ಭಾರತದಲ್ಲಿ ಒಂದೇ ದಿನ 54,000 ರೈಲ್ವೆ ಟಿಕೆಟ್ ರಿಸರ್ವ್!
ನವದೆಹಲಿ, ಮೇ.11: ಭಾರತ ಲಾಕ್ ಡೌನ್ ನಡುವೆ ಪ್ಯಾಸೆಂಜರ್ ರೈಲುಗಳಲ್ಲಿ ರಿಸರ್ವೇಶನ್ ಮಾಡುವುದಕ್ಕೆ ಭಾರತೀಯ ರೈಲ್ವೆ ಅನುಮತಿ ನೀಡಿದ್ದೇ ತಡ ಸೋಮವಾರ ಒಂದೇ ದಿನ 54,000 ಪ್ರಯಾಣಿಕರು ಟಿಕೆಟ್ ಬುಕ್ ಮಾಡಿದ್ದಾರೆ.
ಮೇ.11ರ ಸೋಮವಾರ ಪ್ಯಾಸೆಂಜರ್ ರೈಲುಗಳಿಗೆ ಆನ್ ಲೈನ್ ರಿಸರ್ವೇಶನ್ ಸೇವೆ ಆರಂಭಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಭಾನುವಾರವಷ್ಟೇ ಅಧಿಕೃತವಾಗಿ ಘೋಷಿಸಿತ್ತು. ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ಐಆರ್ ಸಿಟಿಸಿಯಲ್ಲಿ ಸಂಜೆ 4 ಗಂಟೆಯಿಂದ ಟಿಕೆಟ್ ಬುಕ್ಕಿಂಗ್ ಶುರುವಾಯಿತು.
ಸಂಜೆ 4 ಗಂಟೆಗೆ ಆರಂಭವಾದ ಬುಕ್ಕಿಂಗ್ ರಾತ್ರಿ 9.15ರ ವೇಳೆಗೆ ದೇಶಾದ್ಯಂತ 54,000 ಮಂದಿ ಪ್ರಯಾಣಿಕರು ಆನ್ ಲೈನ್ ನಲ್ಲಿ ಟಿಕೆಟ್ ರಿಸರ್ವ್ ಮಾಡಿದ್ದಾರೆ. ಇದರ ಜೊತೆಗೆ 30,000 ಪ್ರಯಾಣಿಕರು ಪಿಎನ್ಆರ್ ಜನರೇಟ್ ಮಾಡಿಕೊಂಡಿದ್ದಾರೆ.

10 ನಿಮಿಷದಲ್ಲೇ ಎರಡು ಬೋಗಿಗಳ ಟಿಕೆಟ್ ಬುಕ್:
ಹೌರಾ ಮತ್ತು ನವದೆಹಲಿ ನಡುವಿನ ರೈಲ್ವೆ ಬುಕ್ಕಿಂಗ್ ಸೇವೆ ಆರಂಭವಾಗಿ ಹತ್ತೇ ನಿಮಿಷದಲ್ಲಿ ಎಸಿ-1 ಹಾಗೂ ಎಸಿ-3 ಕೋಚ್ ನ ಎಲ್ಲ ಟಿಕೆಟ್ ಗಳನ್ನ್ನು ಪ್ರಯಾಣಿಕರು ರಿಸರ್ವ್ ಮಾಡಿದ್ದಾರೆ ಎಂದು ಭಾರತೀಯ ರೈಲ್ವೆ ಇಲಾಖೆಯು ತಿಳಿಸಿದೆ.
ಮೇ.12ರ ಮಂಗಳವಾರದಿಂದ ನವದೆಹಲಿಯಿಂದ ದೇಶದ 15 ಪ್ರಮುಖ ನಗರಗಳಿಗೆ ಪ್ಯಾಸೆಂಜರ್ ರೈಲುಗಳ ಸಂಚಾರ ಆರಂಭವಾಗಲಿದೆ. ರಾಷ್ಟ್ರ ರಾಜಧಾನಿ ನವದೆಹಲಿ, ದಿಬ್ರುಘರ್, ಅಗರ್ತಲಾ, ಹೌರಾ, ಪಾಟ್ನಾ, ಬಿಸಲ್ ಪುರ್, ರಾಂಚಿ, ಭುವನೇಶ್ವರ್, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡಗಾವ್, ಕೇಂದ್ರ ಮುಂಬೈ, ಅಹ್ಮದಾಬಾದ್ ಹಾಗೂ ಜಮ್ಮುವಿನಲ್ಲಿ ರೈಲ್ವೆ ಸೇವೆ ಆರಂಭವಾಗಲಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications