ಸಂದರ್ಶನ : ಪಠಾಣ್ ಕೋಟ್ ದಾಳಿ ಬಗ್ಗೆ ದೂರುವುದು ಬಿಡಿ
ಬೆಂಗಳೂರು, ಜನವರಿ 07 : ಪ್ರತಿ ಬಾರಿ ಭಯೋತ್ಪಾದಕ ದಾಳಿ ನಡೆದಾಗಲೂ ಸೇನೆ, ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತದೆ. ಪಠಾಣ್ ಕೋಟ್ ವಾಯುನೆಲೆ ಮೇಲೆ ದಾಳಿ ನಡೆದ ನಂತರವೂ ಇದೇ ಆಗಿದೆ. ಎನ್ಐಎ ದಾಳಿಯ ತನಿಖೆ ನಡೆಸುತ್ತಿದೆ. ವರದಿ ಬರುವ ತನಕ ದಾಳಿಯ ಕುರಿತು ಆರೋಪ ಮಾಡುವುದು ಸರಿಯಲ್ಲ.
ಭಾರತ ಸರ್ಕಾರದ ಮಾಜಿ ವಿಶೇಷ ಕಾರ್ಯದರ್ಶಿ ವಿ.ಬಾಲಚಂದರ್ ಅವರು ಒನ್ ಇಂಡಿಯಾ ಸಂದರ್ಶನದಲ್ಲಿ 'ಪಠಾಣ್ ಕೋಟ್ ದಾಳಿಯ ವಿಚಾರದಲ್ಲಿ ಬಿಎಸ್ಎಫ್ ಯೋಧರನ್ನು ದೂರುವುದು ಮತ್ತು ಪಂಜಾಬ್ ಪೊಲೀಸರಿಗೆ ಕ್ಲಿನ್ ಚಿಟ್ ನೀಡುವುದು ಸರಿಯಲ್ಲ' ಎಂದು ಹೇಳಿದ್ದಾರೆ. ಸಂದರ್ಶನದ ವಿವರಗಳು ಇಲ್ಲಿವೆ...... [ಪಠಾಣ್ ಕೋಟ್ ವಾಯುನೆಲೆಯ ವಿಶೇಷತೆಗಳೇನು?]
ದಾಳಿ ಬಗ್ಗೆ ನಡೆಯುತ್ತಿರುವ ಆರೋಪಗಳ ಬಗ್ಗೆ ಏನು ಹೇಳುವಿರಿ?
ದಾಳಿಯ ಬಗ್ಗೆ ಮಾಡುತ್ತಿರುವ ಆರೋಪಗಳನ್ನು ಮೊದಲು ನಿಲ್ಲಿಸಬೇಕು. ಬಿಎಸ್ಎಫ್ ಪಡೆಯ ಮೇಲೆ ಆರೋಪ ಹೊರಿಸಿ ಪಂಜಾಬ್ ಪೊಲೀಸರಿಗೆ ಕ್ಲಿನ್ ಚಿಟ್ ನೀಡುವುದು ಸರಿಯಲ್ಲ. ಬಿಎಸ್ಎಫ್ ಪಡೆ ಸಹ ಗಡಿಭಾಗದಲ್ಲಿ ಶಾಂತಿಯುತ ವಾತಾವರಣವಿರುವಂತೆ ನೋಡಿಕೊಳ್ಳಬೇಕು.

ಪಠಾಣ್ ಕೋಟ್ಗೆ ನುಗ್ಗಿದ ಉಗ್ರರು ಸುಲಭವಾಗಿ ಹೇಗೆ ಗಡಿ ದಾಟಿದರು?
ನನ್ನ ಅನುಭವದ ಪ್ರಕಾರ ಮಾದಕ ವಸ್ತುಗಳನ್ನು ಕಳ್ಳಸಾಗಣೆ ಮಾಡುವವರ ಜೊತೆ ಕೈ ಜೋಡಿಸಿರುವ ಉಗ್ರರು ಗಡಿ ದಾಟಿ ಬಂದಿದ್ದಾರೆ. ಪಂಜಾಬಿನ ಭಾರತ-ಪಾಕ್ ಗಡಿಭಾಗದಲ್ಲಿ ಮಾದಕ ವಸ್ತುಗಳ ಕಳ್ಳಸಾಗಣೆ ನಡೆಯುತ್ತದೆ. ಕಳ್ಳಸಾಗಣೆ ಮಾಡುವವರಿಗೆ ಲಂಚವನ್ನು ನೀಡಿ ಉಗ್ರರು ಗಡಿದಾಟಿ ಬಂದಿದ್ದಾರೆ. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]
ಈ ದಾಳಿ ಬಗ್ಗೆ ನೀವು ಗಮನಿಸಿದ ಅಂಶಗಳೇನು?
ಮುಂಬೈ ದಾಳಿ ಮತ್ತು ಪಠಾಣ್ ಕೋಠ್ ದಾಳಿಯನ್ನು ಹೋಲಿಕೆ ಮಾಡಿದಾಗ ನಾವು ಪಠಾಣ್ ಕೋಟ್ಗೆ ತುರ್ತಾಗಿ ಎನ್ಎಸ್ಜಿ ಪಡೆಯನ್ನು ಕಾರ್ಯಾಚರಣೆಗಾಗಿ ಕಳುಹಿಸಿದ್ದೇವೆ. ಎನ್ಎಸ್ಜಿ ವಾಯುನೆಲೆಯ ಕಾರ್ಯಾಚರಣೆಯಲ್ಲಿ ಮಹತ್ವದ ಪಾತ್ರ ವಹಿಸಿತು ಎಂಬುದರಲ್ಲಿ ಎರಡು ಮಾತಿಲ್ಲ. [ಎಸ್ಪಿ ಸಲ್ವಿಂದರ್ ಸಿಂಗ್ ಉತ್ತರಿಸಬೇಕಾದ ಮೂರು ಪ್ರಶ್ನೆಗಳು]
ಎಸ್ಪಿ ಸಲ್ವಿಂದರ್ ಸಿಂಗ್ ಹೇಳಿಕೆ ಬಗ್ಗೆ ನಿಮ್ಮ ಅಭಿಪ್ರಾಯವೇನು?
ಗುರುದಾಸ್ಪುರ ಎಸ್ಪಿ ಸಲ್ವಿಂದರ್ ಸಿಂಗ್ ಹೇಳಿಕೆ ಬಗ್ಗೆ ನಂಬಿಕೆ ಬರುತ್ತಿಲ್ಲ. ಉಗ್ರರು ಅವರನ್ನು ಅಹಹರಿಸಿ ಅವರ ಕೈ ಮತ್ತು ಕಣ್ಣು ಕಟ್ಟಿದ್ದರು. ಕಾಡಿನಲ್ಲಿ ಬಿಟ್ಟು ಕಾರಿನೊಂದಿಗೆ ಪರಾರಿಯಾದರು ಎಂದು ಸಿಂಗ್ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ತರಬೇತಿ ಪಡೆದ ಉಗ್ರರು ಕೈಗೆ ಸಿಕ್ಕವರನ್ನು ಸುಲಭವಾಗಿ ಬಿಡುತ್ತಾರೆಯೇ?. ನನಗೆ ತಿಳಿದಿರುವ ಪ್ರಕಾರ ಎಲ್ಲಾ ರಾಜ್ಯಗಳಲ್ಲಿ ಸರ್ಕಾರಿ ಅಧಿಕಾರಿಗಳ ವಾಹನಗಳಿಗೆ ಚಾಲಕರು ಇರುತ್ತಾರೆ. ಆದರೆ, ಈ ಪ್ರಕರಣದಲ್ಲಿ ಕಾರನ್ನು ಸಿಂಗ್ ಸ್ನೇಹಿತರು ಓಡಿಸುತ್ತಿದ್ದರು. ಭಯೋತ್ಪಾದಕ ದಾಳಿ ನಡೆಯುವ ಎಚ್ಚರಿಕೆ ನೀಡಿದ್ದರೂ, ಗಡಿಯ ಸಮೀಪ ಅವರು ಏನು ಮಾಡುತ್ತಿದ್ದರು ಎಂಬುದು ತಿಳಿಯುತ್ತಿಲ್ಲ.
ಮುಂದಿನ ದಾಳಿಯನ್ನು ಹೇಗೆ ತಡೆಯಬಹುದು?
26/11ರ ಮುಂಬೈ ದಾಳಿಯ ನಂತರ ಕೇಂದ್ರ ಸರ್ಕಾರ ಪ್ರತಿ ರಾಜ್ಯದಲ್ಲಿ ಎನ್ಎಸ್ಜಿ ಘಟಕ ಸ್ಥಾಪನೆಗೆ ಮುಂದಾಗಿದೆ. ರಾಜ್ಯ ಸರ್ಕಾರಗಳಿಗೆ The special weapons and tactics (SWAT) ತಂಡಗಳನ್ನು ರಚನೆ ಮಾಡುವಂತೆ ಸಲಹೆ ನೀಡಲಾಗಿದೆ. ಇಂತಹ ಪ್ರಯತ್ನಗಳಿಂದಾಗಿ ಮುಂದೆ ನಡೆಯುವ ದಾಳಿಗಳನ್ನು ತಡೆಯಬಹುದಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications