ISRO Mission: ಬಾನಂಗಳದಲ್ಲಿ ಇಸ್ರೋ ಸೆಂಚ್ಯುರಿ, 100ನೇ ರಾಕೆಟ್ ಯಶಸ್ವಿ ಉಡಾವಣೆ!
ಶ್ರೀಹರಿಕೋಟಾ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಪ್ರತಿಯೊಂದು ಹೆಜ್ಜೆಯಲ್ಲೂ ಇಡೀ ಜಗತ್ತನ್ನೇ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿರುವ 'ಇಸ್ರೋ' ಈಗ 100ನೇ ರಾಕೆಟ್ ಯಶಸ್ವಿ ಉಡಾವಣೆ ಮಾಡಿದೆ. ಈ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಿದೆ.
ಹೌದು, ಅದು 1963ರ ನವೆಂಬರ್ 21, ಭಾರತ ತನ್ನ ಮೊಟ್ಟ ಮೊದಲ ಉಪಗ್ರಹ ಉಡಾವಣೆ ಮಾಡಿತ್ತು. ಆದರೆ ಅಮೆರಿಕದ ರಾಕೆಟ್ ಬಳಸಿ ಮೊದಲ ಬಾರಿ ಉಪಗ್ರಹ ಉಡಾವಣೆ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, 2025 ರಲ್ಲಿ ಅಮೆರಿಕದ 'ನಾಸಾ' ಸಂಸ್ಥೆಯನ್ನೂ ಮೀರಿಸುವತ್ತ ಮುನ್ನುಗ್ಗುತ್ತಿದೆ. ಬುಧವಾರ ಅಂದ್ರೆ ಇಂದು ಇಸ್ರೋ ಸಂಸ್ಥೆ ತನ್ನ 100ನೇ ರಾಕೆಟ್ ಯಾತ್ರೆ ಯಶಸ್ವಿಯಾಗಿ ಮುಗಿಸಿ, ಇಡೀ ಜಗತ್ತಿಗೇ ಮಾದರಿಯಾಗಿದೆ.

100ನೇ ರಾಕೆಟ್ ಯಾತ್ರೆ ಸಕ್ಸಸ್!
ಇಂದು ಬೆಳಗ್ಗೆ 6.23ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡಾವಣಾ ಕೇಂದ್ರದಿಂದ ಇಸ್ರೋ ತನ್ನ 100ನೇ ರಾಕೆಟ್ ಯಾತ್ರೆಯನ್ನ ಯಶಸ್ವಿಯಾಗಿ ಪೂರೈಸಿತು. ಎನ್ವಿಎಸ್-02 ಉಪಗ್ರಹ ಹೊತ್ತ ಜಿಎಸ್ಎಲ್ವಿ ಬೆಂಕಿಯ ಚಂಡಿನಂತೆ ಮುಂದೆ ನುಗ್ಗಿ, ಬಾಹ್ಯಾಕಾಶದ ಗಡಿಯನ್ನೂ ಛಿದ್ರಮಾಡಿ ತನ್ನ ಗುರಿ ತಲುಪಿದೆ. ಈ ಮೂಲಕ, ಬಾನಂಗಳದಲ್ಲಿ ಇಸ್ರೋ ಸೆಂಚ್ಯುರಿ ಬಾರಿಸಿ ಭಾರತೀಯರಿಗೆ ಸಿಕ್ಕಾಪಟ್ಟೆ ಖುಷಿ ನೀಡಿದೆ.
ಇತ್ತೀಚೆಗಷ್ಟೇ ಇಸ್ರೋ ಸಂಸ್ಥೆಗೆ ಹೊಸ ಅಧ್ಯಕ್ಷರ ಆಗಮನವಾಗಿದ್ದು, ವಿ.ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಇದೀಗ 'ಇಸ್ರೋ' ಯಶಸ್ವಿಯಾಗಿ ಮುನ್ನಡೆಯುತ್ತಿದೆ. ರಾಕೆಟ್ ಉಡಾವಣೆ ಯಶಸ್ವಿಯಾದ ಬಗ್ಗೆ ಮಾತನಾಡಿರುವ ನಾರಾಯಣ್ ಅವರು, ಈ ಸಾಧನೆ ಕೇವಲ ಒಬ್ಬರಿಂದ ಆಗಿಲ್ಲ ಆದರೆ ಇದು ನಮ್ಮ ತಂಡದ ಒಟ್ಟಾರೆ ಪರಿಶ್ರಮ ಎಂದಿದ್ದಾರೆ. ಈ ವರ್ಷ ಇಸ್ರೋಗೆ ಬಿಡುವಿಲ್ಲದ ವರ್ಷವಾಗಿದ್ದು, ಸಾಲು ಸಾಲು ಯೋಜನೆಗಳು ಜಾರಿಗೆ ಬರಲಿವೆ ಎಂದಿದ್ದಾರೆ.
ಚಂದ್ರಯಾನ-4 ಮತ್ತು ಚಂದ್ರಯಾನ-5!
ಇಸ್ರೋ ಸಂಸ್ಥೆ 2025 ರಲ್ಲಿ ಚಂದ್ರಯಾನ-4 ಮತ್ತು ಚಂದ್ರಯಾನ-5 ಯೋಜನೆಗಳ ಜೊತೆಗೆ ಶ್ರೀಹರಿಕೋಟಾದಲ್ಲಿ ತನ್ನ 3ನೇ ಲಾಂಚಿಂಗ್ ಪ್ಯಾಡ್ ಸ್ಥಾಪನೆ ಮಾಡುತ್ತಿದೆ. ಹಾಗೇ ಇದರ ಜತೆಗೆ ಕುಲಶೇಖರಪಟ್ಟಣಂ ಭಾಗದಲ್ಲಿ ಪ್ರಮುಖ ಕೆಲಸಗಳು ಸಾಗಿವೆ. ಒಟ್ನಲ್ಲಿ ಇಸ್ರೋ ಈ ರೀತಿಯಾಗಿ ಬೆಳವಣಿಗೆ ಕಾಣುತ್ತಿರುವ ವಿಚಾರ ಭಾರತೀಯರಿಗೆ ಹೆಮ್ಮೆ ತರುವ ಜೊತೆಯಲ್ಲೇ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತಷ್ಟು ಬಲಿಷ್ಠವಾಗುತ್ತಿದೆ. ಹಾಗೇ ಇಸ್ರೋ ಸಂಸ್ಥೆ ಬೆಳೆಯುತ್ತಿರುವ ರೀತಿ ಜಗತ್ತಿನ ಬೇರೆ ಬೇರೆ ದೇಶಗಳಿಗೂ ಮಾದರಿಯಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications