ಕಾಶ್ಮೀರದಲ್ಲಿ ಶಾಂತಿ ಕದಡಲು 30 ಕೋಟಿಗೂ ಹೆಚ್ಚು ಹಣ: ಎನ್ ಐಎ ತನಿಖೆ
ಕಾಶ್ಮೀರ, ಆಗಸ್ಟ್ 20: ಕಳೆದ ಒಂದು ತಿಂಗಳಿಂದ ಜಮ್ಮು-ಕಾಶ್ಮೀರದಲ್ಲಿ ಅನುಮಾನಾಸ್ಪದವಾಗಿ ನಡೆದ ಬ್ಯಾಂಕ್ ವ್ಯವಹಾರಗಳ ಮೇಲೆ ರಾಪ್ಟ್ರೀಯ ತನಿಖಾ ದಳ ಕಣ್ಣಿರಿಸಿದ್ದು, ಅನುಮಾನ ಮೂಡಿಸುವಂಥ ಬ್ಯಾಂಕ್ ಖಾತೆಗಳ ಪಟ್ಟಿ ತಯಾರಿಸುವಲ್ಲಿ ನಿರತವಾಗಿದೆ.
ಜುಲೈ 8ರಂದು ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದಕ ಬುಹ್ರಾನ್ ವನಿ ಎನ್ ಕೌಂಟರ್ ನಂತರ ಕಣಿವೆ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಬೆಂಬಲ ನೀಡಲು ಹೊರಗಡೆಯಿಂದ ಹಣ ಹರಿದುಬಂದಿದೆ ಎಂಬ ಗುಮಾನಿಯಿಂದ ತನಿಖೆ ನಡೆಯುತ್ತಿದೆ.[4 ಸಲ ಭಾರತಕ್ಕೆ ಬಂದಿದ್ದ ಪಾಕಿಸ್ತಾನ ಗೂಢಚಾರನಿಗೆ 3 ಸಾವಿರ ಸಂಬಳ]

ರಾಪ್ಟ್ರೀಯ ತನಿಖಾ ದಳವು ರಾಜ್ಯದ ಬ್ಯಾಂಕ್ ಗಳನ್ನು ಸಂಪರ್ಕಿಸಿ, ಅನುಮಾನ ಮೂಡಿಸುವಂಥ ಹಣಕಾಸು ವ್ಯವಹಾರ ನಡೆದಿರುವ ಖಾತೆಗಳ ವಿವರಗಳನ್ನು ನೀಡುವಂತೆ ಮನವಿ ಮಾಡಿದೆ. ದೊಡ್ಡ ಮೊತ್ತದ ಹಣ ವಿವಿಧ ಬ್ಯಾಂಕ್ ಖಾತೆಗಳಲ್ಲಿ ಜಮೆಯಾಗಿದೆ ಮತ್ತು ಕಣಿವೆ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಮಾಡುವ ಸಲುವಾಗಿಯೇ ಹತ್ತಿರ ಹತ್ತಿರ 30 ಕೋಟಿ ರುಪಾಯಿ ಹಲವು ಬ್ಯಾಂಕ್ ಖಾತೆಗಳಿಗೆ ಜಮೆಯಾಗಿವೆ ಎಂಬ ಅನುಮಾನವನ್ನು ಗುಪ್ತಚರ ಇಲಾಖೆ ವ್ಯಕ್ತಪಡಿಸಿದೆ.
ಗಲ್ಫ್ ನಲ್ಲಿರುವ ಕಾಶ್ಮೀರ ಮೂಲದ ಕೆಲವು ವ್ಯಾಪಾರಿಗಳ ಮೂಲಕವು ಹಣ ಹರಿದುಬಂದಿದೆ. ಹಣಕಾಸು ವ್ಯವಹಾರದ ಬಗ್ಗೆ ಅನುಮಾನ ಬರಕೂಡದು ಎಂಬ ಕಾರಣಕ್ಕೆ ತಾವು ಖರೀದಿಸಿದ ಸರಕುಗಳಿಗೆ ಹೆಚ್ಚಿನ ಪಾವತಿ ಮಾಡಿರುವ ಸಾಧ್ಯತೆ ಇದೆ ಯೇ ಎಂಬ ದಿಕ್ಕಿನಿಂದಲೂ ಎನ್ ಐಎ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.[ಪಾಕ್ ಸುದ್ದಿ ಬಂದಾಗ ದಿಗ್ವಿಜಯ್ ಸಿಂಗ್ ಬಾಯಿ ಬಿಡೋದು ಯಾಕೆ?]
ಅನುಮಾನಾಸ್ಪದ ವ್ಯವಹಾರಗಳ ಪಟ್ಟಿ ಬ್ಯಾಂಕ್ ಗಳಿಂದ ದೊರೆತ ನಂತರ ಆಯಾ ವ್ಯಕ್ತಿಗಳನ್ನು ವೈಯಕ್ತಿಕವಾಗಿ ವಿಚಾರಣೆ ನಡೆಸಲಾಗುವುದು. ಇದರ ಜತೆಗೆ ಕಾಶ್ಮೀರದಲ್ಲಿ ಶಾಂತಿ ಕದಡಲು ಹವಾಲಾ ಮೂಲಕವೇನಾದರೂ ಹಣ ಬಂದಿದೆಯೇ ಎಂದು ಕೂಡ ತನಿಖೆ ನಡೆಸಲಾಗುವುದು ಎಂದು ರಾಪ್ಟ್ರೀಯ ತನಿಖಾ ದಳದ ಅಧಿಕಾರಿಗಳು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications