ಇಸ್ರೋ ಖಾಸಗೀಕರಣ ವಿವಾದ: ಅಧ್ಯಕ್ಷ ಕೆ. ಶಿವನ್ ಹೇಳಿದ್ದೇನು?
ನವದೆಹಲಿ, ಆಗಸ್ಟ್ 20: ಖಾಸಗಿ ವಲಯಗಳ ಪಾಲ್ಗೊಳ್ಳುವಿಕೆಯು ಇಸ್ರೋವನ್ನು ಖಾಸಗೀಕರಣ ಮಾಡಲಾಗುತ್ತಿದೆ ಎಂಬ ಅರ್ಥ ನೀಡುವುದಿಲ್ಲ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್ ತಿಳಿಸಿದರು.
ಕೇಂದ್ರ ಸರ್ಕಾರವು ಬಾಹ್ಯಾಕಾಶ ಸುಧಾರಣೆಗಳನ್ನು ಘೋಷಣೆ ಮಾಡಿದಾಗಿನಿಂದಲೂ ಇಸ್ರೋವನ್ನು ಖಾಸಗೀಕರಣ ಮಾಡಲಾಗುತ್ತದೆ ಎಂಬ ತಪ್ಪು ಅಭಿಪ್ರಾಯ ಹರಿದಾಡುತ್ತಿದೆ ಎಂದು ಅವರು ಆನ್ಲೈನ್ ವೆಬಿನಾರ್ವೊಂದರಲ್ಲಿ ಗುರುವಾರ ಹೇಳಿದರು.
ಇಸ್ರೋ ಖಾಸಗೀಕರಣದ ಕುರಿತಾದ ತಪ್ಪು ತಿಳಿವಳಿಕೆಯ ಬಗ್ಗೆ ಮಾತನಾಡಿದ ಅವರು, ಅದು ಖಾಸಗೀಕರಣವಾಗುತ್ತಿಲ್ಲ. ಪದೇ ಪದೇ ನಾನು ಹೇಳುತ್ತಿದ್ದೇನೆ, ಅದು ಇಸ್ರೋದ ಖಾಸಗೀಕರಣವಲ್ಲ ಎಂದರು.
'ಭಾರತದ ಬಾಹ್ಯಾಕಾಶ ವಲಯದ ಸಮೃದ್ಧತೆಯ ವಿಸ್ತರಣೆ' ಕುರಿತು ಮಾತನಾಡಿದ ಅವರು, ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಯ ಸಂಪೂರ್ಣ ಗುರಿಯೇನೆಂದರೆ ಖಾಸಗಿ ಸಂಸ್ಥೆಗಳೂ ಕೂಡ ಇಸ್ರೋ ನಡೆಸುತ್ತಿರುವಂತೆ ಬಾಹ್ಯಾಕಾಶ ಚಟುವಟಿಕೆಗಳನ್ನು ನಡೆಸಬಹುದು ಎನ್ನುವುದು ಎಂದು ತಿಳಿಸಿದರು. ಮುಂದೆ ಓದಿ.

ಸ್ಟಾರ್ಟ್ಅಪ್ಗಳು ಉತ್ಸುಕ
ಬಾಹ್ಯಾಕಾಶ ಸುಧಾರಣೆಗಳು ಭಾರತೀಯ ಬಾಹ್ಯಾಕಾಶ ಪರಂಪರೆಯ ದಿಕ್ಕನ್ನು ಬದಲಿಸಲಿವೆ ಎಂದ ಅವರು, 'ಖಾಸಗಿ ವಲಯಗಳ ಸಹಭಾಗಿತ್ವ ಬಹಳ ಆರೋಗ್ಯಕಾರಿ. ಸ್ಟಾರ್ಟ್ಅಪ್ಗಳು ಉಡಾವಣಾ ವಾಹನಗಳು ಮತ್ತು ಉಪಗ್ರಹಗಳನ್ನು ತಯಾರಿಸಲು ಆಸಕ್ತವಾಗಿವೆ' ಎಂದು ಹೇಳಿದರು.

ಖಾಸಗಿ ಕಂಪೆನಿಗಳಿಗೆ ಅವಕಾಶ
ಗ್ರಹಗಳ ಅನ್ವೇಷಣಾ ಯೋಜನೆಗಳು ಸೇರಿದಂತೆ ಎಲ್ಲಾ ಬಗೆಯ ಬಾಹ್ಯಾಕಾಶ ಚಟುವಟಿಕೆಗಳಲ್ಲಿ ಖಾಸಗಿ ವಲಯಗಳ ಪಾಲ್ಗೊಳ್ಳುವಿಕೆಗೆ ಜೂನ್ 24ರಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಹೊಸದಾಗಿ ರಚನೆಯಾದ ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಉತ್ತೇಜನ ಮತ್ತು ಮಾನ್ಯತಾ ಕೇಂದ್ರ (ಇನ್-ಸ್ಪೇಸ್) ಭಾರತೀಯ ಬಾಹ್ಯಾಕಾಶ ಮೂಲಸೌಕರ್ಯಗಳನ್ನು ಬಳಸಿಕೊಳ್ಳಲು ಖಾಸಗಿ ಕಂಪೆನಿಗಳಿಗೂ ಸಮಾನ ಅವಕಾಶ ನೀಡಲಿದೆ ಎಂದು ತಿಳಿಸಿತ್ತು.

ನಿಯಂತ್ರಣ ವ್ಯವಸ್ಥೆಯ ಅಗತ್ಯವಿದೆ
ಬಾಹ್ಯಾಕಾಶ ಕ್ಷೇತ್ರವು ಸಾಕಷ್ಟು ಕಾರ್ಯತಂತ್ರ ಮಹತ್ವ ಹೊಂದಿದ್ದರೂ, ಲಭ್ಯ ಇರುವ ಸೌಲಭ್ಯಗಳನ್ನು ಬಳಸಿಕೊಳ್ಳುವ ವಿಚಾರವಾಗಿ ನಿಯಂತ್ರಣ ವ್ಯವಸ್ಥೆಯನ್ನು ಹೊಂದಿಲ್ಲ. ಇಸ್ರೋದಲ್ಲಿನ ಚಟುವಟಿಕೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಕಠಿಣವಾದ ನಿಯಂತ್ರಣಾ ವ್ಯವಸ್ಥೆ ಶೀಘ್ರದಲ್ಲೇ ಜಾರಿಯಾಗುವುದು ಅಗತ್ಯವಿದೆ ಎಂದು ಶಿವನ್ ಹೇಳಿದ್ದಾರೆ.

ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಉತ್ತೇಜನ
ಇನ್ಸ್ಪೇಸ್ ಸಂಸ್ಥೆಯು ತಾಂತ್ರಿಕ ಮಾಹಿತಿ ಮತ್ತು ತಿಳಿವಳಿಕೆಗಳನ್ನು ನೀಡಲಿದೆ. ಜತೆಗೆ ಒಂದು ನಿಯಂತ್ರಣಾ ಸಂಸ್ಥೆಯಾಗಿಯೂ ಕೆಲಸ ಮಾಡಲಿದೆ. ಅವರೂ ಕೂಡ ಶೀಘ್ರದಲ್ಲಿಯೇ ತಮ್ಮ ಉಡಾವಣಾ ವಾಹನಗಳನ್ನು ಆರಂಭಿಸಲಿದ್ದಾರೆ. ಆತ್ಮ ನಿರ್ಭರ್ ಭಾರತ್ ಅಭಿಯಾನ್ ಅಡಿಯಲ್ಲಿ ಸಂವಹನ ಉಪಗ್ರಹಗಳ ನಿರ್ಮಾಣವು ಆಂತರಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಎಂದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications