Chandrayaan-3: ಯುವಕರಿಗಾಗಿ ‘ಚಂದ್ರಯಾನ-3’ ನಾವಿಕನ ಆತ್ಮಚರಿತ್ರೆ!
ಭಾರತ ಇದೀಗ 'ಚಂದ್ರಯಾನ-3' ಯೋಜನೆ ಮೂಲಕ ಮಹತ್ವದ ಸಾಧನೆ ಮಾಡಿದ್ದು, ಇಸ್ರೋ ಕೀರ್ತಿ ಜಗತ್ತಿನ ಉದ್ದಗಲಕ್ಕೂ ಹರಡಿದೆ. ಅದರಲ್ಲೂ ಚಂದ್ರಯಾನ-3 ಯೋಜನೆ ಮನುಷ್ಯರ ಭವಿಷ್ಯಕ್ಕೆ ದೊಡ್ಡ ತಿರುವು ಸಿಗುವಂತೆ ಮಾಡಿದೆ. ಪ್ರಪಂಚ ಈ ಸಂಭ್ರಮದಲ್ಲಿ ಇರುವಾಗ ಭಾರತೀಯರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದೆ!
ಹೌದು, ಭಾರತದ ಇಸ್ರೋ ಇದೇ ಆಗಸ್ಟ್ 23ರಂದು ವಿಕ್ರಮ್ ಲ್ಯಾಂಡರ್ನ ಚಂದ್ರನ ಅಂಗಳಕ್ಕೆ ಇಳಿಸಿತ್ತು. ನಂತರ 14 ದಿನ, ಭಾರತದ ಇಸ್ರೋ ನಿರ್ಮಿಸಿದ್ದ ಲ್ಯಾಂಡರ್ ಹಾಗೂ ರೋವರ್ ಒಟ್ಟಾಗಿ ಕೆಲಸ ಮಾಡಿದ್ದವು. ಈ ಮೂಲಕ ಭಾರತದ ಕೀರ್ತಿ ಪತಾಕೆ ಜಗತ್ತಿನ ಉದ್ದಗಲಕ್ಕೆ ಪಸರಿಸಲು ಈ ಯೋಜನೆ ಸಹಾಯ ಮಾಡಿತ್ತು. ಆದ್ರೆ ಹೀಗೆ 'ಚಂದ್ರಯಾನ-3' ಯೋಜನೆ ಯಶಸ್ಸಿಗೆ ಶ್ರಮಿಸಿದ ವಿಜ್ಞಾನಿಗಳಿಗೆ, ನಾವಿಕನಂತೆ ಕೆಲಸ ಮಾಡಿದ್ದ ಇಸ್ರೋ ಮುಖ್ಯಸ್ಥರು ತಮ್ಮ ಆತ್ಮಚರಿತ್ರೆ ಪ್ರಕಟಿಸಲು ಸಿದ್ಧತೆ ನಡೆಸಿದ್ದಾರೆ.

ಭಾರತೀಯರ ಸಂಭ್ರಮ ಡಬಲ್!
ಅಷ್ಟಕ್ಕೂ ಚಂದ್ರನ ಅಂಗಳಕ್ಕೆ ಲ್ಯಾಂಡರ್ ಉಡಾವಣೆ, ಸೂರ್ಯನ ಸಂಶೋಧನೆಗೆ ಉಪಗ್ರಹ ಉಡಾವಣೆ ಮತ್ತು ಮನುಷ್ಯರನ್ನ ಅಂತರಿಕ್ಷಕ್ಕೆ ಕಳುಹಿಸಲು ತಯಾರಿ. ಹೀಗೆ ಇಸ್ರೋ ಹೆಸರನ್ನ ಮತ್ತಷ್ಟು ಎತ್ತರಕ್ಕೆ ಏರಿಸಲು ಕಾರಣವಾಗುತ್ತಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ ಅಧ್ಯಕ್ಷ ಎಸ್. ಸೋಮನಾಥ್, ತಮ್ಮ ಆತ್ಮಚರಿತ್ರೆ ಬಿಡುಗಡೆ ಮಾಡುವ ಮಾಹಿತಿ ನೀಡಿದ್ದಾರೆ. ಇದು ಭಾರತೀಯರ ಸಂಭ್ರಮವನ್ನು ಮತ್ತಷ್ಟು ಹೆಚ್ಚು ಮಾಡಿದೆ.
ಎಷ್ಟೆಲ್ಲಾ ಕಷ್ಟಪಟ್ಟಿದ್ದರು ಇಸ್ರೋ ಅಧ್ಯಕ್ಷ?
ಈಗ ಇಸ್ರೋ ಅಧ್ಯಕ್ಷರಾಗಿ, ದೊಡ್ಡ ಮೊತ್ತದ ಸಂಬಳ ಪಡೆಯುವ ಇಸ್ರೋ ಅಧ್ಯಕ್ಷರು ಈ ಹಂತಕ್ಕೆ ಬರುವ ಮೊದಲು ಸಾಕಷ್ಟು ಸಮಸ್ಯೆ ಎದುರಿಸಿದ್ದರಂತೆ. ಹಾಸ್ಟೆಲ್ ವೆಚ್ಚ ಕಡಿಮೆ ಮಾಡಲು ಸಾಧಾರಣ ಕೊಠಡಿಯಲ್ಲಿ ವಾಸ, ಸಾರಿಗೆ ವೆಚ್ಚ ಉಳಿಸಲು ಹಳೆಯ ಸೈಕಲ್ ಬಳಕೆ ಸೇರಿದಂತೆ ತಮ್ಮ ವಿದ್ಯಾಭ್ಯಾಸ ಪೂರ್ಣಗೊಳಿಸಲು ಅವರು ಸಾಕಷ್ಟು ಕಷ್ಟಪಟ್ಟಿದ್ದರೆಂಬ ಮಾಹಿತಿ ಇದೆ. ಇದೀಗ ತಮ್ಮ ಜೀವನದಲ್ಲಿ ಅನುಭವಿಸಿದ ಎಲ್ಲಾ ಸಮಸ್ಯೆ & ನೋವಿನ ಬಗ್ಗೆ ಎಸ್. ಸೋಮನಾಥ್ ಆತ್ಮಚರಿತ್ರೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.
ಮಲಯಾಳಂ ಭಾಷೆಯಲ್ಲಿ ಆತ್ಮಚರಿತ್ರೆ ಬಿಡುಗಡೆಯಾಗಲಿದ್ದು 'ನಿಲಾವು ಕುಡಿಚ್ಚ ಸಿಂಹಗಳ್' ಎಂಬ ಟೈಟಲ್ ಇಡಲು ತೀರ್ಮಾನಿಸಲಾಗಿದೆ. ಕೇರಳ ಮೂಲದ ಲಿಪಿ ಪಬ್ಲಿಕೇಷನ್ಸ್ನಿಂದ ಪ್ರಕಟವಾಗುತ್ತಿರುವ ಈ ಪುಸ್ತಕ ಮುಂದಿನ ತಿಂಗಳು ಅಂದರೆ ನವೆಂಬರ್ನಲ್ಲಿ ಮಾರುಕಟ್ಟೆಗೆ ಬರಲಿದೆ. ಈ ಮೂಲಕ 'ಚಂದ್ರಯಾನ-3' ಯೋಜನೆ ಯಶಸ್ಸನ್ನು ಸಂಭ್ರಮಿಸಿದ್ದ ಇಡೀ ಜಗತ್ತಿಗೆ, ಆ ಯೋಜನೆ ಹಿಂದಿನ ರೂವಾರಿಯ ಕಷ್ಟಗಳ ಪರಿಚಯ ಕೂಡ ಆಗಲಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications