ಬೂದಿಮುಚ್ಚಿದ್ದ 'ಅಸಹಿಷ್ಣುತೆ' ಕೆಂಡ ಕೆದಕಿದ ಕರಣ್ ಜೋಹರ್!
ಜೈಪುರ, ಜನವರಿ, 22: ಅಮೀರ್ ಖಾನ್ ಮತ್ತು ಶಾರುಖ್ ನಂತರ ಬಾಲಿವುಡ್ ನಿರ್ದೇಶಕ, ನಟ ಕರಣ್ ಜೋಹರ್ ಅಸಹಿಷ್ಣುತೆ ಬಗ್ಗೆ ಮಾತನಾಡಿದ್ದಾರೆ. ಝೀ ಜೈಪುರ್ ಲಿಟ್ರೇಚರ್ ಫೆಸ್ಟಿವಲ್ ನಲ್ಲಿ ಮಾತನಾಡಿದ ಜೋಹರ್ 'ಭಾರತ ಒಂದು ಕಷ್ಟದ ದೇಶ' ಎಂದು ಹೇಳಿಕೆ ನೀಡಿ ವಿವಾದಕ್ಕೆ ಮತ್ತೊಂದು ಆರಂಭ ಬರೆದಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ನನಗೆ ಜೋಕ್ ನಂತೆ ಕಂಡುಬರುತ್ತಿದೆ. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಹೇಳಿದರೇ ನೀಮಗೆ ದೇಶದಲ್ಲಿ ಕಾದಿರುವುದು ಜೈಲು ಶಿಕ್ಷೆ. ಎಂದು ಕರಣ್ ಜೋಹರ್ ವ್ಯಂಗ್ಯದ ಮಾತುಗಳನ್ನಾಡಿದ್ದಾರೆ.[ಅಸಹಿಷ್ಣುತೆ ಮಾತಾಡಿದ್ದ ಶಾರುಖ್ ದಿಲ್ವಾಲೆಗೆ ಚಲ್ ರೇ ಎಂದಿದ್ದ ಪ್ರೇಕ್ಷಕ!]
14 ವರ್ಷದ ಹಿಂದೆ ನನ್ನ ಸಿನಿಮಾವೊಂದರಲ್ಲಿ ರಾಷ್ಟ್ರಗೀತೆಯನ್ನು ಬಳಸಿಕೊಂಡಿದ್ದಕ್ಕೆ ಈಗಲೂ ನಾನು ಕ್ಷಮೆ ಕೇಳಬೇಕು ಎಂದು ಜನರು ಹೇಳುತ್ತಾರೆ. ನಮ್ಮದು ಕನಸುಗಳನ್ನು ಕಟ್ಟಿ ಕೊಡುವ ಕೆಲಸ ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.[ಪ್ರೇಕ್ಷಕ ಪ್ರಭುಗಳೆದಿರು ಕಳಚಿಬಿತ್ತು ಕಿಂಗ್ ಖಾನ್ ಕಿರೀಟ]

ಶಾರುಖ್ ಜನ್ಮದಿನದ ಮಾತು
ತಮ್ಮ ಜನ್ಮದಿನದಂದೇ ಬಾಲಿವುಡ್ ಬಾದ್ ಷಾ ದೇಶದಲ್ಲಿ ದೇಶಭಕ್ತಿ ಬಗ್ಗೆ ಮಾತನಾಡುವುದೋ ದೊಡ್ಡ ತಪ್ಪು. ದೇಶ ಭಕ್ತಿಯನ್ನು ಪ್ರಕಟಮಾಡಿದರೆ ಆತ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂಬ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು.

ಅಮೀರ್ ಏನು ಹೇಳಿದ್ದರು?
ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂಬುದು ನಮ್ಮ ಕುಟುಂಬದ ಅನುಭವಕ್ಕೂ ಬಂದಿದೆ. ಮಕ್ಕಳ ಭವಿಷ್ಯಕ್ಕಾಗಿ ಈ ದೇಶವನ್ನು ತೊರೆಯೋಣ ಎಂದು ಹೆಂಡತಿ ಕಿರಣ್ ತರಾವ್ ನನ್ನಲ್ಲಿ ಹೇಳಿದ್ದರು ಎಂದು ಅಮೀರ್ ಖಾನ್ ಕಾರ್ಯಕ್ರಮವೊಂದರಲ್ಲಿ ಹೇಳಿದ್ದು ವಿವಾದದ ಕಿಡಿ ಹಬ್ಬಿಸಿತ್ತು.

ಅಸಹಿಷ್ಣುತೆ ಪರವಾಗಿ ನಿಂತವರು
ಶಾರುಖ್ ಖಾನ್, ಅಮೀರ್ ಖಾನ್, ನಾರಾಯಣ ಮೂರ್ತಿ, ಕಿರಣ್ ಮಜುಂದಾರ್ ಷಾ, ಎ ಆರ್ ರೆಹಮಾನ್ ಸಹ ಕೆಲವೊಂದು ಸಂದರ್ಭದಲ್ಲಿ ಅಸಹಿಷ್ಣುತೆ ಪರವಾಗಿ ಮಾತನಾಡಿದ್ದ ರಾಜಕಿಯೇತರ ಗಣ್ಯರು.

ಲೇ ಚೆಲ್ ಎಂದಿದ್ದ ಭಾರತೀಯ
ಶಾರುಖ್ ಅಭಿನಯದ ದಿಲ್ವಾಲೆ ಚಿತ್ರ ಬಾಕ್ಸ್ ಆಫಿಸ್ ನಲ್ಲಿ ನಿರೀಕ್ಷಿತ ಮಟ್ಟದ ಗಳಿಕೆ ಮಾಡಲು ವಿಫಲವಾಗಿತ್ತು. ಅಸಹಿಷ್ಣುತೆ ಬಗ್ಗೆ ಮಾತನಾಡಿದ್ದ ಶಾರುಖ್ ಸಿನಿಮಾ ಬಿಡುಗಡೆಗೆ ಮುನ್ನ ಕ್ಷಮೆ ಕೇಳಿ ಸುದ್ದಿಯಾಗಿದ್ದರು.

ಸಾಮಾಜಿತ ತಾಣದಲ್ಲಿ ವಿರೋಧ
ಖಾನ್ ಗಳ ಹೇಳಿಕೆಗೆ ಸಾಮಾಜಿಕ ತಾಣ ಫೇಸ್ ಬುಕ್ ಮತ್ತು ಟ್ವಿಟ್ಟರ್ ನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ನಾಗರಿಕರು ತಮ್ಮ ಅಭಿಪ್ರಾಯವನ್ನು ಕಟುವಾಗಿ ಹೊರಹಾಕಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications