ಬಾಹ್ಯಾಕಾಶಕ್ಕೆ ಪಯಣಿಸಲಿದೆ ಹೈಸ್ಕೂಲು ವಿದ್ಯಾರ್ಥಿಗಳ 'ಕಲಾಂ ಸ್ಯಾಟಲೈಟ್'
ಶ್ರೀಹರಿಕೋಟಾ (ಆಂಧ್ರಪ್ರದೇಶ) ಜನವರಿ 23: ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಸಾಧನೆಗಳನ್ನು ನಿರ್ಮಿಸುತ್ತಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಗುರುವಾರ ಮತ್ತೊಂದು ಸಾಧನೆಗೆ ಕಾತರದಿಂದ ಕಾದಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿಂದ ಪೋಲಾರ್ ಸ್ಯಾಟಲೈಟ್ ಉಡಾವಣಾ ವಾಹನ- ಸಿ44ಅನ್ನು (ಪಿಎಸ್ಎಲ್ವಿ-C44) ಉಡಾವನೆ ಮಾಡಲಿದ್ದು, ಅದರಲ್ಲಿ ಕಲಾಂಸ್ಯಾಟ್ ಕೃತಕ ಉಪಗ್ರಹ (ಫೆಸ್ಟೊ) ಮತ್ತು ಮೈಕ್ರೊಸ್ಯಾಟ್-ಆರ್ ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ರವಾನಿಸಲಿದೆ.
ಪಿಎಸ್ಎಲ್ವಿ-C44ರ ಉಡಾವಣೆಗೆ ಬುಧವಾರ ಸಂಜೆ 7.37ರಿಂದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಕ್ಷಣಗಣನೆ ಆರಂಭವಾಗಿದ್ದು, ಗುರುವಾರ ರಾತ್ರಿ 11.37ಕ್ಕೆ ಉಡಾವಣೆಗೆ ಸಮಯ ನಿಗದಿಪಡಿಸಲಾಗಿದೆ.

ಕಲಾಂಸ್ಯಾಟ್ ವಿದ್ಯಾರ್ಥಿ ಉಪಗ್ರಹವಾಗಿದ್ದು, ಇದಕ್ಕೆ ದೇಶದ ಮಾಜಿ ಅಧ್ಯಕ್ಷ ದಿವಂಗತ ಎಪಿಜೆ ಅಬ್ದುಲ್ ಕಲಾಂ ಅವರ ಹೆಸರನ್ನಿರಿಸಲಾಗಿದೆ.
🇮🇳 #ISROMissions 🇮🇳
— ISRO (@isro) 23 January 2019
Countdown for the launch of #PSLVC44 started today at 19:37 (IST) at Satish Dhawan Space Centre, Sriharikota. The launch is scheduled tomorrow at 23:37 (IST).
Updates will continue.#Kalamsat#MicrosatR
ತಮಿಳುನಾಡಿನ ಪಲ್ಲಪಟ್ಟಿಯ 18 ವರ್ಷದ ಪ್ರೌಢಶಾಲೆ ವಿದ್ಯಾರ್ಥಿ ರಿಫತ್ ಶಾರೂಕ್ ಎಂಬಾತನ ನೇತೃತ್ವದಲ್ಲಿ ವಿದ್ಯಾರ್ಥಿಗಳ ತಂಡ ತಯಾರಿಸಿದ ಪುಟ್ಟ ಉಪಗ್ರಹ ಇದಾಗಿದೆ. ಕೇವಲ 64 ಗ್ರಾಂ ತೂಕವಿರುವ ಈ ನೌಕೆಯು ಜಗತ್ತಿನ ಅತಿ ಹಗುರ ಮತ್ತು ಚಿಕ್ಕ ಉಪಗ್ರಹ ಎಂಬ ಖ್ಯಾತಿಗೆ ಪಾತ್ರವಾಗಿದೆ.
ಪಿಎಸ್ಎಲ್ವಿಯ ನಾಲ್ಕನೆಯ ಹಂತದಿಂದ ಈ ಉಡಾವಣೆ ನಡೆಯಲಿದ್ದು, ಉಪಗ್ರಹ ಉಡಾವಣೆಗೆ ಮಾತ್ರವಲ್ಲದೆ ಬಾಹ್ಯಾಕಾಶದಲ್ಲಿ ಪ್ರಯೋಗ ನಡೆಸಲು ಮೊದಲ ಬಾರಿಗೆ ಉಡ್ಡಯನ ರಾಕೆಟ್ಅನ್ನು ಬಳಸಿಕೊಳ್ಳಲಾಗುತ್ತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications