ದೇಶದ್ರೋಹಿ ಮಗನ ಶವ ನಮಗೆ ಬೇಡ: ಉಗ್ರ ಸೈಫುಲ್ಲಾ ತಂದೆ
ಯಾವುದೇ ಉದ್ಯೋಗ ಮಾಡದೇ ಸುಖಾಸುಮ್ಮನೇ ಕಾಲ ತಳ್ಳುತ್ತಾ ತಂದೆ ಬೈಯ್ದಿದ್ದಕ್ಕೆ ಎರಡು ತಿಂಗಳ ಹಿಂದೆ ಮನೆ ಬಿಟ್ಟಿದ್ದ ಸೈಫುಲ್ಲಾ
ಲಖನೌ, ಮಾರ್ಚ್ 8: ನಗರದ ಹೊರವಲಯದಲ್ಲಿನ ಮನೆಯೊಂದರಲ್ಲಿ ಅವಿತು, ಮಂಗಳವಾರ ರಾತ್ರಿ ಸುಮಾರು 12 ಗಂಟೆಗಳ ಕಾಲ ಸತತವಾಗಿ ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಜತೆಗೆ ಸೆಣೆಸಿ ಕೊನೆಗೆ ಸಾವನ್ನಪ್ಪಿದ ಉಗ್ರವಾದಿ ಸೈಫುಲ್ಲಾನ ದೇಹವನ್ನು ಪಡೆಯಲು ಆತನ ಕುಟುಂಬ ನಿರಾಕರಿಸಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಸೈಫುಲ್ಲಾ ತಂದೆ ಸರ್ತಾಜ್, ''ನನ್ನ ಮಗ ದೇಶಕ್ಕೆ ಹಿತವಲ್ಲದ ಕೆಲಸದಲ್ಲಿ ನಿರತನಾಗಿದ್ದನೆಂಬುದನ್ನೇ ಕೇಳಿಯೇ ಬೇಸರವಾಗುತ್ತಿದೆ. ಅಂಥ ದೇಶದ್ರೋಹಿಯ ಶವವನ್ನೂ ಸ್ವೀಕರಿಸಲು ನನ್ನ ಮನಸ್ಸು ಒಪ್ಪುತ್ತಿಲ್ಲ. ಹಾಗಾಗಿ, ಆತನ ಶವವನ್ನು ನಾವು ಸ್ವೀಕರಿಸೆವು'' ಎಂದು ತಿಳಿಸಿದ್ದಾರೆ.[ಸಾಯೋ ಮೊದಲು ಅಣ್ಣ ಹೇಳಿದಂತೆ ಕೇಳಿದ್ರೆ ಆ ಉಗ್ರ ಉಳಿಯುತ್ತಿದ್ದ!]

ಸೈಫುಲ್ಲಾ ಬಗ್ಗೆ ಒಂದಿಷ್ಟು ಮಾಹಿತಿ ನೀಡಿದ ಆತನ ಸಂಬಂಧಿಯೊಬ್ಬ, ''ಸೈಫುಲ್ಲಾ ಏನೂ ಕೆಲಸ ಮಾಡದೇ ವೃಥಾ ಕಾಲಹರಣ ಮಾಡುತ್ತಿದ್ದ. ಒಮ್ಮೆ ಆತನ ತಂದೆ ಆತನನ್ನು ಪ್ರಶ್ನಿಸಿದ್ದರು. ಅದು ಜಗಳಕ್ಕೆ ಕಾರಣವಾಗಿ ತಂದೆ ಸರ್ತಾಜ್, ಸೈಫುಲ್ಲಾನನ್ನು ದಂಡಿಸಿದ್ದರು. ಇದರಿಂದ ಸಿಡಿಮಿಡಿಗೊಂಡಿದ್ದ ಸೈಫುಲ್ಲಾ ಎರಡು ತಿಂಗಳುಗಳ ಹಿಂದೆ ಮನೆ ಬಿಟ್ಟು ಹೋಗಿದ್ದ. ಕಳೆದ ಸೋಮವಾರವಷ್ಟೇ ತನ್ನ ತಂದೆಗೆ ದೂರವಾಣಿ ಕರೆ ಮಾಡಿ, ಸೌದಿ ಅರೇಬಿಯಾಕ್ಕೆ ಹೋಗುತ್ತಿರುವುದಾಗಿ ಹೇಳಿದ್ದ. ಆದರೆ, ಏಕೆ, ಹೇಗೆ, ಯಾರೊಟ್ಟಿಗೆ ಹೋಗುತ್ತಿದ್ದೇನೆಂದು ಹೇಳಿರಲಿಲ್ಲ'' ಎಂದು ತಿಳಿಸಿದ್ದಾರೆ.[ಲಖನೌನ ಕಟ್ಟಡದಲ್ಲಿ ಅಡಗಿದ್ದ ಶಂಕಿತ ಐಸಿಸ್ ಉಗ್ರನ ಹತ್ಯೆ]
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications