ಬಿಬಿಸಿ ಬುಡಕ್ಕೆ ಐಟಿ ಬತ್ತಿ, ಕಡೆಗೂ ತಪ್ಪು ಒಪ್ಪಿಕೊಂಡ BBC?
ನವದೆಹಲಿ: ಕಳೆದ ಕೆಲ ತಿಂಗಳಿಂದ ಬಿಬಿಸಿ ಹಾಗೂ ಕೇಂದ್ರ ಸರ್ಕಾರದ ನಡುವೆ ನಡೆಯುತ್ತಿರುವ ತಿಕ್ಕಾಟಕ್ಕೆ ಕೊನೇ ಮೊಳೆ ಬಿದ್ದಿದೆ. ತಾನು 40 ಕೋಟಿ ರೂಪಾಯಿ ಆದಾಯ ಮುಚ್ಚಿಟ್ಟಿದ್ದು ನಿಜ ಅಂತಾ ಕೊನೆಗೂ ಬಿಬಿಸಿ ಒಪ್ಪಿದೆಯಂತೆ. ಹಾಗಾದ್ರೆ ಬಿಬಿಸಿ ತಪ್ಪು ಮಾಡಿದ್ದು ನಿಜವಾ? ಹಾಗಾದ್ರೆ ಬಿಬಿಸಿ ಹೇಳಿದ್ದೇನು? ಅದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ (BBC India).
ಹೌದು, ಬಿಬಿಸಿ ತಾನು 40 ಕೋಟಿ ರೂಪಾಯಿಯಷ್ಟು ಆದಾಯವನ್ನು ಮುಚ್ಚಿಟ್ಟಿದ್ದು ನಿಜ ಎಂಬ ವಿಚಾರವನ್ನು ಒಪ್ಪಿಕೊಂಡಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಈ ಕುರಿತಾಗಿ ಕೇಂದ್ರೀಯ ನೇರ ತೆರಿಗೆ ಮಂಡಳಿಗೆ (ಸಿಬಿಡಿಟಿ) ಇಮೇಲ್ ಕಳಿಸಿದೆ. ಈ ಬಗ್ಗೆ ಐಟಿ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ 'ಹಿಂದೂಸ್ತಾನ್ ಟೈಮ್ಸ್' ಪತ್ರಿಕೆ ವರದಿ ಮಾಡಿದೆ. ಹಾಗಾದ್ರೆ ಈ ವಿಚಾರದಲ್ಲಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದ ವಿಪಕ್ಷ ನಾಯಕರಿಗೆ ಈಗ ಮುಖಭಂಗ ಆಯ್ತಾ? ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯೋಣ ಬನ್ನಿ (BBC India Tax).

ವಿರೋಧ ಪಕ್ಷಗಳ ಆರೋಪ ಠುಸ್?
ಅಂದಹಾಗೆ ಕೆಲ ತಿಂಗಳ ಹಿಂದಷ್ಟೇ ಬಿಬಿಸಿ ಸಂಸ್ಥೆಯ ಭಾರತದ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಸರ್ಚಿಂಗ್ ನಡೆಸಿದ್ದರು. ಆದರೆ ಈ ಘಟನೆ ಹಿಂದೆ ರಾಜಕೀಯ ಷಡ್ಯಂತ್ರ ಇದೆ ಎನ್ನುವ ಆರೋಪ ಕೇಳಿಬಂದಿತ್ತು. ಬಿಬಿಸಿ ವಿರುದ್ಧ ತೆರಿಗೆ ವಂಚನೆ ನಡೆದಿರುವ ಬಗ್ಗೆ ಐಟಿಗೆ ಬಲವಾದ ಮಾಹಿತಿ ಇದ್ದ ಕಾರಣಕ್ಕೆ ರೇಡ್ ನಡೆದಿತ್ತು ಎನ್ನಲಾಗಿತ್ತು. ಆದರೆ ವಿರೋಧ ಪಕ್ಷಗಳ ನಾಯಕರು ಕೂಡ ಇದೇ ವಿಚಾರ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈಗ ಅದಕ್ಕೆಲ್ಲಾ ಉತ್ತರ ಬಹುತೇಕ ಸ್ಪಷ್ಟವಾಗದಂತೆ ಕಾಣುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಬೇಕು ಅಷ್ಟೇ.
ಬಿಬಿಸಿ ಇಮೇಲ್ಗೆ ಐಟಿ ಉತ್ತರ?
ಮತ್ತೊಂದ್ಕಡೆ ತಮಗೆ ಇಮೇಲ್ ಮೂಲಕ ಆದಾಯ ತೆರಿಗೆ ಕುರಿತು ಮಾಹಿತಿ ನೀಡಿರುವ ಬಿಬಿಸಿ ಸಂಸ್ಥೆಗೆ ಐಟಿ ಇಲಾಖೆಯು ಉತ್ತರ ನೀಡಿದೆಯಂತೆ. ಸುಮಾರು 40 ಕೋಟಿ ರೂಪಾಯಿಯಷ್ಟು ಆದಾಯ ಮುಚ್ಚಿಟ್ಟಿರುವ ಬಗ್ಗೆ ಕಳುಹಿಸಿರುವ ಇಮೇಲ್ ಕುರಿತು ಐಟಿ ಇಲಾಖೆ ಉತ್ತರ ನೀಡಿದೆ. ಇಮೇಲ್ ಕಳುಹಿಸಿದರೆ ಅದು ಕಾನೂನಾತ್ಮಕ ಎಂದು ಪರಿಗಣಿಸಲು ಆಗಲ್ಲ. ಹೀಗಾಗಿ ಪರಿಷ್ಕೃತ ಐಟಿ ರಿಟರ್ನ್ಸ್ ಅರ್ಜಿಯನ್ನು ಸಲ್ಲಿಸಬೇಕಿದೆ. ಹಾಗೇ ಬಾಕಿ ತೆರಿಗೆ, ಬಡ್ಡಿ, ದಂಡವನ್ನು ಪಾವತಿ ಮಾಡಬೇಕು ಎಂದು ಐಟಿ ಇಲಾಖೆ ತಿಳಿಸಿದೆ ಎಂದು ವರದಿಯಾಗಿದೆ. ಈ ಮೂಲಕ ಬಿಬಿಸಿಯ ಮೇಲೆ ಐಟಿ ರೇಡ್ ವಿಚಾರ ಮತ್ತೊಂದು ತಿರುವು ಪಡೆಯುತ್ತಿರುವ ರೀತಿ ಕಾಣುತ್ತಿದೆ.
ರಾಜಕೀಯ ಪಿತೂರಿ ಆರೋಪ ಕೇಳಿಬಂದಿತ್ತು!
ಅಂದಹಾಗೆ ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ ಸಂಸ್ಥೆ ಬ್ರಿಟನ್ ಮೂಲದ್ದು. ಇದನ್ನ ಶಾರ್ಟ್ ಆಗಿ ಬಿಬಿಸಿ ಎಂದು ಕರೆಯಲಾಗುತ್ತದೆ. ಜಗತ್ತಿನಾದ್ಯಂತ ತನ್ನದೇ ದೊಡ್ಡ ಸುದ್ದಿಜಾಲ ಹೊಂದಿರುವ ಈ ಸಂಸ್ಥೆ ಜಗತ್ತಿನಾದ್ಯಂತ ಹೆಸರು ಮಾಡಿದೆ. ಆದರೆ 2023ರ ಫೆಬ್ರವರಿಯಲ್ಲಿ ಈ ಸಂಸ್ಥೆಗಳ ಮೇಲೆ ಭಾರತದಲ್ಲಿ ಐಟಿ ರೇಡ್ ಆಗಿತ್ತು. ದೆಹಲಿ & ಮುಂಬೈನ ಬಿಬಿಸಿ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ತೆರಿಗೆ ವಂಚನೆ ಆರೋಪದ ಹಿನ್ನೆಲೆ ಈ ಕ್ರಮ ಜರುಗಿಸಲಾಗಿದೆ ಎಂದು ಐಟಿ ಇಲಾಖೆ ಹೇಳಿಕೆ ನೀಡಿತ್ತು. ಆದ್ರೆ ಪರಿಶೀಲನೆಯ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ವಿಪಕ್ಷಗಳು ಆರೋಪ ಮಾಡಿದ್ದವು.

ಒಟ್ನಲ್ಲಿ ಎಲ್ಲಾ ಆರೋಪ, ಪ್ರತ್ಯಾರೋಪದ ಮಧ್ಯೆ ಬಿಬಿಸಿ ಸಂಸ್ಥೆ ನೀಡಿದೆ ಎನ್ನಲಾದ ಹೇಳಿಕೆ ಸಂಚಲನ ಸೃಷ್ಟಿಸಿದೆ. ಆದರೆ ಈ ಕುರಿತು ಈವರೆಗೂ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಅಧಿಕೃತ ಮಾಹಿತಿ ಸಿಕ್ಕ ಬಳಿಕ ವಿರೋಧ ಪಕ್ಷಗಳು ಮಾಡಿದ್ದ ಆರೋಪಕ್ಕೆ, ಆಡಳಿತ ಪಕ್ಷವಾದ ಬಿಜೆಪಿ ನಾಯಕರು ಉತ್ತರ ನೀಡುವುದು ಗ್ಯಾರಂಟಿ. ಈ ಮೂಲಕ ಮತ್ತೊಂದು ಸುತ್ತಿನ ದಾಳಿ, ವಾಗ್ದಾಳಿಗೆ ವಿಪಕ್ಷ & ಆಡಳಿತ ಪಕ್ಷಗಳ ನಾಯಕರು ಸಜ್ಜಾಗುತ್ತಿರುವದು ಬಹುತೇಕ ಪಕ್ಕಾ.
-
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ












Click it and Unblock the Notifications