ಪ್ರೇಕ್ಷಕ ಪ್ರಭುಗಳೆದಿರು ಕಳಚಿಬಿತ್ತು ಕಿಂಗ್ ಖಾನ್ ಕಿರೀಟ
ಮುಂಬೈ, ಡಿಸೆಂಬರ್, 17: ಕಾರಣವಿಲ್ಲದೇ ಫಟಾರನೇ ಕಪಾಳಕ್ಕೆ ಬಿಗಿದು ನಂತರ ಕ್ಷಮೆ ಕೇಳಿದರೆ ಹೇಗಿರುತ್ತದೆ!? ಬಾಲಿವುಡ್ ಬಾದ್ ಷಾ, ಕಿಂಗ್ ಖಾನ್ ಎಂದೆಲ್ಲ ಕರೆಸಿಕೊಳ್ಳುವ ಶಾರುಖ್ ಮಹಾಶಯ ಮಾಡಿದ್ದು ಇದನ್ನೆ.
ಎಲ್ಲ ಮುಗಿದ ಮೇಲೆ ಕ್ಷಮೆ ಕೇಳುವ ಚಾಳಿ ಸಿನಿಮಾ ಮಂದಿಗೂ ಹಿಡಿದುಕೊಂಡಿದೆ. ಅಸಹಿಷ್ಣುತೆ ಬಗ್ಗೆ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಇದೀಗ ಕ್ಷಮೆ ಕೇಳಿದ್ದಾರೆ. ಅಡಿಕೆ ಕದ್ದಾಗ ಹೋದ ಮಾನ ಆನೆ ಕೊಟ್ಟರೆ ಬರುವುದೆ?
ತಮ್ಮ ಅಭಿನಯದ ದಿಲ್ ವಾಲೇ ಚಿತ್ರ ಬಿಡುಗಡೆ ಹಿಂದಿನ ದಿನ ಶಾರುಖ್ ಕ್ಷಮೆ ಕೇಳಿರುವುದು ಸಹಜವಾಗಿಯೇ ಮತ್ತೊಂದು ವಿವಾದಕ್ಕೆ ಮುನ್ನುಡಿ ಬರೆದರೆ ಆಶ್ಚರ್ಯವಿಲ್ಲ.[ಗೆಳೆಯ ಅಮೀರ್ ಖಾನ್ ಬಗ್ಗೆ ಶಾರುಖ್ ಹೇಳಿದ್ದೇನು?]
ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಶಾರುಖ್ 'ನಾನು ಯಾವ ದುರುದ್ದೇಶ ಇಟ್ಟುಕೊಂಡು ಮಾತನಾಡಿರಲಿಲ್ಲ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಅವರ ಕ್ಷಮೆ ಕೋರುತ್ತೇನೆ. ದೇಶ ಭಕ್ತಿಯನ್ನು ಮೀರಿ ನಡೆಯುವ ಶಕ್ತಿ ಯಾರಿಗೂ ಇಲ್ಲ ಎಂದು ಹೇಳಿದ್ದಾರೆ.
ತಮ್ಮ ಹುಟ್ಟಿದ ದಿನದಂದು, 'ಭಾರತ ಸ್ವಲ್ಪ ಮಟ್ಟಿಗೆ ಅಸಹಿಷ್ಣುವಾಗಿದೆ ಎಂದು ಸಂದರ್ಶನ ಕೊಟ್ಟಿದ್ದ ಶಾರುಖ್ ಈಗ ಯು ಟರ್ನ್ ತೆಗೆದುಕೊಂಡಿದ್ದಾರೆ. ನನ್ನ ಸಿನಿಮಾ ರಿಲೀಸ್ ಆಗ್ತಿದೆ ಅಂಥ ನಾನು ಕ್ಷಮೆ ಕೇಳುತ್ತಿಲ್ಲ ಎಂದು ಹೇಳಿದ್ದಾರೆ. ಅಷ್ಟಕ್ಕೂ ಶಾರುಖ್ ಕ್ಷಮೆ ಕೇಳಲು ನಿಜವಾದ ಕಾರಣ ಏನು? ಸಂಗತಿಗಳು ಮುಂದಿವೆ.

ಬಾಕ್ಸ್ ಆಫೀಸ್ ಮೇಲೆ ಕಣ್ಣು
ಖಾನ್ ಗಳ ಸಿನಿಮಾವನ್ನು ನೋಡುವುದು ಬೇಡ ಎಂಬ ಗುಲ್ಲು ಸಾಮಾಜಿಕ ಜಾಲತಾಣದಲ್ಲಿ ಎದ್ದಿತ್ತು. ಅಸಹಿಷ್ಣುತೆ ಇದೆ ಎಂಬುವರ ಸಿನಿಮಾ ನೋಡುವುದು ಬೇಡ ಎಂಬ ಮಾತುಗಳು ಕೇಳಿ ಬಂದಿದ್ದವು. ಸಿನಿಮಾ ಕಲೆಕ್ಷನ್ ಮೇಲೆ ಹೊಡೆತ ಬೀಳುತ್ತದೆ ಎಂಬ ಆಧಾರದಲ್ಲಿಯೇ ಶಾರುಖ್ ಕ್ಷಮೆ ಕೇಳಿದ್ದಾರೆ ಎನ್ನುವುದು ತೆರೆದಿಟ್ಟ ಸತ್ಯ.

ಅಸಹಿಷ್ಣುತೆ ಇದೆಯಾ?
ಸುದ್ದಿ ಮಾಧ್ಯಮದಲ್ಲಿ ಮಾತನಾಡುತ್ತ 'Intolerance'ಗೆ ಹಿಂದಿಯಲ್ಲಿ ಏನು ಹೇಳುತ್ತಾರೆ? ಎಂಬ ಪ್ರಶ್ನೆ ಎದ್ದು ಬಂತು. ಅದಕ್ಕೆ ಅಸಹಿಷ್ಣುತೆ ಎಂಬ ಉತ್ತರವೂ ಬಂತು. ಆಗ ಶಾರುಖ್ ನನಗೆ ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಅನಿಸುತ್ತಿಲ್ಲ ಎಂದು ಹೇಳಿದರು.

ಅಸಹಿಷ್ಣುತೆ ಪರವಾಗಿ ನಿಂತವರು
ಶಾರುಖ್ ಖಾನ್, ಅಮೀರ್ ಖಾನ್, ನಾರಾಯಣ ಮೂರ್ತಿ, ಕಿರಣ್ ಮಜುಂದಾರ್ ಷಾ, ಎ ಆರ್ ರೆಹಮಾನ್ ಸಹ ಕೆಲವೊಂದು ಸಂದರ್ಭದಲ್ಲಿ ಅಸಹಿಷ್ಣುತೆ ಪರವಾಗಿ ಮಾತನಾಡಿದ್ದ ರಾಜಕಿಯೇತರ ಗಣ್ಯರು.

ಬಾಲಿವುಡ್ ಗೆ ಬಿಸಿ
ನಾಗರಿಕರು ತಮ್ಮ ಆಕ್ರೋಶವನ್ನು ಸಾಮಾಜಿಕ ತಾಣದ ಮೂಲಕ ಹೊರಹಾಕಿದ್ದು ಬಾಲಿವುಡ್ ಗೆ ಬಿಸಿ ತಟ್ಟಿದೆ. ಸಿನಿಮಾ ಒಂದು ವ್ಯಾಪಾರ ಎಂಬುದನ್ನು ಶಾರುಖ್ ಖಾನ್ ಕ್ಷಮೆ ಕೇಳಿದ ಪ್ರಕರಣ ಮತ್ತೆ ಬಿಂಬಿಸುತ್ತಿದೆ.

ದಿಲ್ವಾಲೆ ಬಾಜಿರಾವ್ ಮಸ್ತಾನಿ
ಸಾಮಾಜಿಕ ತಾಣಗಳಾದ ಫೇಸ್ ಬುಕ್ ಮತ್ತು ಟ್ವಿಟರ್ ನಲ್ಲಿ ಶಾರುಖ್ ಅಭಿನಯದ ದಿಲ್ವಾಲೆ ಮತ್ತು ದೀಪಿಕಾಳ ಬಾಜಿರಾವ್ ಮಸ್ತಾನಿ ನಡುವೆ ಜನರೇ ಬಾಜಿ ಕಟ್ಟಿದ್ದರು. ಅಸಹಿಷ್ಣುತೆ ಎನ್ನುವ ಖಾನ್ ಗಳ ಚಿತ್ರಕ್ಕೆ ಧಿಕ್ಕಾರ ಹಾಕೋಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications