ಐಎಸ್ಐಎಸ್ ಬೆಂಬಲಿಸಿದ ಇಬ್ಬರು ಭಾರತೀಯರ ಗಡಿಪಾರು
ಬೆಂಗಳೂರು, ಸೆ.15 : ಐಎಸ್ಐಎಸ್ ಉಗ್ರ ಸಂಘಟನೆಗೆ ಬೆಂಬಲ ನೀಡುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಭಾರತೀಯರನ್ನು ಯುಎಇ ಗಡಿಪಾರು ಮಾಡಿದೆ. ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.
ಇಬ್ಬರು ಯುವಕರನ್ನು ಕಳೆದ ಕೆಲವು ದಿನಗಳ ಹಿಂದೆ ಯುಎಇನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ (ಐಎಸ್ಐಎಸ್) ಪರವಾದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಾ, ಉಗ್ರರ ಪರವಾಗಿ ಪ್ರಚಾರ ಮಾಡುತ್ತಾರೆ ಎಂಬುದು ತಿಳಿದುಬಂದಿತ್ತು. ಆದ್ದರಿಂದ ಅವರನ್ನು ಗಡಿಪಾರು ಮಾಡಲಾಗಿದೆ.

ಐಎಸ್ಐಎಸ್ ಬೆಂಬಲಿಗರು ಎಂದು ಭಾರತೀಯರನ್ನು ಗಡಿಪಾರು ಮಾಡುತ್ತಿರುವ ಎರಡನೇ ಪ್ರಕರಣವಿದಾಗಿದೆ. ಎರಡು ವಾರದ ಹಿಂದೆ ಇಬ್ಬರು ಯುವಕರನ್ನು ಗಡಿಪಾರು ಮಾಡಿದ್ದ ಯುಎಇ ಕೇರಳಕ್ಕೆ ಕಳುಹಿಸಿಕೊಟ್ಟಿತ್ತು. ಐಎಸ್ಐಎಸ್ ಸೇರಲು ಪ್ರಚೋದಿಸುತ್ತಿದ್ದ ಮಹಿಳೆಯನ್ನು ಗಡಿಪಾರು ಮಾಡಲಾಗಿತ್ತು.[ISIS ಸೇರಿದ ಕೇರಳ ಪತ್ರಕರ್ತ]
ಉಗ್ರರ ವಿರುದ್ಧ ಜಂಟಿ ಹೋರಾಟ : ಭಾರತ ಐಎಸ್ಐಎಸ್ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪವಿರುವ 11 ಜನರ ಪಟ್ಟಿಯನ್ನು ಯುಎಇಗೆ ಕಳುಹಿಸಿದೆ. ಭಾರತ ಮತ್ತು ಯುಎಇ ಜಂಟಿಯಾಗಿ ಐಎಸ್ಐಎಸ್ ವಿರುದ್ಧ ಹೋರಾಡಲು ನಿರ್ಧರಿಸಿವೆ. [ಇರಾಕಿ ಉಗ್ರರಿಂದ 'ಏಡ್ಸ್ ಬಾಂಬ್' ಬೀಳಲಿದೆ ಎಚ್ಚರ!]
ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಕೆಲವು ದಿನಗಳ ಹಿಂದೆ ಯುಎಇಗೆ ಭೇಟಿ ನೀಡಿದಾಗ ಈ ಕುರಿತು ಮಾತುಕತೆ ನಡೆಸಿದ್ದಾರೆ. ಭಾರತ ಸರ್ಕಾರದ ನೀಡಿದ ಪಟ್ಟಿಯಲ್ಲಿರುವ ವ್ಯಕ್ತಿಗಳ ವಿಚಾರಣೆಯನ್ನು ಯುಎಇ ನಡೆಸುತ್ತಿದೆ.
ಕೊಚ್ಚಿ ಮೂಲದವರು : ಎರಡು ವಾರಗಳ ಹಿಂದೆ ಯುಎಇಯಿಂದ ಗಡಿಪಾರಾದ ಇಬ್ಬರು ಯುವಕರು ಕೊಚ್ಚಿ ಮೂಲದವರು. ಈ ಇಬ್ಬರು ಯುವಕರು ಐಎಸ್ಐಎಸ್ ಪರವಾಗಿ ಪ್ರಚಾರ ಮಾಡುತ್ತಿದ್ದರು ಎಂದು ಭಾರತೀಯ ಗುಪ್ತಚರ ಇಲಾಖೆಯೂ ಮಾಹಿತಿ ಸಂಗ್ರಹಿತ್ತು.
ಕೊಚ್ಚಿ ಮೂಲದ 8 ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಐಎಸ್ಐಎಸ್ ಉಗ್ರರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದು ತಿಳಿದುಬಂದಿತ್ತು. ಯಎಇನಲ್ಲಿರುವ ಕೆಲವು ಯುವಕರು ಈ ಬಗ್ಗೆ ಪ್ರಚಾರ ಮಾಡುತ್ತಿರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹಣೆ ಮಾಡಿದೆ. ಯುವಕರ ಫೇಸ್ಬುಕ್ ಖಾತೆಯಲ್ಲಿ ಪ್ರಚಾರದ ಚಿತ್ರಗಳು ಪತ್ತೆಯಾಗಿವೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications