"ತೆರಿಗೆ ಪಾವತಿಗಳಲ್ಲಿ ಅಕ್ರಮಗಳು": BBC ವಿರುದ್ಧ ಆದಾಯ ತೆರಿಗೆ ಇಲಾಖೆ ಆರೋಪ!
ಮೂರು ದಿನಗಳ ಸಮೀಕ್ಷೆಯ ನಂತರ ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಲೆಕ್ಕಪತ್ರ ಪುಸ್ತಕಗಳಲ್ಲಿ ಅಕ್ರಮಗಳನ್ನು ಬಹಿರಂಗಪಡಿಸಲಾಗಿದೆ ಎಂದು ಭಾರತದ ಆದಾಯ ತೆರಿಗೆ ಇಲಾಖೆ ಹೇಳಿದೆ.
ಹೊಸದಿಲ್ಲಿ ಫೆಬ್ರವರಿ 17: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಸಾಕ್ಷ್ಯಚಿತ್ರ ಪ್ರಸಾರಕ್ಕೆ ಪ್ರತೀಕಾರವಾಗಿ ನಡೆದಿದೆ ಎನ್ನಲಾದ ಬಿಬಿಸಿ ಕಚೇರಿ ಮೇಲಿನ ದಾಳಿ ಬಗ್ಗೆ ಆದಾಯ ತೆರಿಗೆ ಇಲಾಖೆ ಮಹತ್ವದ ಹೇಳಿಕೆಯನ್ನು ನೀಡಿದೆ. ಮೂರು ದಿನಗಳ ಸಮೀಕ್ಷೆಯ ನಂತರ ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಲೆಕ್ಕಪತ್ರ ಪುಸ್ತಕಗಳಲ್ಲಿ ಅಕ್ರಮಗಳನ್ನು ಬಹಿರಂಗಪಡಿಸಲಾಗಿದೆ ಎಂದು ಭಾರತದ ಆದಾಯ ತೆರಿಗೆ ಇಲಾಖೆ ಹೇಳಿದೆ.
ಪಿಎಂ ಮೋದಿ ಮತ್ತು 2002 ರ ಗುಜರಾತ್ ಗಲಭೆಗಳ ಕುರಿತು ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದ ವಾರಗಳ ನಂತರ ಐಟಿ ದಾಳಿ ನಡೆದಿದೆ. ದಾಳಿ ಬಳಿಕ ಆದಾಯ ತೆರಿಗೆ ಇಲಾಖೆಯು BBC ಯ ವಿವಿಧ ಘಟಕಗಳು ಬಹಿರಂಗಪಡಿಸಿದ ಆದಾಯ ಮತ್ತು ಲಾಭಗಳು "ಭಾರತದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಅನುಗುಣವಾಗಿಲ್ಲ" ಎಂದು ಆರೋಪಿಸಿದೆ.

ಆದಾಯ ತೆರಿಗೆ ಇಲಾಖೆ ಇದಕ್ಕೆ ಸಂಬಂಧಿಸಿದಂತೆ "ಹಲವಾರು ಪುರಾವೆಗಳನ್ನು (sic)" ಸಂಗ್ರಹಿಸಿದೆ. ಉದ್ಯೋಗಿಗಳ ಹೇಳಿಕೆಗಳು, ಡಿಜಿಟಲ್ ಫೈಲ್ಗಳು ಮತ್ತು ದಾಖಲೆಗಳನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದೆ ಎಂದು ಹೇಳಿದೆ. ಭಾರತದಲ್ಲಿ ಆದಾಯವೆಂದು ಬಹಿರಂಗಪಡಿಸದ ಕೆಲವು ರವಾನೆಗಳ ಮೇಲೆ ತೆರಿಗೆಯನ್ನು ಪಾವತಿಸಲಾಗಿಲ್ಲ ಎಂದು ಸೂಚಿಸುತ್ತದೆ ಎಂದು ತೆರಿಗೆ ಇಲಾಖೆ ಹೇಳಿಕೊಂಡಿದೆ.
ಇಲಾಖೆಯು BBC ಸಿಬ್ಬಂದಿಗಳು ತನಿಖೆಯನ್ನು ವಿಳಂಬಗೊಳಿಸುವ ಪ್ರಯತ್ನಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದೆ.

"ಗುಂಪಿನ ಇಂತಹ ನಿಲುವಿನ ಹೊರತಾಗಿಯೂ, ನಿರಂತರ ಮಾಧ್ಯಮ/ಚಾನೆಲ್ ಚಟುವಟಿಕೆಗೆ ಅನುಕೂಲವಾಗುವಂತೆ ಸಮೀಕ್ಷೆ ಕಾರ್ಯಾಚರಣೆಯನ್ನು ನಡೆಸಲಾಯಿತು" ಎಂದು ತೆರಿಗೆ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. ಆರೋಪಗಳಿಗೆ ಬಿಬಿಸಿ ಇನ್ನೂ ಪ್ರತಿಕ್ರಿಯಿಸಿಲ್ಲ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications