'ಗೆಳೆಯ' ಅಮೀರ್ ಖಾನ್ ಬಗ್ಗೆ ಶಾರುಖ್ ಹೇಳಿದ್ದೇನು?
ಮುಂಬೈ, ಡಿಸೆಂಬರ್. 01: ದೇಶದಲ್ಲಿ ಅಸಹಿಷ್ಣುತೆ ಬಗ್ಗೆ ವ್ಯಾಪಕ ಚರ್ಚೆ, ಗೊಂದಲ, ವಿವಾದಗಳು ನಡೆದಿವೆ ಮತ್ತು ನಡೆಯುತ್ತಿವೆ. ದೇಶ ಬಿಡುವ ಹೇಳಿಕೆ ನೀಡಿ ವಿವಾದದ ಕಿಚ್ಚು ಹೊತ್ತಿಸಿದ್ದ ಅಮೀರ್ ಖಾನ್ ಗೆ ಅಂತಿಮವಾಗಿ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಬೆಂಬಲದ ಹೇಳಿಕೆ ನೀಡಿದ್ದಾರೆ.
ಇಷ್ಟು ದಿನ ಮೌನವಾಗಿದ್ದ ಕಿಂಗ್ ಖಾನ್ ಇದೀಗ ಮಾತನಾಡಿದ್ದಾರೆ. 'ನೀವು ನಿಮ್ಮ ದೇಶ ಪ್ರೇಮವನ್ನು ಸಾಬೀತು ಮಾಡುವ ಅಗತ್ಯವಿಲ್ಲ. ದೇಶದ ಬಗ್ಗೆ, ದೇಶದ ಒಳಿತಿಗೆ ಚಿಂತಿಸಿದರೆ ಸಾಕು, ಎಲ್ಲವೂ ಒಳಿತಾಗುತ್ತದೆ' ಎಂಬ ಹೇಳಿಕೆ ನೀಡಿದ್ದಾರೆ.['ನನ್ನ ದೇಶಭಕ್ತಿಗೆ ಯಾರಿಂದಲೂ ಸರ್ಟಿಫಿಕೇಟ್ ಬೇಕಿಲ್ಲ']
ದೇಶದ ಲಾಭಕ್ಕೋಸ್ಕರ ಕೆಲಸ ಮಾಡಬೇಕು. ಒಂದು ವೇಳೆ ದೇಶದ ವಿರುದ್ಧ ಕೆಲಸ ಮಾಡಿದರೆ ಅದು ನಿನಗೂ ಮತ್ತು ರಾಷ್ಟ್ರಕ್ಕೂ ಹಾನಿ ಮಾಡುತ್ತದೆ ಎಂದು ಕಿಂಗ್ ಖಾನ್ ಮುಂದುವರಿದು ಹೇಳಿದ್ದಾರೆ.

ಗೊತ್ತಿರುವ ಸಂಗತಿ ಮಾತ್ರ ಮಾತನಾಡಿ
ಅಮೀರ್ ಖಾನ್ ಗೆ ಸಂಬಂಧಿಸಿದ ಅಸಹಿಷ್ಣುತೆ ಗೊಂದಲಗಳಿಂದ ನಾನು ಪಾಠ ಕಲಿತಿದ್ದೇನೆ. ನನಗೆ ಏನು ಗೊತ್ತಿದೆಯೋ ಅದರ ಬಗ್ಗೆ ಮಾತ್ರ ನಾನು ಮಾತನಾಡುತ್ತೇನೆ. ಪ್ರತಿಯೊಂದು ವಿಷಯ ಮತ್ತು ಸಂಗತಿಗಳ ಬಗ್ಗೆ ಮಾತನಾಡುವ ಅಗತ್ಯ ಮತ್ತು ಅನಿವಾರ್ಯತೆ ಯಾರಿಯೂ ಇರುವುದಿಲ್ಲ ಎಂದು ಶಾರುಖ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

ಹುಟ್ಟುಹಬ್ಬದಂದು ಮಾತಾಡಿದ್ದ ಶಾರುಖ್
ಶಾರುಖ್ ಖಾನ್ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಅಸಹಿಷ್ಣುತೆ, ಜಾತ್ಯತೀತತೆ ಬಗ್ಗೆ ಮಾತನಾಡಿದ್ದರು. ದೇಶಭಕ್ತ ಮಾಡಬಹುದಾದ ದೊಡ್ಡ ತಪ್ಪೆಂದರೆ ದೇಶದ ಜಾತ್ಯತೀತತೆಯ ವಿರುದ್ಧ ಹೋಗುವುದು. ಇದು ಎಲ್ಲ ಕಾಲದಲ್ಲೂ ಒಂದೆಲ್ಲಾ ಒಂದು ರೀತಿಯಲ್ಲಿ ನಡೆದುಕೊಂಡು ಬರುತ್ತಿದೆ. ಬದಲಾದ ಸಮಾಜದಲ್ಲಿ ಇದರ ಅಗತ್ಯವಾದರೂ ಏನು? ಎಂದು ಪ್ರಶ್ನೆ ಮಾಡಿದ್ದರು.

ಅಮೀರ್ ಖಾನ್ ಕೊಟ್ಟ ಹೇಳಿಕೆಯೇನು?
ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂಬುದು ನಮ್ಮ ಕುಟುಂಬದ ಅನುಭವಕ್ಕೂ ಬಂದಿದೆ. ಮಕ್ಕಳ ಭವಿಷ್ಯಕ್ಕಾಗಿ ಈ ದೇಶವನ್ನು ತೊರೆಯೋಣ ಎಂದು ಹೆಂಡತಿ ಕಿರಣ್ ತರಾವ್ ನನ್ನಲ್ಲಿ ಹೇಳಿದ್ದರು ಎಂದು ಅಮೀರ್ ಖಾನ್ ಕಾರ್ಯಕ್ರಮವೊಂದರಲ್ಲಿ ಹೇಳಿದ್ದು ವಿವಾದದ ಲಕಿಡಿ ಹಬ್ಬಿಸಿತ್ತು.

ಜಾಲತಾಣಗಳಲ್ಲಿ ಆಕ್ರೋಶ
ಅಮೀರ್ ಖಾನ್ ಹೇಳಿಕೆ ಸಾಮಾಜಿಕ ತಾಣಗಳಲ್ಲಿ ಪ್ರತಿಧ್ವನಿಸಿತು. ನಾಗರಿಕರು ತಮ್ಮ ಅಭಿಪ್ರಾಯ ಮುಕ್ತವಾಗಿ ವ್ಯಕ್ತಪಡಿಸಿದರು. ಅಮೀರ್ ಖಾನ್ ವ್ಯಾಪಕ ಟೀಕೆಗೆ ಗುರಿಯಾಗಬೇಕಾಯಿತು. ಆತನ ರಾಯಭಾರತ್ವದ ಕಂಪನಿಗಳು ನಷ್ಟ ಮಾಡಿಕೊಂಡವು
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications