ಭಾರತದಲ್ಲೆ ಕರೆನ್ಸಿ ನೋಟು ಮುದ್ರಣ, ಚೀನಾದಲ್ಲಲ್ಲ : ಆರ್ ಬಿಐ
ನವದೆಹಲಿ, ಆಗಸ್ಟ್ 14: ಭಾರತದ ರೂಪಾಯಿ ಕರೆನ್ಸಿ ನೋಟುಗಳನ್ನು ಚೀನಾ ದೇಶದ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂಬ ವರದಿಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ತಳ್ಳಿ ಹಾಕಿದೆ.
ಭಾರತದ ಎಲ್ಲಾ ನೋಟುಗಳನ್ನು ದೇಶದೊಳಗೆಯೇ ಮುದ್ರಿಸಲಾಗುತ್ತಿದೆ. ಬೇರೆ ಯಾವ ದೇಶದ ಕಂಪನಿಗಳಿಗೆ ಗುತ್ತಿಗೆ ನೀಡಿಲ್ಲ ಎಂದು ಆರ್ ಬಿಐ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ಸೌಥ್ ಚೀನಾ ಮಾರ್ನಿಂಗ್ ಪೋಸ್ಟ್ ನಲ್ಲಿ ಬಂದ ವರದಿಯಂತೆ ಚೀನಾ ಈಗ ನೋಟು ಮುದ್ರಣ ಕ್ಷೇತ್ರಕ್ಕೆ ಕಾಲಿಸಿರಿದ್ದು, ನೇಪಾಳ, ಮಲೇಶಿಯಾ, ಶ್ರೀಲಂಕಾ, ಬ್ರೆಜಿಲ್ ಅಲ್ಲದೆ ಭಾರತದ ನೋಟುಗಳ ಮುದ್ರಣ ಮಾಡುತ್ತಿದೆ ಎನ್ನಲಾಗಿತ್ತು.

ಚೀನಾದ ಬ್ಯಾಂಕ್ನೋಟ್ ಪ್ರಿಂಟಿಂಗ್ ಅಂಡ್ ಮಿಂಟಿಂಗ್ ಕಾರ್ಪೊರೇಷನ್ ನ ಚೇರ್ಮನ್ ಲೂಯಿ ಗುಯಿಶೆಂಗ್ ಅವರು ಚೀನಾ ಸೆಂಟ್ರಲ್ ಬ್ಯಾಂಕಿನ ನಿಯತಕಾಲಿಕೆಯಲ್ಲಿ ಮೇ ತಿಂಗಳಿನಲ್ಲಿ ಬರೆದ ಲೇಖನದಲ್ಲಿ ಬಗ್ಗೆ ಉಲ್ಲೇಖಿಸಿದ್ದರು. 2015ರಲ್ಲಿ ನೇಪಾಳದ ಕರೆನ್ಸಿ ಮುದ್ರಣದ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದಿದ್ದರು.
ಭಾರತದ ನೋಟುಗಳನ್ನ ಮುದ್ರಿಸಲು ಚೀನಾಗೆ ಅವಕಾಶ ಮಾಡಿಕೊಟ್ಟರೆ ನಮ್ಮ ಭದ್ರತೆಗೆ ಅಪಾಯ ತಂದೊಡ್ಡಿದಂತಾಗುತ್ತದೆ, ಚೀನಾದೊಂದಿಗೆ ನಿಕಟ ಸಂಬಂಧ ಹೊಂದಿರುವ ಪಾಕಿಸ್ತಾನಕ್ಕೆ ಈಗ ಖೋಟಾ ನೋಟು ಮುದ್ರಿಸುವ ದಾರಿ ಇನ್ನಷ್ಟು ಸುಗಮವಾಗಲಿದೆ ಎಂಬ ಆತಂಕ ವ್ಯಕ್ತಪಡಿಸಿ ಕಾಂಗ್ರೆಸ್ ಮುಖಂಡ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.
If true, this has disturbing national security implications. Not to mention making it easier for Pak to counterfeit. @PiyushGoyal @arunjaitley please clarify! https://t.co/POD2CcNNuL
— Shashi Tharoor (@ShashiTharoor) August 12, 2018
ಚೀನಾದಲ್ಲಿ ಭಾರತದ 100 ರೂಪಾಯಿ, 1,000, 5 ರುಪಾಯಿ ಕರೆನ್ಸಿ ನೋಟನ್ನು ಮುದ್ರಿಸಲಾಗುತ್ತಿದೆ ಎಂಬ ಸುದ್ದಿ ಬಗ್ಗೆ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಪ್ರತಿಕ್ರಿಯಿಸಿ, ಇದೆಲ್ಲವು ಆಧಾರರಹಿತ ಸುದ್ದಿ ಎಂದಿದ್ದಾರೆ. ಎಲ್ಲಾ ನೋಟುಗಳು ಆರ್ ಬಿಐ ಮೂಲಕ ಭಾರತ ಸರ್ಕಾರದ ಕಣ್ಗಾವಲಿನಲ್ಲೇ ಮುದ್ರಣವಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications