ಚಂದ್ರಯಾನ 2- ಆರ್ಬಿಟರ್ ಬಗ್ಗೆ ಸಿಹಿಸುದ್ದಿ ನೀಡಿದ ಕೆ.ಶಿವನ್
Recommended Video
ನವದೆಹಲಿ, ಸೆಪ್ಟೆಂಬರ್ 26: ವಿಕ್ರಮ ಲ್ಯಾಂಡರ್ ಆಯುಷ್ಯ ಕಳೆದುಕೊಂಡರೂ ಆರ್ಬಿಟರ್ ಚಂದ್ರನ ಸುತ್ತ ಸುತ್ತುತ್ತಿದ್ದು, ಅದರ ಕಾರ್ಯಕ್ಷಮತೆಯ ಬಗ್ಗೆ ಇಸ್ರೋ ಅಧ್ಯಕ್ಷ ಕೆ. ಶಿವನ್ ಮತ್ತೆ ಸಿಹಿಸುದ್ದಿ ನೀಡಿದ್ದಾರೆ.
"ಚಂದ್ರಯಾನ 2 ಆರ್ಬಿಟರ್ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಆದರೆ ವಿಕ್ರಂ ಲ್ಯಾಂಡರ್ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತ ಡೆಟಾ ಪರಿಶೀಲಿಸಲು ನೇಮಿಸಿರುವ ರಾಷ್ಟ್ರ ಮಟ್ಟದ ಸಮಿತಿ ತನ್ನ ಅಭಿಪ್ರಾಯವನ್ನು ಇನ್ನೂ ಹೇಳಬೇಕಿದೆ" ಎಂದು ಶಿವನ್ ಹೇಳಿದ್ದಾರೆ.
ಇಸ್ರೋ ಈಗ ಭವಿಷ್ಯದ ಬಾಹ್ಯಾಕಾಶ ಯೋಜನೆಗೆ ತಯಾರಿ ನಡೆಸುತ್ತಿದೆ ಎಂದು ಇದೇ ಸಂದರ್ಭದಲ್ಲಿ ಶಿವನ್ ಹೇಳಿದರು.

ಯಶಸ್ವಿ ಕಾರ್ಯನಿರ್ವಹಣೆ
"ಆರ್ಬಿಟರ್ ಸುಮಾರು ಏಳು ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದ್ದು, ಪೇಲೋಡ್ ಆಪರೇಶನ್ ಗಳೂ ಯಶಸ್ವಿಯಾಗಿ ನಡೆಯುತ್ತಿವೆ. ಆದರೆ ಲ್ಯಾಂಡರ್ ಕಡೆಯಿಂದ ಯಾವುದೇ ಸಿಗ್ನಲ್ ಲಭ್ಯವಾಗಿಲ್ಲ. ಲ್ಯಾಂಡರ್ ಸಂಪರ್ಕ ಕಡಿತಕ್ಕೆ ಕಾರಣವೇನು ಎಂಬ ಬಗ್ಗೆ ಈ ಸಮಿತಿ ವರದಿ ನೀಡಲಿದೆ. ನಾವು ಈಗ ಇಸ್ರೋದ ಭವಿಷ್ಯದ ಬಾಹ್ಯಾಕಾಶ ಯೋಜನೆಗಳ ಬಗ್ಗೆ ತಯಾರಿ ನಡೆಸುತ್ತಿದ್ದೇವೆ" ಎಂದು ಶಿವನ್ ಹೇಳಿದರು.

ಸಂಪರ್ಕಕ್ಕೆ ಸಿಗದ ವಿಕ್ರಂ
ಸೆಪ್ಟೆಂಬರ್ 7 ರಂದು ಶನಿವಾರ ಬೆಳಗ್ಗಿನ ಜಾವ ಚಂದ್ರನ ಮೇಲೆ ಲ್ಯಾಂಡ್ ಆಗಬೇಕಿದ್ದ ವಿಕ್ರಂ ಲ್ಯಾಂಡರ್ ಚಂದ್ರನ ಮೇಲ್ಮೈ ತಲುಪಲು ಇನ್ನು ಕೇವಲ 2.1 ಕಿ.ಮೀ. ಅಂತರವಿದೆ ಎನ್ನುವಾಗ ಸಂಪರ್ಕ ಕಳೆದುಕೊಂಡಿತ್ತು. ಆದರೆ ಲ್ಯಾಂಡರ್ ಸುರಕ್ಷಿತವಾಗಿರುವ ಚಿತ್ರನ್ನು ಆರ್ಬಿಟರ್ ಕಳಿಸಿದ ಮೇಲೆ ಅದು ಸಂಪರ್ಕಕ್ಕೆ ಸಿಗಬಹುದು ಎಂಬ ಆಸೆ ಜೀವ ಪಡೆದಿತ್ತು.

ಚಂದ್ರನಲ್ಲಿ ಅಸಹನೀಯ ಚಳಿ
ಸೆಪ್ಟೆಂಬರ್ 21 ರ ಒಳಗಾಗಿ, ಅಂದರೆ ಚಂದ್ರನಲ್ಲಿ ಚಳಿ ಆರಂಭವಾಗುವ ಮುನ್ನವೇ ವಿಕ್ರಂ ಲ್ಯಾಂಡರ್ ಸಂಪರ್ಕಕ್ಕೆ ಸಿಗಬೇಕಿತ್ತು. ಅದಿಲ್ಲವೆಂದರೆ ಇನ್ನೆಂದಿಗೂ ಆದು ಸಂಪರ್ಕಕ್ಕೆ ಸಿಗಲು ಸಾಧ್ಯವಿಲ್ಲ ಎಂದು ಇಸ್ರೋ ಹೇಳಿತ್ತು. ಸೆ.22 ರಿಂದ ಚಂದ್ರನಲ್ಲಿ ಆಸಹನೀಯ ಎಂಬಷ್ಟು ಚಳಿ ಆರಂಭವಾಗಿದ್ದು, ಕನಿಷ್ಠ -200 ವರೆಗೂ ತಲುಪಲಿದೆ. ಇ ವಾತಾವರಣದಲ್ಲಿ ವಿಕ್ರಂ ಲ್ಯಾಂದರ್ ಬದುಕುವುದಿಲ್ಲ ಎಂದು ಇಸ್ರೋ ಈ ಮೊದಲೇ ಹೇಳಿದೆ.

98% ಯಶಸ್ವಿ!
ಚಂದ್ರಯಾನ 2 ಕೊನೆಯಲ್ಲಿ ಲ್ಯಾಂಡರ್ ಸಂಪರ್ಕ ಕಳೆದುಕೊಂಡರೂ ಶೇ.98 ರಷ್ಟು ಯಶಸ್ವಿಯಾಗಿದೆ ಎಂದು ಇಸ್ರೋ ಹೇಳಿದೆ. ಆಅರ್ಬಿಟರ್ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಚಂದ್ರನ ದಕ್ಷಿಣ ಧ್ರುವದ ಕುರಿತು ಅದೇ ಅಗತ್ಯ ಮಾಹಿತಿಗಳನ್ನು ನೀಡಲಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications