ಕೇಜ್ರಿವಾಲ್ ವಿರುದ್ಧ ಯಾವ ಪಿತೂರಿ ನಡೆದಿಲ್ಲ: ಪೃಥ್ವಿ ರೆಡ್ಡಿ
ನವದೆಹಲಿ, ಮಾ, 4 : ಆಮ್ ಆದ್ಮಿ ಪಾರ್ಟಿಯಲ್ಲಿ ಭಿನ್ನಮತ ಭುಗಿಲೆದಿದ್ದು ತಾರಕಕ್ಕೇರಿದೆ. ಪಕ್ಷದ ಪ್ರಮುಖ ನಾಯಕರಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಹೇಳಿಕೆಗಳು ಪಕ್ಷದೊಳಗಿದ್ದ ಅಸಮಾಧಾನವನ್ನು ಬೀದಿಗೆ ಎಳೆದು ತಂದಿವೆ.
ಪಾರ್ಟಿಯಲ್ಲಿ ಎದ್ದಿರುವ ಗೊಂದಲಗಳ ಕುರಿತು ಒನ್ ಇಂಡಿಯಾ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ವಕ್ತಾರ ಪೃಥ್ವಿ ರೆಡ್ಡಿ ಅವರನ್ನು ಸಂದರ್ಶನ ಮಾಡಿದೆ. ' ನಾವು ಯಾವಾಗಲೂ ಸಕಾರಾತ್ಮಕವಾಗಿ ಯೋಚಿಸಬೇಕು. ಈ ಎಲ್ಲ ಗೊಂದಲಗಳನ್ನು ನಿವಾರಿಸಿಕೊಂಡು ಪಕ್ಷ ಮತ್ತಷ್ಟು ಗಟ್ಟಿಯಾಗಲಿದೆ' ಎಂದು ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರೆಡ್ಡಿಯವರೊಂದಿಗೆ ನಡೆಸಿದ ಸಂದರ್ಶನದ ಪೂರ್ಣ ಪಾಠ ಇಲ್ಲಿದೆ.[ಎಎಪಿ ನಾಟಕ ಮುಂದುವರಿಕೆ: ಕೇಜ್ರಿವಾಲ್ ರಾಜೀನಾಮೆ]

* ಪಕ್ಷದೊಳಗೆ ಭಿನ್ನಮತ ಭುಗಿಲೇಳಲು ಕಾರಣವೇನು?
ರೆಡ್ಡಿ: ನಮ್ಮ ಪಕ್ಷದಲ್ಲಿರುವ ನಾಯಕರ ಹಿನ್ನೆಲೆ ಬೇರೆಬೇರೆಯಾಗಿದೆ. ಭ್ರಷ್ಟಾಚಾರ ನಿರ್ಮೂಲನೆ ಮತ್ತು ಪ್ರಜಾಪ್ರಭುತ್ವ ಸ್ಥಾಪನೆಯೇ ನಿಜವಾದ ಧ್ಯೇಯ. ಚಿಂತನಾ ಲಹರಿಗಳಲ್ಲಿ ಕೊಂಚ ವ್ಯತ್ಯಾಸವಿರುವುದು ಭಿನ್ನಮತದಂತೆ ತೋರುತ್ತಿದೆ. ಕೆಲವೊಂದು ಕಡೆ ಕಂಡುಬಂದ ಅಪನಂಬಿಕೆ ಭಿನ್ನಮತದ ಬೀಜ ಬಿತ್ತಿದೆ.
* ಇಷ್ಟು ದಿನ ಭಿನ್ನಮತ ಮುಚ್ಚಿಡಲಾಗಿತ್ತೇ?
ರೆಡ್ಡಿ: ಇದು ಚರ್ಚಿಸತಕ್ಕ ವಿಷಯವಲ್ಲ. ನಾವು ಒಟ್ಟಾಗಿಯೇ ಚುನಾವಣೆ ಎದುರಿಸಿದ್ದೆವು. ನಮ್ಮೆಲ್ಲರ ಸಾಮಾನ್ಯ ಉದ್ದೇಶ ಒಂದೇ ಆಗಿತ್ತು. ಇಂಥ ಸಮಸ್ಯೆಗಳು ಸಂಘಟನೆ ಅಂದ ಮೇಲೆ ಸಾಮಾನ್ಯ. ಗೊಂದಲಗಳು ಶೀಘ್ರವಾಗಿ ಬಗೆಹರಿಯಲಿದೆ.
* ಅರವಿಂದ ಕೇಜ್ರಿವಾಲ್ ಅವರನ್ನು ಸ್ಥಾನದಿಂದ ಇಳಿಸುವ ಹುನ್ನಾರ ನಡೆದಿದೆಯೇ?
ರೆಡ್ಡಿ: ಇಲ್ಲ, ಅಂಥ ಯಾವ ಸಿದ್ಧತೆಗಳು ನನ್ನ ಪ್ರಕಾರ ಪಕ್ಷದಲ್ಲಿ ನಡೆದಿಲ್ಲ. ಭಿನ್ನಾಭಿಪ್ರಾಯ ಉಂಟಾದ ಮಾತ್ರಕ್ಕೆ ನಾಯಕತ್ವ ಬದಲಾವಣೆ ತಂತ್ರ ಎನ್ನುವುದು ಸರಿಯಲ್ಲ.
* ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಮೇಲೆ ಕ್ರಮ ತೆಗೆದುಕೊಳ್ಳುತ್ತೀರಾ?
ರೆಡ್ಡಿ: ಪ್ರತಿಯೊಂದು ಪಕ್ಷದಲ್ಲೂ ಆಂತರಿಕ ಭಿನ್ನಮತ ಇದ್ದೇ ಇರುತ್ತದೆ. ನಮ್ಮ ಪಕ್ಷದ ನಾಯಕರು ಮಾಧ್ಯಮಗಳೆದುರು ಬಹಿರಂಗ ಹೇಳಿಕೆ ನೀಡಿದ್ದಾರೆ ಅಷ್ಟೇ. ಕಠಿಣ ಕ್ರಮ ತೆಗೆದುಕೊಳ್ಳುವುದರಿಂದ ಎಲ್ಲ ಸರಿ ಹೋಗುತ್ತದೆ ಎಂಬ ಭಾವನೆ ನಮಗಿಲ್ಲ. ಪಕ್ಷದ ಕೆಲವು ಜನ ಜವಾಬ್ದಾರಿಯುತವಾಗಿ ಕಾರ್ಯನಿರ್ವಹುಸುತ್ತಿಲ್ಲ ಎಂಬುದು ಸ್ಪಷ್ಟ. ಜನರ ಎದುರೇ ಇಂಥ ಸಮಸ್ಯೆಗೆ ಪರಿಹಾರ ತೆಗೆದುಕೊಳ್ಳಲಾಗುವುದು.
* ಆಮ್ ಆದ್ಮಿಯಲ್ಲಿ ಸರ್ವಾಧಿಕಾರ ಧೋರಣೆ ಹೆಚ್ಚಾಗಿದೆ....!
ರೆಡ್ಡಿ: ಈ ಬಗ್ಗೆ ಯೋಚನೆ ಮಾಡಲು ಸಾಧ್ಯವಿಲ್ಲ. ಎಲ್ಲರಿಗೂ ಅವರವರ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ಅದರಂತೆ ಪಕ್ಷ ಸಹ ಬೆಳೆದು ಬಂದಿದೆ. ಮುಂದಿನ ಅವಕಾಶಗಳ ಬಗ್ಗೆ ಯೋಚಿಸುವುದು ಉತ್ತಮವೇ ವಿನಃ ಹಿಂದೆ ನಡೆದ ಸಂಗತಿಗಳ ಬಗ್ಗೆ ಅಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications