Get Updates
Get notified of breaking news, exclusive insights, and must-see stories!

ಗೋಮಾಂಸ ನಿಷೇಧ : ಮೋದಿ, ಮನೋಹರ್ ಹತ್ಯೆಗೆ ಸಂಚು!

ಪಣಜಿ, ಜ.19: ಇರಾಕಿ ಉಗ್ರ ಸಂಘಟನೆ ಐಎಸ್ಐಎಸ್ ಮುದ್ರೆ ಹೊಂದಿರುವ ಅನಾಮಿಕ ಪತ್ರವೊಂದು ಗೋವಾ ಪೊಲೀಸರ ಕೈಗೆ ಸಿಕ್ಕಿದೆ. ಅದರಲ್ಲಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಹತ್ಯೆ ಸಂಚು, ಬೆದರಿಕೆ ಇದೆ ಎಂದು ತಿಳಿದು ಬಂದಿದೆ. ಈ ಪತ್ರ ಈಗ ಎಲ್ಲಾ ಪೊಲೀಸ್ ಠಾಣೆಗಳಿಗೆ ತಲುಪಿದ್ದು, ಉಗ್ರ ನಿಗ್ರಹ ದಳ ಎಟಿಎಸ್ ಈ ಪ್ರಕರಣವನ್ನು ಕೈಗೆತ್ತಿಕೊಂಡಿದೆ.

ಗೋವಾದ ಎಲ್ಲಾ ಪೊಲೀಸ್ ಠಾಣೆಗಳಿಗೆ ಪತ್ರದ ಪ್ರತಿ ರವಾನಿಸಲಾಗಿದೆ. ಪ್ರಕರಣವನ್ನು ಭಯೋತ್ಪಾದನೆ ನಿಗ್ರಹ ದಳಕ್ಕೆ ವರ್ಗಾಯಿಸಿ, ತನಿಖೆ ಕೈಗೊಳ್ಲಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.[ಗಣರಾಜ್ಯೋತ್ಸವದ ಮೇಲೆ ಐಎಸ್ ಐಎಸ್ ಉಗ್ರರ ಕಣ್ಣು?]

Alleged ISIS letter threatens to kill Narendra Modi, Manohar Parrikar

ಕಳೆದ ವಾರ ಗೋವಾ ಸರ್ಕಾರದ ಕಾರ್ಯದರ್ಶಿ ಕಚೇರಿಗೆ ಈ ಪೋಸ್ಟ್ ಕಾರ್ಡ್ ಪತ್ರ ಬಂದಿದೆ. ಪತ್ರದ ಸತ್ಯಾಸತ್ಯತೆ ಬಗ್ಗೆ ತನಿಖೆ ಮುಂದುವರೆದಿದೆ. ದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಗೋಹತ್ಯೆ ನಿಷೇಧದ ಕ್ರಮವನ್ನು ಖಂಡಿಸಿ ಬರೆಯಲಾಗಿದೆ. ಪತ್ರದ ಕೊನೆಯಲ್ಲಿ ಐಎಸ್ ಐಎಸ್ ಮೊಹರು ಇದೆ.

ಇಸ್ಲಾಮಿಕ್ ಸ್ಟೇಟ್ ಆಫ್ ಸಿರಿಯಾ ಇರಾಕ್ (ಐಎಸ್‌ಐಎಸ್) ಉಗ್ರರು ಜನವರಿ 26ರ ಗಣರಾಜ್ಯೋತ್ಸವದ ದಿನ ದೆಹಲಿ ಸೇರಿದಂತೆ ದೇಶದ ವಿವಿಧ ನಗರಗಳ ಮೇಲೆ ದಾಳಿ ಮಾಡಬಹುದು ಎಂದು ಎಚ್ಚರಿಕೆ ರವಾನಿಸಲಾಗಿದೆ. ಅಗತ್ಯ ಭದ್ರತೆ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+