10 ಉಪಗ್ರಹಗಳನ್ನು ಹೊತ್ತ ಪಿಎಸ್ಎಲ್ವಿ-ಸಿ 48 ಉಡಾವಣೆ ಯಶಸ್ವಿ
ಶ್ರೀಹರಿಕೋಟಾ, ಡಿಸೆಂಬರ್ 11: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) 50ನೇ ಪಿಎಸ್ಎಲ್ವಿ ರಾಕೆಟ್ಅನ್ನು ಬುಧವಾರ ಮಧ್ಯಾಹ್ನ 3.25ರ ವೇಳೆಯೆ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಅತ್ಯಾಧುನಿಕ ಗೂಢಚರ ಉಪಗ್ರಹ ರಿಸ್ಯಾಟ್-2ಬಿಆರ್1 ಸೇರಿದಂತೆ ಒಟ್ಟು ಹತ್ತು ಉಪಗ್ರಹಗಳನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಯಿತು.
ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್ಎಲ್ವಿ) ಮೂಲಕ ಭೂ ಸರ್ವೇಕ್ಷಣೆಯ ರೇಡಾರ್ ಇಮೇಜಿಂಗ್ ಉಪಗ್ರಹ ರಿಸ್ಯಾಟ್-2ಬಿಆರ್1, 628 ಕೆ.ಜಿ. ತೂಕ ಹೊಂದಿದ್ದು, ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣಾ ಕಾರ್ಯಗಳಂತಹ ವಿವಿಧ ಯೋಜನೆಗಳಿಗೆ ನೆರವಾಗಲಿದೆ.
ಈ ಉಪಗ್ರಹದೊಂದಿಗೆ ಒಂಬತ್ತು ವಿದೇಶಿ ಉಪಗ್ರಹಗಳು ಕೂಡ ಬಾಹ್ಯಾಕಾಶಕ್ಕೆ ಹಾರಿದವು. ಒಂಬತ್ತು ಉಪಗ್ರಹಗಳಲ್ಲಿ ಒಂದು ಇಸ್ರೇಲ್, ಒಂದು ಇಟಲಿ, ಒಂದು ಜಪಾನ್ ಮತ್ತು ಆರು ಅಮೆರಿಕದ ಉಪಗ್ರಹಗಳಿವೆ. ಈ ವಿದೇಶಿ ಉಪಗ್ರಹಗಳ ಉಡಾವಣೆಯು ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ನ (ಎನ್ಎಸ್ಐಎಲ್) ವಾಣಿಜ್ಯ ಒಪ್ಪಂದಗಳ ಅಡಿಯಲ್ಲಿ ನಡೆದಿದೆ ಎಂದು ಇಸ್ರೋ ತಿಳಿಸಿದೆ.

ಭೂಸರ್ವೇಕ್ಷಣೆಯಲ್ಲಿ ಮಹತ್ವದ ಕಾರ್ಯನಿರ್ವಹಿಸುವ ಕಾರ್ಟೋಸ್ಯಾಟ್-3 ಉಪಗ್ರಹವನ್ನು ನವೆಂಬರ್ 27ರಂದು ಇಸ್ರೋ ಉಡಾವಣೆ ಮಾಡಿತ್ತು. ಇದರ ಜತೆಗೆ ಅಮೆರಿಕದ 13 ನ್ಯಾನೋ ಉಪಗ್ರಹಗಳನ್ನು ಕೂಡ ಉಡಾವಣೆ ಮಾಡಿತ್ತು. ನಂತರದ 14 ದಿನಗಳಲ್ಲಿಯೇ ಮತ್ತೊಂದು ಉಪಗ್ರಹ ಉಡಾವಣೆ ನಡೆಸಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications