿಪುರವು ಬಹುಸಂಖ್ಯಾತ ಮೇಟಿ ಮತ್ತು ಅಲ್ಪಸಂಖ್ಯಾತ ಕುಕಿ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಮುಳುಗಿದೆ. ಪರಿಸ್ಥಿತಿ ಸುಧಾರಿಸಿದ್ದರಿಂದ ಈ ಬೆಳವಣಿಗೆ ನಡೆದಿದೆ ಎಂದು ಸಿಎಂ ಸಿಂಗ್ ಹೇಳಿದ್ದಾರೆ. ಏಪ್ರಿಲ್ 28 ರಂದು ಚುರಾಚಂದ್ಪುರ ಮತ್ತು ಫರ್ಜಾಲ್ ಜಿಲ್ಲೆಗಳಲ್ಲಿ ಸ್ಥಗಿತಗೊಂಡಿತು. ಶನಿವಾರ, ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಅದೇ ದಿನದಿಂದ ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ ಮರುಸ್ಥಾಪಿಸಲಾಗುವುದು ಎಂದು ಘೋಷಿಸಿದರು.
ಈ ಫೋಟೋದಿಂದ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಹಿಂಸಾಚಾರದ ವೇಳೆ ಕಾಣೆಯಾಗಿದ್ದರು, ಇವರಿಬ್ಬರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿತ್ತು. ಇದೀಗ 5 ತಿಂಗಳಿಂದ ನಿಷೇಧಕ್ಕೊಳಪಟ್ಟಿದ್ದ ಮೊಬೈಲ್ ಇಂಟರ್ನೆಟ್ ಮತ್ತೆ ಸ್ಥಾಪಿತಗೊಂಡ ಬೆನ್ನಲ್ಲೇ ವಿದ್ಯಾರ್ಥಿಗಳ ಫೋಟೋ ವೈರಲ್ ಆಗಿದ್ದು, ಪ್ರತಿಭಟನೆ ಆರಂಭವಾಗಿದೆ. ನೂರಾರು ವಿದ್ಯಾರ್ಥಿಗಳು ರಸ್ತೆಗಳಿದು ಪ್ರತಿಭಟನೆ ನಡೆಸಿದ್ದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದ್ದಾರೆ.
ಮೇ 3 ರಂದು ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇಟಿ ಸಮುದಾಯದ ಪರಿಶಿಷ್ಟ ಪಂಗಡದ (ಎಸ್ಟಿ) ಸ್ಥಾನಮಾನದ ಬೇಡಿಕೆಯನ್ನು ವಿರೋಧಿಸಿ "ಬುಡಕಟ್ಟು ಐಕಮತ್ಯ ಮೆರವಣಿಗೆ" ಆಯೋಜಿಸಿದಾಗ ಹಿಂಸಾಚಾರ ಭುಗಿಲೆದ್ದ ನಂತರ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ.












Click it and Unblock the Notifications