IRCTC ಕೆಲವು ರೈಲುಗಳಲ್ಲಿ 'ಪ್ರಮಾಣೀಕೃತ ಸಾತ್ವಿಕ ಆಹಾರ' ಲಭ್ಯ!
ನವದೆಹಲಿ, ನವೆಂಬರ್ 16: ಶೀಘ್ರದಲ್ಲೇ ಕೆಲವು ರೈಲುಗಳಲ್ಲಿ ಪ್ರಯಾಣಿಕರು 'ಪ್ರಮಾಣೀಕೃತ ಸಸ್ಯಾಹಾರಿ ಆಹಾರ' ವನ್ನು ಪಡೆಯಲು ಸಾಧ್ಯವಾಗಲಿದೆ. ಹೌದು, IRCTC ಯ ಕೆಲವು ರೈಲುಗಳಲ್ಲಿ ಇನ್ನು ಮುಂದೆ 'ಪ್ರಮಾಣೀಕೃತ ಸಸ್ಯಾಹಾರಿ ಆಹಾರ' ಲಭ್ಯವಾಗಲಿದೆ.
ಸಾತ್ವಿಕ್ ಕೌನ್ಸಿಲ್ ಆಫ್ ಇಂಡಿಯಾದ ಜೊತೆ ಐಆರ್ಸಿಟಿಸಿ ಸೋಮವಾರ ಕೈಜೋಡಿಸಿದೆ. ಈ ಮೂಲಕ ಇನ್ನು ಮುಂದೆ ಐಆರ್ಸಿಟಿಸಿ ಯ ರೈಲುಗಳಿಗೆ ಸಸ್ಯಾಹಾರವನ್ನು ಸಿದ್ಧಪಡಿಸುವ ಅಡುಗೆ ಮನೆಯಲ್ಲಿ ಈ ಸಾತ್ವಿಕ್ ಕೌನ್ಸಿಲ್ ಆಫ್ ಇಂಡಿಯಾದ ಪ್ರತಿನಿಧಿಗಳು ಹಾಜರಿದ್ದು, ಅಡುಗೆ ಮಾಡುವುದು, ಸಾಗಾಟ ಹಾಗೂ ಸಂಗ್ರಹ ಪ್ರಕ್ರಿಯೆಯನ್ನು ಪರಿಶೀಲಿಸಿ ಪ್ರಮಾಣೀಕರಣ ನೀಡಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಧಾರ್ಮಿಕ ಸ್ಥಳಗಳಿಗೆ ಹೋಗುವ ರೈಲುಗಳಲ್ಲಿ ಈ ಆಹಾರ ಲಭ್ಯವಾಗಲಿದೆ ಎಂದು ವರದಿಯು ಉಲ್ಲೇಖ ಮಾಡಿದೆ.
"ಸಸ್ಯಾಹಾರವನ್ನು ಅದು ಸಸ್ಯಾಹಾರ ಎಂದು ನೀಡುವುದು ಅಲ್ಲ. ಅದು ಸಾತ್ವಿಕವಾದ ಆಹಾರ ಎಂದು ಪ್ರಮಾಣೀಕರಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ," ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧಾರ್ಮಿಕ ಕೇಂದ್ರಗಳಿಗೆ ಸಂಚಾರ ಮಾಡುವ ಈ ಸಾತ್ವಿಕ ಆಹಾರವು ವಂದೇ ಭಾರತ್ ಮಾತ್ರವಲ್ಲದೇ ಬೇರೆ ಒಟ್ಟು 18 ರೈಲುಗಳಲ್ಲಿ ಇರಲಿದೆ.

ಯಾಕಾಗಿ ಈ ಸಾತ್ವಿಕ ಪ್ರಮಾಣ ಪತ್ರ?
"ಸಾತ್ವಿಕ ಪ್ರಮಾಣ ಪತ್ರವು ಸಸ್ಯಾಹಾರವನ್ನು ಸಿದ್ಧ ಪಡಿಸುವ ಪ್ರಕ್ರಿಯೆಗೆ ನೀಡುವ ಪ್ರಮಾಣ ಪತ್ರವಾಗಿದೆ. ಯಾವುದೇ ಮಾಂಸಹಾರವಿಲ್ಲದ ವಾತಾವರಣದಲ್ಲಿಯೇ ಸಸ್ಯಾಹಾರವನ್ನು ಸಿದ್ಧಪಡಿಸಿದೆಯೇ ಎಂದು ಖಚಿತ ಪಡಿಸಿಕೊಂಡು ಆಹಾರವನ್ನು ಪಡೆದ ಜನರು ಹಲವಾರು ಮಂದಿ ಇದ್ದಾರೆ. ಜನರಲ್ಲಿ ಈ ಆಹಾರವು ಸಸ್ಯಾಹಾರ ಎಂದು ವಿಶ್ವಾಸ ನೀಡುವ ನಿಟ್ಟಿನಲ್ಲಿ ಈ ಸಾತ್ವಿಕ ಆಹಾರದ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ," ಎಂದು ಐಆರ್ಸಿಟಿಸಿ ವಕ್ತಾರ ಆನಂದ್ ಜಾ ತಿಳಿಸಿದ್ದಾರೆ. ಹಾಗೆಯೇ, "ಮಾಂಸಾಹಾರಕ್ಕೆ ಯಾವುದೇ ನಿರ್ಬಂಧ ಇದೆ ಎಂದು ಇದರ ಅರ್ಥವಲ್ಲ," ಎಂದು ಕೂಡಾ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.
ಎಸ್ಸಿಐ ಪತ್ರಿಕಾ ಹೇಳಿಕೆಯನ್ನು ಹೊರಡಿಸಿದ್ದು, ಇದರಲ್ಲಿ ಎನ್ಜಿಒ ಸಾತ್ವಿಕ್ ಪ್ರಮಾಣೀಕರಣ ಯೋಜನೆಯನ್ನು ಪ್ರಾರಂಭಿಸಿದೆ ಎಂದು ತಿಳಿಸಿದೆ. "ಇದು ಮೊದಲು ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಆರಂಭವಾಗಲಿದೆ. ಹಾಗೆಯೇ 18 ರೈಲುಗಳಲ್ಲಿ ಆರಂಭವಾಗಲಿದೆ. ಮುಖ್ಯವಾಗಿ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ರೈಲುಗಳಲ್ಲಿ ಈ ಸಾತ್ವಿಕ ಆಹಾರ ಲಭ್ಯವಾಗಲಿದೆ. "ಈ ಆಹಾರವು ನಿಜಕ್ಕೂ ಸಸ್ಯಾಹಾರವೇ ಆಗಿದೆ. ಸಸ್ಯಾಹಾರಿಗಳು ಯಾವುದೇ ಅನುಮಾನವಿಲ್ಲದೇ ಈ ಆಹಾರವನ್ನು ಸೇವನೆ ಮಾಡಬಹುದು. ಈ ಆಹಾರವನ್ನು ಸಿದ್ಧಪಡಿಸಿದ ಅಡುಗೆ ಮನೆಯಲ್ಲಿ ಎಲ್ಲಾ ಸಸ್ಯಾಹಾರ ವಸ್ತುಗಳನ್ನೇ ಬಳಸಲಾಗಿದೆ ಎಂಬುವುದನ್ನು ಖಚಿತ ಪಡಿಸುವ ನಿಟ್ಟಿನಲ್ಲಿ ಈ ಸಾತ್ವಿಕ ಪ್ರಮಾಣಪತ್ರವನ್ನು ನೀಡಲಾಗುತ್ತದೆ," ಎಂದು ಕೂಡಾ ಪತ್ರಿಕಾ ಪ್ರಕಟಣೆಯಲ್ಲಿ ಸೇರಿಸಲಾಗಿದೆ.
Sattvik Council of India is the “WORLD’S FIRST VEGETARIAN” food safety n regulatory compliance for vegetarian and allied adherents. It came up with an ideology to take initiative and create a Food Safety Environment especially for the vegetarian’s consumers of India and global.
— Ram Ahgir (@RamAhgir2) November 15, 2021
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಸಿಐ ಸ್ಥಾಪಕ ಅಭಿಷೇಕ್ ಬಿಸ್ವಾಸ್, "ಪ್ರವಾಸೋದ್ಯಮದಲ್ಲಿ ಸಸ್ಯಾಹಾರಿಗಳು ಅಧಿಕ ಪ್ರಭಾವ ಬೀರುತ್ತಾರೆ. ಸಸ್ಯಾಹಾರಿಗಳು ಪ್ರವಾಸವನ್ನು ಅಧಿಕವಾಗಿ ಮಾಡುತ್ತಿದ್ದಾರೆ. ಜಾಗತಿಕ ಪ್ರಯಾಣ ಉದ್ಯಮದಲ್ಲಿ ವೇಗವಾಗಿ ಬೆಳೆಯುತ್ತಿದೆ. ಹೆಚ್ಚಿನ ಜನರು ಪ್ರಯಾಣ ಮಾಡುವ ಸಂದರ್ಭದಲ್ಲಿ ಸಸ್ಯಾಹಾರಿ ಆಹಾರ ಹಾಗೂ ಪರಿಸರಕ್ಕೆ ಆದ್ಯತೆ ನೀಡುತ್ತಾರೆ. ಆದ್ದರಿಂದ ರೆಸ್ಟೋರೆಂಟ್ಗಳಲ್ಲಿ ಪ್ರಮಾಣೀಕೃತ ಸಸ್ಯಾಹಾರಿ ಆಹಾರವನ್ನು ಅಭಿವೃದ್ಧಿಪಡಿಸುವುದು ಅತ್ಯಗತ್ಯ," ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೀಗಿದೆ ನೆಟ್ಟಿಗರ ಪ್ರತಿಕ್ರಿಯೆ..
ರೈಲುಗಳಲ್ಲಿ ಸಾತ್ವಿಕ ಆಹಾರ ಲಭ್ಯವಾಗುವ ವಿಚಾರವು ಟ್ಟಿಟ್ಟರ್ನಲ್ಲಿಯೂ ಸದ್ದು ಮಾಡುತ್ತಿದೆ. ನೆಟ್ಟಿಗರು ಇದಕ್ಕೆ ತಮ್ಮದೇ ಆದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. "ಸಾತ್ವಿಕ್ ಕೌನ್ಸಿಲ್ ಆಫ್ ಇಂಡಿಯಾ ಉತ್ತಮ ಕಾರ್ಯವನ್ನು ಮಾಡುತ್ತಿದೆ. ಐಆರ್ಸಿಟಿಸಿ ಯ ಷೇರುದಾರರಾಗಿ ಹೆಮ್ಮೆ ಎನಿಸುತ್ತಿದೆ," ಎಂದು ಹರೀಶ್ ಪಾಟೀಲ್ ಟ್ವೀಟ್ ಮಾಡಿದ್ದಾರೆ. "ಅಂತಿಮವಾಗಿ ಧಾರ್ಮಿಕ ಕೇಂದ್ರಗಳಿಗೆ ಹೋಗುವ ರೈಲುಗಳಲ್ಲಿ ಸಾತ್ವಿಕ ಆಹಾರ ಲಭ್ಯವಾಗಲಿದೆ," ಎಂದು ಆಕಾಶ್ ಬರ್ವಾಲ್ ಎಂಬವರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಇದನ್ನು ಹಾಸ್ಯ ಮಾಡಿದ್ದಾರೆ. "ಹಾಗಾದರೆ ಇನ್ನು ಮುಂದೆ ಐಆರ್ಸಿಟಿಸಿ ಟಿಕೆಟ್ ಬುಕ್ಕಿಂಗ್ ವೇಳೆ ಸಸ್ಯಾಹಾರಿ/ಮಾಂಸಹಾರಿ ಎಂದು ನೊಂದಾವಣಿ ಮಾಡುವುದು ಕಡ್ಡಾಯವಾಗುತ್ತದೆ. ನಾವು ಮಾಂಸಾಹಾರಿ ಎಂದು ಆಯ್ಕೆ ಮಾಡಿದರೆ, ನಮೆಗ ಟಿಕೆಟ್ ಸಿಗಲ್ಲ," ಎಂದು ವ್ಯಂಗ್ಯವಾಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications