ಕೇಜ್ರಿವಾಲ್ ವಿರುದ್ಧ ಯಾವ ಪಿತೂರಿ ನಡೆದಿಲ್ಲ: ಪೃಥ್ವಿ ರೆಡ್ಡಿ
ನವದೆಹಲಿ, ಮಾ, 4 : ಆಮ್ ಆದ್ಮಿ ಪಾರ್ಟಿಯಲ್ಲಿ ಭಿನ್ನಮತ ಭುಗಿಲೆದಿದ್ದು ತಾರಕಕ್ಕೇರಿದೆ. ಪಕ್ಷದ ಪ್ರಮುಖ ನಾಯಕರಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಹೇಳಿಕೆಗಳು ಪಕ್ಷದೊಳಗಿದ್ದ ಅಸಮಾಧಾನವನ್ನು ಬೀದಿಗೆ ಎಳೆದು ತಂದಿವೆ.
ಪಾರ್ಟಿಯಲ್ಲಿ ಎದ್ದಿರುವ ಗೊಂದಲಗಳ ಕುರಿತು ಒನ್ ಇಂಡಿಯಾ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ವಕ್ತಾರ ಪೃಥ್ವಿ ರೆಡ್ಡಿ ಅವರನ್ನು ಸಂದರ್ಶನ ಮಾಡಿದೆ. ' ನಾವು ಯಾವಾಗಲೂ ಸಕಾರಾತ್ಮಕವಾಗಿ ಯೋಚಿಸಬೇಕು. ಈ ಎಲ್ಲ ಗೊಂದಲಗಳನ್ನು ನಿವಾರಿಸಿಕೊಂಡು ಪಕ್ಷ ಮತ್ತಷ್ಟು ಗಟ್ಟಿಯಾಗಲಿದೆ' ಎಂದು ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರೆಡ್ಡಿಯವರೊಂದಿಗೆ ನಡೆಸಿದ ಸಂದರ್ಶನದ ಪೂರ್ಣ ಪಾಠ ಇಲ್ಲಿದೆ.[ಎಎಪಿ ನಾಟಕ ಮುಂದುವರಿಕೆ: ಕೇಜ್ರಿವಾಲ್ ರಾಜೀನಾಮೆ]

* ಪಕ್ಷದೊಳಗೆ ಭಿನ್ನಮತ ಭುಗಿಲೇಳಲು ಕಾರಣವೇನು?
ರೆಡ್ಡಿ: ನಮ್ಮ ಪಕ್ಷದಲ್ಲಿರುವ ನಾಯಕರ ಹಿನ್ನೆಲೆ ಬೇರೆಬೇರೆಯಾಗಿದೆ. ಭ್ರಷ್ಟಾಚಾರ ನಿರ್ಮೂಲನೆ ಮತ್ತು ಪ್ರಜಾಪ್ರಭುತ್ವ ಸ್ಥಾಪನೆಯೇ ನಿಜವಾದ ಧ್ಯೇಯ. ಚಿಂತನಾ ಲಹರಿಗಳಲ್ಲಿ ಕೊಂಚ ವ್ಯತ್ಯಾಸವಿರುವುದು ಭಿನ್ನಮತದಂತೆ ತೋರುತ್ತಿದೆ. ಕೆಲವೊಂದು ಕಡೆ ಕಂಡುಬಂದ ಅಪನಂಬಿಕೆ ಭಿನ್ನಮತದ ಬೀಜ ಬಿತ್ತಿದೆ.
* ಇಷ್ಟು ದಿನ ಭಿನ್ನಮತ ಮುಚ್ಚಿಡಲಾಗಿತ್ತೇ?
ರೆಡ್ಡಿ: ಇದು ಚರ್ಚಿಸತಕ್ಕ ವಿಷಯವಲ್ಲ. ನಾವು ಒಟ್ಟಾಗಿಯೇ ಚುನಾವಣೆ ಎದುರಿಸಿದ್ದೆವು. ನಮ್ಮೆಲ್ಲರ ಸಾಮಾನ್ಯ ಉದ್ದೇಶ ಒಂದೇ ಆಗಿತ್ತು. ಇಂಥ ಸಮಸ್ಯೆಗಳು ಸಂಘಟನೆ ಅಂದ ಮೇಲೆ ಸಾಮಾನ್ಯ. ಗೊಂದಲಗಳು ಶೀಘ್ರವಾಗಿ ಬಗೆಹರಿಯಲಿದೆ.
* ಅರವಿಂದ ಕೇಜ್ರಿವಾಲ್ ಅವರನ್ನು ಸ್ಥಾನದಿಂದ ಇಳಿಸುವ ಹುನ್ನಾರ ನಡೆದಿದೆಯೇ?
ರೆಡ್ಡಿ: ಇಲ್ಲ, ಅಂಥ ಯಾವ ಸಿದ್ಧತೆಗಳು ನನ್ನ ಪ್ರಕಾರ ಪಕ್ಷದಲ್ಲಿ ನಡೆದಿಲ್ಲ. ಭಿನ್ನಾಭಿಪ್ರಾಯ ಉಂಟಾದ ಮಾತ್ರಕ್ಕೆ ನಾಯಕತ್ವ ಬದಲಾವಣೆ ತಂತ್ರ ಎನ್ನುವುದು ಸರಿಯಲ್ಲ.
* ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಮೇಲೆ ಕ್ರಮ ತೆಗೆದುಕೊಳ್ಳುತ್ತೀರಾ?
ರೆಡ್ಡಿ: ಪ್ರತಿಯೊಂದು ಪಕ್ಷದಲ್ಲೂ ಆಂತರಿಕ ಭಿನ್ನಮತ ಇದ್ದೇ ಇರುತ್ತದೆ. ನಮ್ಮ ಪಕ್ಷದ ನಾಯಕರು ಮಾಧ್ಯಮಗಳೆದುರು ಬಹಿರಂಗ ಹೇಳಿಕೆ ನೀಡಿದ್ದಾರೆ ಅಷ್ಟೇ. ಕಠಿಣ ಕ್ರಮ ತೆಗೆದುಕೊಳ್ಳುವುದರಿಂದ ಎಲ್ಲ ಸರಿ ಹೋಗುತ್ತದೆ ಎಂಬ ಭಾವನೆ ನಮಗಿಲ್ಲ. ಪಕ್ಷದ ಕೆಲವು ಜನ ಜವಾಬ್ದಾರಿಯುತವಾಗಿ ಕಾರ್ಯನಿರ್ವಹುಸುತ್ತಿಲ್ಲ ಎಂಬುದು ಸ್ಪಷ್ಟ. ಜನರ ಎದುರೇ ಇಂಥ ಸಮಸ್ಯೆಗೆ ಪರಿಹಾರ ತೆಗೆದುಕೊಳ್ಳಲಾಗುವುದು.
* ಆಮ್ ಆದ್ಮಿಯಲ್ಲಿ ಸರ್ವಾಧಿಕಾರ ಧೋರಣೆ ಹೆಚ್ಚಾಗಿದೆ....!
ರೆಡ್ಡಿ: ಈ ಬಗ್ಗೆ ಯೋಚನೆ ಮಾಡಲು ಸಾಧ್ಯವಿಲ್ಲ. ಎಲ್ಲರಿಗೂ ಅವರವರ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ಅದರಂತೆ ಪಕ್ಷ ಸಹ ಬೆಳೆದು ಬಂದಿದೆ. ಮುಂದಿನ ಅವಕಾಶಗಳ ಬಗ್ಗೆ ಯೋಚಿಸುವುದು ಉತ್ತಮವೇ ವಿನಃ ಹಿಂದೆ ನಡೆದ ಸಂಗತಿಗಳ ಬಗ್ಗೆ ಅಲ್ಲ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications