ಉತ್ತರಾಖಂಡ ಅನಾಹುತ: ಹಿಮಸ್ಫೋಟದ ಚಿತ್ರಗಳನ್ನು ಬಿಡುಗಡೆ ಮಾಡಿದ ಇಸ್ರೋ
ಡೆಹ್ರಾಡೂನ್, ಫೆಬ್ರವರಿ 10: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ 32 ಜನರನ್ನು ಬಲಿತೆಗೆದುಕೊಂಡ ನೀರ್ಗಲ್ಲು ಸ್ಫೋಟ ದುರ್ಘಟನೆಯ ಮೊದಲ ಚಿತ್ರಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬಿಡುಗಡೆ ಮಾಡಿದೆ.
ಇಸ್ರೋದ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (ಎನ್ಆರ್ಎಸ್ಸಿ) ಉಪಗ್ರಹ ಫೋಟೊಗಳನ್ನು ಬಿಡುಗಡೆ ಮಾಡಿದ್ದು, ತಪೋವನ ಜಲವಿದ್ಯುತ್ ಸ್ಥಾವರದ ಅಣೆಕಟ್ಟಿಗೆ ಉಂಟಾದ ಹಾನಿಯ ಮೇಲೆ ಬೆಳಕು ಚೆಲ್ಲಿದೆ. ಪ್ರವಾಹದಲ್ಲಿ ಕನಿಷ್ಠ ಎರಡು ಸೇತುವೆಗಳು ಕೊಚ್ಚಿ ಹೋಗಿರುವುದನ್ನು ಚಿತ್ರಗಳು ತೋರಿಸಿವೆ. ಇತರೆ ಎರಡು ರಚನೆಗಳು ಹಾನಿಗೊಳಗಾಗಿರುವುದು ಕಂಡುಬಂದಿದೆ. ಒಂದು ಜಾಗದಲ್ಲಿ ಅವಶೇಷಗಳು ಸಂಗ್ರಹವಾಗಿರುವುದನ್ನು ಒಂದು ಚಿತ್ರ ತೋರಿಸಿದೆ. ಕಟ್ಟಡವೊಂದರ ತೂಬಿನ ಗೋಡೆಗಳು ಪ್ರವಾಹದಿಂದ ಪುಡಿಯಾಗಿವೆ.
ಮತ್ತೊಂದು ಚಿತ್ರದಲ್ಲಿ ರೈನಿ ಗ್ರಾಮದಲ್ಲಿ ಮೂಲಸೌಕರ್ಯಕ್ಕೆ ಹಾನಿಯಾಗಿರುವುದು ಕಾಣಿಸುತ್ತದೆ. ಒಂದು ಸೇತುವೆ ಮತ್ತು ರಸ್ತೆ ರಿಶಿಗಂಗಾ ನದಿಯಿಂದ ಕೊಚ್ಚಿಹೋಗಿದೆ. ಗ್ರಾಮದಲ್ಲಿನ ಮತ್ತೊಂದು ವಿದ್ಯುತ್ ಸ್ಥಾವರ ಕೂಡ ತೀವ್ರ ಹಾನಿಗೊಳಗಾಗಿದೆ.

ಧೌಲಿಗಂಗಾ ನದಿಯ ನೋಟದಲ್ಲಿ ಬಂಡೆಕಲ್ಲುಗಳು ಮತ್ತು ಭಗ್ನಾವಶೇಷಗಳೇ ತುಂಬಿಕೊಂಡಿರುವುದು ಚಿತ್ರದಲ್ಲಿ ಸೆರೆಯಾಗಿದೆ. ರಿಶಿ ಗಂಗಾ ಮತ್ತು ಧೌಲಿಗಂಗಾ ನದಿಯ ಹಿನ್ನೀರು ಪ್ರದೇಶಗಳಲ್ಲಿ ಹಠಾತ್ ಪ್ರವಾಹದಿಂದ ಜೀವ ಮತ್ತು ಆಸ್ತಿ ಹಾನಿ ಉಂಟಾಗಿದೆ.

ಇಸ್ರೋ ಅಭಿವೃದ್ಧಿಪಡಿಸಿದ ಕ್ಯಾರ್ಟೋಸ್ಯಾಟ್-3, ಭೂ ಗ್ರಹಿಕಾ ಉಪಗ್ರಹವನ್ನು ಬಳಸಿ ಈ ಚಿತ್ರಗಳನ್ನು ಸೆರೆಹಿಡಿಯಲಾಗಿದೆ. ಉತ್ತರಾಖಂಡದ ಘಟನೆಯಲ್ಲಿ ಇನ್ನೂ 190ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಉಂಟಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications