ಉತ್ತರ ಪ್ರದೇಶದಲ್ಲಿ ಐಎಸ್ಐ ಏಜೆಂಟ್ ಬಂಧನ
ಲಕ್ನೋ, ನವೆಂಬರ್ 28 : ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಐಎಸ್ಐ ಏಜೆಂಟ್ನನ್ನು ಬಂಧಿಸಿದೆ. ಬಾಂಗ್ಲಾದೇಶದ ಮೂಲಕ ಭಾರತಕ್ಕೆ ಬಂದಿದ್ದ ಈತ ಭಾರತೀಯ ಸೇನೆಯ ಕುರಿತು ಹಲವು ಮಾಹಿತಿಗಳನ್ನು ಸಂಗ್ರಹಣೆ ಮಾಡಿ ಪಾಕಿಸ್ತಾನಕ್ಕೆ ಕಳುಹಿಸಿದ್ದ ಎಂದು ಎಸ್ಟಿಎಫ್ ಐಜಿ ಸುಜೀತ್ ಪಾಂಡೆ ಹೇಳಿದ್ದಾರೆ.
ಬಂಧಿತ ಐಎಸ್ಐ ಏಜೆಂಟ್ನನ್ನು ಮೊಹಮದ್ ಇಜಾಜ್ ಎಂದು ಗುರುತಿಸಲಾಗಿದೆ. ಭಾರತದಲ್ಲಿ ಮೊಹಮದ್ ಕಲಾಂ ಎಂಬ ಹೆಸರಿನಲ್ಲಿ ಈತ ಕಾರ್ಯಾಚರಣೆ ನಡೆಸುತ್ತಿದ್ದ. ದೆಹಲಿಗೆ ಹೋಗುವ ತಯಾರಿಯಲ್ಲಿದ್ದ ಇಜಾಜ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. [ಶಾರುಖ್ ಅಸಹಿಷ್ಣುತೆ ಬಗ್ಗೆ ಯಾರು ಏನು ಹೇಳಿದರು?]

ಮೊಹಮದ್ ಇಜಾಜ್ನಿಂದ ಭಾರತೀಯ ಸೇನೆಗೆ ಸೇರಿದ ಮಾಹಿತಿಗಳ ಪತ್ರ, ಪಾಕಿಸ್ತಾನದ ಗುರುತಿನ ಪತ್ರ, ಪಶ್ಚಿಮ ಬಂಗಾಳದ ನಕಲಿ ಮತದಾರರ ಗುರುತಿನ ಚೀಟಿ, ನಕಲಿ ಆಧಾರ್ ಕಾರ್ಡ್, ದೆಹಲಿ ಮೆಟ್ರೋ ಕಾರ್ಡ್, ಲ್ಯಾಪ್ಟಾಪ್ ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆಪಡೆದುಕೊಳ್ಳಲಾಗಿದೆ. [ಒಡಿಶಾದಲ್ಲಿ ಶಂಕಿತ ಐಎಸ್ಐ ಏಜೆಂಟ್ ಬಂಧನ]
ಪಾಕಿಸ್ತಾನ ಬಾಂಗ್ಲಾದೇಶ ಮೂಲಕ ಪಶ್ಚಿಮ ಬಂಗಾಳಕ್ಕೆ ಮೊಹಮದ್ ಇಜಾಜ್ನನ್ನು ಕಳುಹಿಸಿತ್ತು. ಭಾರತೀಯ ಸೇನೆ ಬಗ್ಗೆ ಮಾಹಿತಿ ಕಲೆ ಹಾಕಿ ಪಾಕ್ಗೆ ಕಳುಹಿಸಿವ ಕಾರ್ಯವನ್ನು ಈ ಮಾಡುತ್ತಿದ್ದ. ಭಾರತಕ್ಕೆ ಬಂದ ಈತ ಮೊದಲು ವಿಡಿಯೋ ಗ್ರಾಫರ್ಆಗಿ ಕೆಲಸ ಆರಂಭಿಸಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.
2012ರಲ್ಲಿ ಐಎಸ್ಐ ಮೊಹಮದ್ ಇಜಾಜ್ಗೆ ತರಬೇತಿ ನೀಡಿ ಭಾರತಕ್ಕೆ ಕಳುಹಿಸಿಕೊಟ್ಟಿತ್ತು. ಭಾರತೀಯ ಸೇನೆ ಬಗ್ಗೆ ಮಾಹಿತಿ ನೀಡುವ ಕಾರ್ಯವನ್ನು ಈತ ಮಾಡುತ್ತಿದ್ದ. ಇಜಾಜ್ಗೆ ಇಲ್ಲಿ ಕೆಲಸ ಮಾಡಲು ಪಾಕ್ ಹಣಕಾಸು ಸಹಾಯ ಮಾಡುವ ಜೊತೆಗೆ ಪಾಕಿಸ್ತಾನದಲ್ಲಿರುವ ಆತನ ಕುಟುಂಬಕ್ಕೆ ಪ್ರತಿ ತಿಂಗಳು 50 ಸಾವಿರ ರೂ.ಗಳನ್ನು ನೀಡುತ್ತಿತ್ತು.
ಸದಾರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಇಜಾಜ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಈತನ ವಿಚಾರಣೆ ಮುಂದುರೆಸಿದೆ. ಗುಪ್ತಚರ ಸಂಸ್ಥೆಗಳಿಗೂ ಇಜಾಜ್ ಬಂಧನದ ಬಗ್ಗೆ ಮಾಹಿತಿಗಳನ್ನು ರವಾನಿಸಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications