ಬಿಜೆಪಿಯಲ್ಲಿ ಅಡ್ವಾಣಿ, ಜೋಶಿಗೊಂದು ನ್ಯಾಯ, ಬೇರೆಯವರಿಗೆ ಇನ್ನೊಂದು ನ್ಯಾಯ
ದೇಶದಲ್ಲಿ ಇಷ್ಟೆಲ್ಲಾ ರಾಜ್ಯಗಳಲ್ಲಿ ಇಂದು ಬಿಜೆಪಿ ಅಧಿಕಾರದಲ್ಲಿ ಇದೆ ಎಂದರೆ, ಪಕ್ಷದ ಕಾರ್ಯಕರ್ತರು ಮತ್ತು ಅದರಲ್ಲೂ ಕೆಲವು ರಾಷ್ಟ್ರ ಮಟ್ಟದ ಮುಖಂಡರು ನೆನಪಿಸಿಕೊಳ್ಳಬೇಕಾಗಿರುವುದು ಲಾಲ್ ಕೃಷ್ಣ ಅಡ್ವಾಣಿಯವರನ್ನು.
ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ಪಕ್ಷದ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ ಸೇರಿದಂತೆ ಹಲವು ಮುಖಂಡರನ್ನು ಮೂಲೆಗುಂಪು ಮಾಡಲಾಯಿತು ಎನ್ನುವ ಮಾತು ಪಕ್ಷದೊಳಗೆಯೇ ಕೇಳಿ ಬರುತ್ತಿತ್ತು.
ಈ ರೀತಿಯ ಮಾತುಗಳಿಗೆ ಪುರಾವೆ ನೀಡುವಂತೆ ಅಡ್ವಾಣಿಯವರಿಗೆ ಗೌರವ ಕೊಡದೇ ನಡೆದುಕೊಂಡ ರೀತಿಯ ಚಿತ್ರಗಳೂ ಸಾಮಾಜಿಕ ತಾಣದಲ್ಲಿ ಭಾರೀ ಸದ್ದು ಮಾಡಿದ್ದವು. ವಿರೋಧ ಪಕ್ಷಗಳಿಗೆ ಬಿಜೆಪಿ ವಿರುದ್ದ ತಿರುಗಿಬೀಳಲು ಇದೂ ಒಂದು ಅಸ್ತ್ರವಾಗಿತ್ತು.
ಇಬ್ಬರು ಹಿರಿಯ ಮುಖಂಡರಾದ ಅಡ್ವಾಣಿ ಮತ್ತು ಜೋಶಿ ಈಗ ಸಕ್ರಿಯ ರಾಜಕಾರಣದಲ್ಲಿಲ್ಲ, ಕಾರಣ ಅವರ ವಯಸ್ಸು. ಇವರಿಗಾಗಿ ಮಾರ್ಗದರ್ಶಕ ಮಂಡಳಿ ಎನ್ನುವುದಿದ್ದರೂ ಇವರ ಮಾರ್ಗದರ್ಶನ ಪಡೆಯಲು ಒಂದು ದಿನವೂ ಸಭೆ ಸೇರಿದ ಉದಾಹರಣೆಗಳಿಲ್ಲ. ಆದರೆ, ಬಿಜೆಪಿಯ ಈ ಕಾನೂನು ಇತರರಿಗೆ ಯಾಕೆ ಅನ್ವಯಿಸುವುದಿಲ್ಲ?

75 ವರ್ಷ ದಾಟಿದ ಮುಖಂಡರಿಗೆ ಟಿಕೆಟ್ ನೀಡುವುದಿಲ್ಲ, ಅಮಿತ್ ಶಾ
75ವರ್ಷಗಳ ದಾಟಿದ ಮುಖಂಡರಿಗೆ ಬಿಜೆಪಿಯಲ್ಲಿ ಟಿಕೆಟ್ ನೀಡುವುದಿಲ್ಲ. ಕಳೆದ ಲೋಕಸಭಾ ಚುನಾವಣೆಯ ವೇಳೆಗೆ ಅಡ್ವಾಣಿಯವರ ಕ್ಷೇತ್ರವಾಗಿದ್ದ ಗಾಂಧಿ ನಗರದಿಂದ ಅಮಿತ್ ಶಾ ಕಣಕ್ಕೆ ಇಳಿದಿದ್ದರು. ಈ ವೇಳೆ ಕೇಳಿದ ಪ್ರಶ್ನೆಗೆ, "75 ವರ್ಷ ದಾಟಿದ ಮುಖಂಡರಿಗೆ ಟಿಕೆಟ್ ನೀಡುವುದಿಲ್ಲ, ಇದು ಪಕ್ಷದ ನಿರ್ಧಾರ"ಎಂದು ಅಮಿತ್ ಶಾ ಹೇಳಿದ್ದರು. ಪಕ್ಷದ ಈ ನಿರ್ಧಾರದಿಂದ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿಗೆ ಟಿಕೆಟ್ ಸಿಕ್ಕಿರಲಿಲ್ಲ.

ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಯಡಿಯೂರಪ್ಪನವರಿಗೆ ಟಿಕೆಟ್
ಆದರೆ, ಆ ಚುನಾವಣೆಗೂ ಮುನ್ನ ನಡೆದ ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಯಡಿಯೂರಪ್ಪನವರಿಗೆ ಟಿಕೆಟ್ ನೀಡಿದ್ದೂ ಅಲ್ಲದೇ, ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪಕ್ಷ ಘೋಷಣೆ ಮಾಡಿತ್ತು. ಬಿಎಸ್ವೈಗೆ ಈಗ 78 ವಯಸ್ಸು, ಆದರೂ ಅವರು ಸಕ್ರಿಯ ರಾಜಕಾರಣದಲ್ಲಿದ್ದಾರೆ.

ಮೆಟ್ರೋ ಮ್ಯಾನ್ ಎಂದೇ ಕರೆಯಲ್ಪಡುವ ಇ.ಶ್ರೀಧರನ್
ಇನ್ನೊಂದು, ಉದಾಹರಣೆಯಾದರೆ, ನಿನ್ನೆ (ಏಪ್ರಿಲ್ 6) ಮುಕ್ತಾಯಗೊಂಡ ಕೇರಳ ಅಸೆಂಬ್ಲಿ ಚುನಾವಣೆ. ಮೆಟ್ರೋ ಮ್ಯಾನ್ ಎಂದೇ ಕರೆಯಲ್ಪಡುವ ಇ.ಶ್ರೀಧರನ್ ಅವರಿಗೆ ಬಿಜೆಪಿ ರೆಡ್ ಕಾರ್ಪೆಟ್ ಸ್ವಾಗತ ಕೋರಿ ಪಕ್ಷಕ್ಕೆ ಬರ ಮಾಡಿಕೊಂಡಿತ್ತು. ಇಷ್ಟೇ ಅಲ್ಲದೇ, ಪಾಲಕ್ಕಾಡ್ ಕ್ಷೇತ್ರದಲ್ಲಿ ಟಿಕೆಟ್ ಅನ್ನೂ ನೀಡಿದೆ. ಶ್ರೀಧರನ್ ಅವರಿಗೆ ವಯಸ್ಸು 75+13=88.
Recommended Video

ಬಿಜೆಪಿಯಲ್ಲಿ ಅಡ್ವಾಣಿ, ಜೋಶಿಗೊಂದು ನ್ಯಾಯ, ಬೇರೆಯವರಿಗೆ ಇನ್ನೊಂದು ನ್ಯಾಯ
ಯಡಿಯೂರಪ್ಪ ಮತ್ತು ಶ್ರೀಧರನ್ ವಿಚಾರದಲ್ಲಿ ಬಿಜೆಪಿ ತಾನು ಹಾಕಿಕೊಂಡಿದ್ದ ನಿಯಮವನ್ನು ತಾನೇ ಮುರಿದುಕೊಂಡಿದೆ. ವಿರೋಧ ಪಕ್ಷವಾದ ಕಾಂಗ್ರೆಸ್, 'ಬಿಜೆಪಿ ಹೇಳೋದು ಒಂದು ಮಾಡೋದು ಇನ್ನೊಂದು, ಆ ಪಕ್ಷಕ್ಕೆ ಯಾವುದೇ ತತ್ವ ಸಿದ್ದಾಂತ ಇಲ್ಲ'ಎಂದು. ಈ ಎರಡು ಉದಾಹರಣೆಯನ್ನು ಅವಲೋಕಿಸುವುದಾದರೆ, ಬಿಜೆಪಿಯಲ್ಲಿ ಅಡ್ವಾಣಿ, ಜೋಶಿಗೊಂದು ನ್ಯಾಯ, ಬೇರೆಯವರಿಗೆ ಇನ್ನೊಂದು ನ್ಯಾಯ ಎಂದೇ ಹೇಳಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications