Transfer: 6 ಐಪಿಎಸ್, 3 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಚುನಾವಣಾ ಆಯೋಗ
ಬೆಂಗಳೂರು, ಏಪ್ರಿಲ್ 02: ದೇಶಾದ್ಯಂತ ಲೋಕಸಭಾ ಚುನಾವಣೆ ಕಾವು ಹೆಚ್ಚಾಗತೊಡಗಿದೆ. ರಾಜಕೀಯ ಪಕ್ಷಗಳು ಚುನಾವಣ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ಕೇಂದ್ರ ಚುನಾವಣಾ ಆಯೋಗವು (ಇಸಿಐ) 06 ಐಪಿಎಸ್ ಅಧಿಕಾರಿಗಳು ಮತ್ತು 03 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಮಂಗಳವಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಭಾರತೀಯ ಚುನಾವಣೆ ಆಯೋಗವು ಅಧಿಕಾರಿಗಳಿಗೆ ಅಧಿಕಾರವನ್ನು ತಕ್ಷಣದ ಕೆಳಗಿನ ಶ್ರೇಣಿಯ ಅಧಿಕಾರಿಗೆ ಹಸ್ತಾಂತರಿಸುವಂತೆ ಸೂಚಿಸಿದೆ. ವರ್ಗಾವಣೆಯ ಅಧಿಕಾರಿಗಳಿಗೆ ಯಾವುದೇ ಚುನಾವಣಾ ಸಂಬಂಧಿತ ಕರ್ತವ್ಯಗಳನ್ನು ನಿಯೋಜಿಸಬಾರದು ಎಂದು ತಿಳಿಸಿದೆ.

ಆಂಧ್ರಪ್ರದೇಶದಲ್ಲಿ ಈ ಒಟ್ಟು 9 ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಕೃಷ್ಣಾ ಜಿಲ್ಲೆಯ ಡಿಇಒ ಪಿ ರಾಜಾ ಬಾಬು, ಅನಂತಪುರಂ ಡಿಇಒ ಎಂ ಗೌತಮಿ, ಡಿಇಒ ತಿರುಪತಿ ಡಾ.ಲಕ್ಷ್ಮೀಶ ಅವರು ವರ್ಗಾವಣೆಗೊಂಡ ಮೂವರು ಐಎಎಸ್ ಅಧಿಕಾರಿಗಳಾಗಿದ್ದಾರೆ.
ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಹಿತಿ
ಚಿತ್ತೂರು ಎಸ್ಪಿ ಪಿ.ಜೋಶುವಾ, ಪ್ರಕಾಶಂ ಎಸ್ಪಿ ಪರಮೇಶ್ವರ್, ಪಲ್ನಾಡು ಎಸ್ಪಿ ವೈ.ರವಿಶಂಕರ್ ರೆಡ್ಡಿ, ಅನಂತಪುರಂ ಎಸ್ಪಿ ಕೆಕೆಎನ್ ಅನ್ಬುರಾಜನ್, ನೆಲ್ಲೂರು ಎಸ್ಪಿ ಕೆ ತಿರುಮಲೇಶ್ವರ್ ಮತ್ತು ಐಜಿಪಿ ಗುಂಟೂರು ರೇಂಜ್ ಜಿ ಪಾಲ ರಾಜು ಅವರು ವರ್ಗಾಗವಣೆಗೊಂಡ ಐಪಿಎಸ್ ಅಧಿಕಾರಿಗಳು ಎಂದು ಚುನಾವಣೆ ಆಯೋಗ ತಿಳಿಸಿದೆ.

ಮಾರ್ಚ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರ ಪಾಲ್ನಾಡು ಸಭೆಯಲ್ಲಿ ಭದ್ರತಾ ಲೋಪ ಆರೋಪದ ಮೇಲೆ ಐಜಿಪಿ ಗುಂಟೂರು ರೇಂಜ್ ಜಿ ಪಾಲ ರಾಜು ಮತ್ತು ಪಲ್ನಾಡು ಎಸ್ ವೈ ರವಿಶಂಕರ್ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ.
ಆಂಧ್ರದಲ್ಲಿ ಲೋಕಸಭಾ-ವಿಧಾನಸಭಾ ಚುನಾವಣೆ
ತೆಲುಗು ನಾಡು ಆಂಧ್ರಪ್ರದೇಶದಲ್ಲಿ ಮುಂದಿನ ತಿಂಗಳು ಮೇ 13 ರಂದು ಚುನಾವಣೆ ನಡೆಯಲಿದ್ದು. ವಿಶೇಷವೆಂದರೆ ಲೋಕಸಭಾ ಚುನಾವಣೆ ಜೊತೆಗೆ ಈ ಬಾರಿ ಇಲ್ಲಿನ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇಲ್ಲಿ ಒಟ್ಟು 25 ಲೋಕಸಭಾ ಕ್ಷೇತ್ರಗಳು ಇವೆ.
ಆಂಧ್ರಪ್ರದೇಶದಲ್ಲಿ ಸದ್ಯ ಸಿಎಂ ಜಗನ್ ಮೋಹನ್ ರೆಡ್ಡಿಯವರ ವೈಎಸ್ಆರ್ಸಿಪಿ ಪಕ್ಷದ ಆಡಳಿತವಿದೆ. ತೆಲುಗು ದೇಶಂ ಪಕ್ಷ (ಟಿಡಿಪಿ) ವಿರೋಧ ಪಕ್ಷದ ಸ್ಥಾನದಲ್ಲಿದೆ. ಜನಸೇನಾ ಮತ್ತು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಇಲ್ಲಿ ಪ್ರತಿಪಕ್ಷ ಮತ್ತು ವಿಪಕ್ಷಗಳ ಮಧ್ಯೆ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications