ಐಪಿಸಿ ಸೆಕ್ಷನ್ 377 ರದ್ದತಿ: ವಿಚಾರಣೆ ಜುಲೈ 17ಕ್ಕೆ ಮುಂದೂಡಿಕೆ
ನವದೆಹಲಿ, ಜುಲೈ 12: ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 377ರ ರದ್ದತಿಗೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ನ ಸಾಂವಿಧಾನಿಕ ಪೀಠ ಜುಲೈ 17ಕ್ಕೆ ಮುಂದೂಡಿದೆ.
ಸಲಿಂಗಕಾಮವನ್ನು ಅಪರಾಧ ಎಂದು ಪರಿಗಣಿಸುವ ಐಪಿಸಿ ಸೆಕ್ಷನ್ 377ಅನ್ನು ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಮೂರು ದಿನಗಳಿಂದ ನಡೆದಿತ್ತು.
ಸೆಕ್ಷನ್ 377ರ ಸಾಂವಿಧಾನಿಕ ಸಿಂಧುತ್ವ ನಿರ್ಧರಿಸುವುದನ್ನು ಸುಪ್ರೀಂಕೋರ್ಟ್ ವಿವೇಚನೆಗೆ ಬಿಡುವುದಾಗಿ ಕೇಂದ್ರ ಸರ್ಕಾರ ಬುಧವಾರ ತಿಳಿಸಿತ್ತು.

ಅರ್ಜಿದಾರರ ಪೈಕಿ ಒಬ್ಬರ ಪರವಾಗಿ ಹಾಜರಾದ ವಕೀಲ ಅಶೋಕ್ ದೇಸಾಯಿ, ಸಂಸ್ಕೃತಿಯ ಭಾಗವಾಗಿ ಸಲಿಂಗ ಕಾಮ ಅಸ್ತಿತ್ವದಲ್ಲಿದೆ. ಅನೇಕ ದೇಶಗಳು ಸಲಿಂಗಕಾಮವನ್ನು ಒಪ್ಪಿಕೊಂಡಿವೆ ಎಂದು ಐವರು ನ್ಯಾಯಮೂರ್ತಿಗಳ ಪೀಠಕ್ಕೆ ತಿಳಿಸಿದರು.
ಸೆಕ್ಷನ್ 377 ಅಡಿಯಲ್ಲಿ ಸಲಿಂಗಕಾಮ ಅಪರಾಧವಲ್ಲ ಎಂದು 2009ರಲ್ಲಿ ದೆಹಲಿ ಹೈಕೋರ್ಟ್ ತೀರ್ಪು ನೀಡಿತ್ತು.
ಆದರೆ, ಈ ತೀರ್ಪನ್ನು 2013ರಲ್ಲಿ ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಈ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ಕೋರಿ ವಿವಿಧ ಸಂಘಟನೆಗಳು ಮತ್ತು ವ್ಯಕ್ತಿಗಳು ಅರ್ಜಿ ಸಲ್ಲಿಸಿದ್ದರು.
ಮನುಷ್ಯನು ತನ್ನದೇ ಲಿಂಗದ ವ್ಯಕ್ತಿಯೊಂದಿಗೆ ಅಥವಾ ಪ್ರಾಣಿಗಳ ಜತೆ ಲೈಂಗಿಕ ಸಂಪರ್ಕ ಹೊಂದುವುದು ನಿಸರ್ಗದ ನಿಯಮಕ್ಕೆ ವಿರುದ್ಧವಾದುದು ಎಂದು ಸೆಕ್ಷನ್ 377 ಪ್ರತಿಪಾದಿಸಿದೆ.
ಇದರ ಅನ್ವಯ ಅಪರಾಧಿಗಳಿಗೆ ಜೀವಾವಧಿ ಜೈಲು ಶಿಕ್ಷೆ ಅಥವಾ ಹತ್ತು ವರ್ಷಗಳವರೆಗೆ ಸೆರೆವಾಸ ಹಾಗೂ ದಂಡ ವಿಧಿಸಲು ಅವಕಾಶವಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications