ಇಸ್ರೋ ಮಹತ್ಸಾಧನೆ : ಸ್ವದೇಶಿ ರಾಕೆಟ್ ಯಶಸ್ವಿ ಉಡಾವಣೆ
ಬೆಂಗಳೂರು, ಜ.5: ಸ್ವದೇಶಿ ನಿರ್ಮಿತ ಕ್ರಯೋಜೆನಿಕ್ ಎಂಜಿನ್ ಚಾಲಿತ ಭಾರತದ ಮಹತ್ವದ ಜಿಎಸ್ಎಲ್ವಿ-ಡಿ5 ರಾಕೆಟ್ ಉಡಾವಣೆ ಯಶಸ್ವಿಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಭಾನುವಾರ ಸಂಜೆ 4.18ರ ವೇಳೆಗೆ ಜಿ ಸ್ಯಾಟ್ 14 ಸಂವಹನ ಉಪಗ್ರಹ ಹೊತ್ತ ಜಿಎಸ್ ಎಲ್ ವಿ ಡಿ 5 ರಾಕೆಟ್ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ.
ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಶನಿವಾರ ಬೆಳಗ್ಗೆ 11:18ರಿಂದ ಕ್ಷಣ ಗಣನೆ ಆರಂಭಗೊಂಡಿತ್ತು. 49.13 ಮೀಟರ್ ಉದ್ದದ 414.75 ಟನ್ ಭಾರ ಹೊಂದಿರುವ ರಾಕೆಟ್ 1,982 ಕೆಜಿ ತೂಕದ ಜಿಸ್ಯಾಟ್-14 ಸಂಪರ್ಕ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಒಯ್ದಿದೆ. ದೂರ ಶಿಕ್ಷಣ ಮತ್ತು ದೂರ ವೈದ್ಯಕೀಯದಲ್ಲಿ ಈ ಉಪಗ್ರಹ ಉಪಯುಕ್ತವಾಗಿದೆ. ರವಿವಾರ ಸಂಜೆ 4:18 ಸುಮಾರಿಗೆ ರಾಕೆಟ್ ಮೇಲಕ್ಕೆ ಚಿಮ್ಮಿದೆ.
PM congratulates the scientists and engineers of ISRO for the successful launch of GSLV D5 carrying GSAT-14 payload.
— Dr Manmohan Singh (@PMOIndia) January 5, 2014 ಕಳೆದ ಮೂರು ವರ್ಷಗಳಲ್ಲಿ ಎರಡು ಬಾರಿ ಭಾರೀ ತೂಕದ ರಾಕೆಟ್ ನ ಹಾರಾಟ ವಿಫಲವಾಗಿತ್ತು ಹಾಗೂ ಒಂದು ಬಾರಿ ಹಾರಾಟವನ್ನು ಕೈಬಿಡಲಾಗಿತ್ತು. ಆದರೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿಜ್ಞಾನಿಗಳು ಈ ಬಾರಿ ಯಶಸ್ಸಿನ ಬಗ್ಗೆ ಪೂರ್ಣ ಭರವಸೆಯನ್ನು ಹೊಂದಿದ್ದಾರೆ.
ಜಿಎಸ್ ಎಲ್ ವಿ ಈ ಹಿಂದಿನ ಹಾರಾಟಗಳನ್ನು ಪರಿಶೀಲಿಸಿದ ಬಳಿಕ ನಾವು 45 ವಿವಿಧ ಪರೀಕ್ಷೆಗಳನ್ನು ಮಾಡಿದ್ದೇವೆ ಹಾಗೂ ಕೆಲವು ಘಟಕಗಳಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದ್ದೇವೆ' ಎಂದು ಇಸ್ರೋ ಅಧ್ಯಕ್ಷ ಕೆ. ರಾಧಾಕೃಷ್ಣನ್ 29 ಗಂಟೆಗಳ ಕ್ಷಣಗಣನೆ ಶನಿವಾರ ಆರಂಭಗೊಳ್ಳುವ ಮೊದಲು ಸುದ್ದಿಗಾರರಿಗೆ ತಿಳಿಸಿದ್ದರು.

ಭಾರತ ಈಗಾಗಲೇ ಪಿಎಸ್ ಎಲ್ ವಿ ಶ್ರೇಣಿಯ ರಾಕೆಟ್ ಗಳ ಉಡಾವಣೆಯಲ್ಲಿ ಪರಿಣತಿ ಪಡೆದಿದೆ. ಸತತ 25 ಯಶಸ್ವಿ ಹಾರಾಟಗಳನ್ನು ಅದು ನಡೆಸಿದೆ. ಆದರೆ, ಮಾನವರನ್ನು ಬಾಹ್ಯಾಕಾಶಕ್ಕೆ ಒಯ್ಯುವುದು ಸೇರಿದಂತೆ ಹೆಚ್ಚಿನ ಭಾರದ ಉಪಗ್ರಹಗಳನ್ನು ಒಯ್ಯಬಲ್ಲ ಜಿಎಸ್ ಎಲ್ ವಿ ರಾಕೆಟ್ ಭಾರತಕ್ಕೆ ಸವಾಲಾಗಿಯೇ ಉಳಿದಿತ್ತು. ಈಗ ಈ ಜಿಸ್ಯಾಟ್ ಹೊತ್ತೊಯ್ದ ಜಿಎಸ್ ಎಲ್ ವಿ ಭಾರತಕ್ಕೆ ಹೊಸ ದಿಶೆಯನ್ನು ತೋರಿಸಿದೆ.
ಬೇರೆ ದೇಶಗಳಿಂದ ಇಂಜಿನ್ ಪೂರೈಕೆ ಸಹಾಯ ಸಿಗದ ಕಾರಣ 2010ರ ಎಪ್ರಿಲ್ ನಲ್ಲಿ ಇಸ್ರೋ ತನ್ನ ಮೊದಲ ಕ್ರಯೋಜೆನಿಕ್ ಇಂಜಿನ್ ನನ್ನು ಪರೀಕ್ಷೆಗೊಳಪಡಿಸಿತ್ತು. ಆದರೆ, ಕ್ರಯೋಜೆನಿಕ್ ಹಂತ ಉರಿದ ಬಳಿಕ ಒಂದು ಸೆಕೆಂಡ್ ನ ಮೊದಲೇ ಅದು ವಿಫಲವಾಯಿತು.
ಪರಿಷ್ಕೃತ ಜಿಎಸ್ ಎಲ್ ವಿ-ಡಿ5 ರಾಕೆಟನ್ನು 2013 ಆಗಸ್ಟ್ನಲ್ಲಿ ಉಡಾಯಿಸಬೇಕಾಗಿತ್ತು. ಆದರೆ ದ್ರವ ಇಂಧನ ಪಾತ್ರೆಯಲ್ಲಿ ಸೋರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ನಿಗದಿತ ಹಾರಾಟಕ್ಕೆ ಎರಡು ಗಂಟೆಗಳ ಮೊದಲೇ ಯೋಜನೆಯನ್ನು ಕೈಬಿಡಲಾಗಿತ್ತು.
ಯೋಜನೆ ಸಿದ್ಧತೆ ಪರಿಶೀಲನಾ ತಂಡ ಮತ್ತು ಉಡಾವಣೆ ಅನುಮತಿ ಮಂಡಳಿ 2013 ಡಿಸೆಂಬರ್ 28ರಂದು ಉಡಾವಣೆಗೆ ಅನುಮತಿ ನೀಡಿದ ಬಳಿಕ ಶ್ರೀಹರಿಕೋಟ ಉಡಾವಣಾ ಕೇಂದ್ರದಲ್ಲಿ ಚಟುವಟಿಕೆಗಳು ಆರಂಭವಾಗಿದ್ದವು. ಭಾರತ ರಶ್ಯದಿಂದ ಏಳು ಕ್ರಯೋಜೆನಿಕ್ ಇಂಜಿನ್ ಗಳನ್ನು ಪಡೆದುಕೊಂಡಿತ್ತು. ಅವುಗಳ ಪೈಕಿ ಇಸ್ರೋ ಆರನ್ನು ಬಳಸಿಕೊಂಡಿದೆ.
ಬಳಿಕ ವಿದೇಶದಿಂದ ಆಮದು ಮಾಡಿಕೊಳ್ಳುವ ಇಂಜಿನ್ ಗಳು ಕೈಗೆಟುಕದೆ ಹೋದ ಹಿನ್ನೆಲೆಯಲ್ಲಿ ತನ್ನದೇ ಆದ ಕ್ರಯೋಜೆನಿಕ್ ಇಂಜಿನ್ ಗಳನ್ನು ಅಭಿವೃದ್ಧಿ ಪಡಿಸುವ ಅಗತ್ಯವನ್ನು ಭಾರತ ಮನಗಂಡಿತು. ಅನ್ಯ ಗ್ರಹಗಳ ಅನ್ವೇಷಣೆ ಮತ್ತು ಮಾನವನನ್ನು ಬಾಹ್ಯಾಕಾಶಕ್ಕೆ ಕಳುಹಿಸುವುದು ಸೇರಿದಂತೆ ಭಾರತದ ಮಹತ್ವಾಕಾಂಕ್ಷೆಯ ಯೋಜನೆಗಳು ಜಿಎಸ್ ಎಲ್ ವಿ ಯೋಜನೆಯ ಯಶಸ್ಸನ್ನು ನೆಚ್ಚಿಕೊಂಡಿತ್ತು. ಇಂದಿನ ಯಶಸ್ಸಿನ ಉಡಾವಣೆಯಿಂದ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮಹತ್ವದ ಮತ್ತೊಂದು ಮೈಲಿಗಲ್ಲನ್ನು ದಾಟಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications