'ಗೆಳೆಯ' ಅಮೀರ್ ಖಾನ್ ಬಗ್ಗೆ ಶಾರುಖ್ ಹೇಳಿದ್ದೇನು?
ಮುಂಬೈ, ಡಿಸೆಂಬರ್. 01: ದೇಶದಲ್ಲಿ ಅಸಹಿಷ್ಣುತೆ ಬಗ್ಗೆ ವ್ಯಾಪಕ ಚರ್ಚೆ, ಗೊಂದಲ, ವಿವಾದಗಳು ನಡೆದಿವೆ ಮತ್ತು ನಡೆಯುತ್ತಿವೆ. ದೇಶ ಬಿಡುವ ಹೇಳಿಕೆ ನೀಡಿ ವಿವಾದದ ಕಿಚ್ಚು ಹೊತ್ತಿಸಿದ್ದ ಅಮೀರ್ ಖಾನ್ ಗೆ ಅಂತಿಮವಾಗಿ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಬೆಂಬಲದ ಹೇಳಿಕೆ ನೀಡಿದ್ದಾರೆ.
ಇಷ್ಟು ದಿನ ಮೌನವಾಗಿದ್ದ ಕಿಂಗ್ ಖಾನ್ ಇದೀಗ ಮಾತನಾಡಿದ್ದಾರೆ. 'ನೀವು ನಿಮ್ಮ ದೇಶ ಪ್ರೇಮವನ್ನು ಸಾಬೀತು ಮಾಡುವ ಅಗತ್ಯವಿಲ್ಲ. ದೇಶದ ಬಗ್ಗೆ, ದೇಶದ ಒಳಿತಿಗೆ ಚಿಂತಿಸಿದರೆ ಸಾಕು, ಎಲ್ಲವೂ ಒಳಿತಾಗುತ್ತದೆ' ಎಂಬ ಹೇಳಿಕೆ ನೀಡಿದ್ದಾರೆ.['ನನ್ನ ದೇಶಭಕ್ತಿಗೆ ಯಾರಿಂದಲೂ ಸರ್ಟಿಫಿಕೇಟ್ ಬೇಕಿಲ್ಲ']
ದೇಶದ ಲಾಭಕ್ಕೋಸ್ಕರ ಕೆಲಸ ಮಾಡಬೇಕು. ಒಂದು ವೇಳೆ ದೇಶದ ವಿರುದ್ಧ ಕೆಲಸ ಮಾಡಿದರೆ ಅದು ನಿನಗೂ ಮತ್ತು ರಾಷ್ಟ್ರಕ್ಕೂ ಹಾನಿ ಮಾಡುತ್ತದೆ ಎಂದು ಕಿಂಗ್ ಖಾನ್ ಮುಂದುವರಿದು ಹೇಳಿದ್ದಾರೆ.

ಗೊತ್ತಿರುವ ಸಂಗತಿ ಮಾತ್ರ ಮಾತನಾಡಿ
ಅಮೀರ್ ಖಾನ್ ಗೆ ಸಂಬಂಧಿಸಿದ ಅಸಹಿಷ್ಣುತೆ ಗೊಂದಲಗಳಿಂದ ನಾನು ಪಾಠ ಕಲಿತಿದ್ದೇನೆ. ನನಗೆ ಏನು ಗೊತ್ತಿದೆಯೋ ಅದರ ಬಗ್ಗೆ ಮಾತ್ರ ನಾನು ಮಾತನಾಡುತ್ತೇನೆ. ಪ್ರತಿಯೊಂದು ವಿಷಯ ಮತ್ತು ಸಂಗತಿಗಳ ಬಗ್ಗೆ ಮಾತನಾಡುವ ಅಗತ್ಯ ಮತ್ತು ಅನಿವಾರ್ಯತೆ ಯಾರಿಯೂ ಇರುವುದಿಲ್ಲ ಎಂದು ಶಾರುಖ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

ಹುಟ್ಟುಹಬ್ಬದಂದು ಮಾತಾಡಿದ್ದ ಶಾರುಖ್
ಶಾರುಖ್ ಖಾನ್ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಅಸಹಿಷ್ಣುತೆ, ಜಾತ್ಯತೀತತೆ ಬಗ್ಗೆ ಮಾತನಾಡಿದ್ದರು. ದೇಶಭಕ್ತ ಮಾಡಬಹುದಾದ ದೊಡ್ಡ ತಪ್ಪೆಂದರೆ ದೇಶದ ಜಾತ್ಯತೀತತೆಯ ವಿರುದ್ಧ ಹೋಗುವುದು. ಇದು ಎಲ್ಲ ಕಾಲದಲ್ಲೂ ಒಂದೆಲ್ಲಾ ಒಂದು ರೀತಿಯಲ್ಲಿ ನಡೆದುಕೊಂಡು ಬರುತ್ತಿದೆ. ಬದಲಾದ ಸಮಾಜದಲ್ಲಿ ಇದರ ಅಗತ್ಯವಾದರೂ ಏನು? ಎಂದು ಪ್ರಶ್ನೆ ಮಾಡಿದ್ದರು.

ಅಮೀರ್ ಖಾನ್ ಕೊಟ್ಟ ಹೇಳಿಕೆಯೇನು?
ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂಬುದು ನಮ್ಮ ಕುಟುಂಬದ ಅನುಭವಕ್ಕೂ ಬಂದಿದೆ. ಮಕ್ಕಳ ಭವಿಷ್ಯಕ್ಕಾಗಿ ಈ ದೇಶವನ್ನು ತೊರೆಯೋಣ ಎಂದು ಹೆಂಡತಿ ಕಿರಣ್ ತರಾವ್ ನನ್ನಲ್ಲಿ ಹೇಳಿದ್ದರು ಎಂದು ಅಮೀರ್ ಖಾನ್ ಕಾರ್ಯಕ್ರಮವೊಂದರಲ್ಲಿ ಹೇಳಿದ್ದು ವಿವಾದದ ಲಕಿಡಿ ಹಬ್ಬಿಸಿತ್ತು.

ಜಾಲತಾಣಗಳಲ್ಲಿ ಆಕ್ರೋಶ
ಅಮೀರ್ ಖಾನ್ ಹೇಳಿಕೆ ಸಾಮಾಜಿಕ ತಾಣಗಳಲ್ಲಿ ಪ್ರತಿಧ್ವನಿಸಿತು. ನಾಗರಿಕರು ತಮ್ಮ ಅಭಿಪ್ರಾಯ ಮುಕ್ತವಾಗಿ ವ್ಯಕ್ತಪಡಿಸಿದರು. ಅಮೀರ್ ಖಾನ್ ವ್ಯಾಪಕ ಟೀಕೆಗೆ ಗುರಿಯಾಗಬೇಕಾಯಿತು. ಆತನ ರಾಯಭಾರತ್ವದ ಕಂಪನಿಗಳು ನಷ್ಟ ಮಾಡಿಕೊಂಡವು
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications