ಇಸ್ರೋದಿಂದ ಶುಕ್ರಗ್ರಹಕ್ಕೆ ನೌಕೆ; 2024 ಡಿಸೆಂಬರ್ ದಿನ ಯಾಕೆ?
ನವದೆಹಲಿ, ಮೇ 4: ಚಂದ್ರ ಮತ್ತು ಮಂಗಳ ಗ್ರಹಗಳಿಗೆ ಗಗನನೌಕೆಗಳನ್ನ ಯಶಸ್ವಿಯಾಗಿ ಕಳುಹಿಸಿರುವ ಭಾರತದ ಮುಂದಿನ ಗಗನಯೋಜನೆ ಟಾರ್ಗೆಟ್ ಶುಕ್ರ ಗ್ರಹವಾಗಿದೆ. ನಮ್ಮ ಸೌರಮಂಡಲದ ಅತ್ಯಂತ ಬಿಸಿ ಗ್ರಹ ಎನಿಸಿದ ಶುಕ್ರನ ಗರ್ಭದೊಳಗೆ ಅಡಗಿರುವ ರಹಸ್ಯವನ್ನು ಭೇದಿಸುವ ನಿಟ್ಟನಲ್ಲಿ ಇಸ್ರೋದ ಶುಕ್ರಯಾನ ಯೋಜನೆ ಉದ್ದೇಶ ಇರಲಿದೆ.
2024 ಡಿಸೆಂಬರ್ ತಿಂಗಳಿನಲ್ಲಿ ಶುಕ್ರ ಗ್ರಹಕ್ಕೆ ನೌಕೆ ಕಳುಹಿಸುವ ಯೋಜನೆಯನ್ನು ಇಸ್ರೋ ರೂಪಿಸಿದೆ. ಶುಕ್ರ ಗ್ರಹದ ಸುತ್ತ ಇರುವ ಸಲ್ಫ್ಯೂರಿಕ್ ಆ್ಯಸಿಡ್ ಕ್ಲೌಡ್ಗಳ ರಹಸ್ಯವನ್ನು ಪತ್ತೆ ಮಾಡುವುದು, ಗ್ರಹದ ಜ್ವಾಲಾಮುಖಿ ಪ್ರದೇಶಗಳು, ಲಾವಾ ಸ್ಫೋಟ, ಗ್ರಹದ ರಚನೆ, ಅದರ ಪರಿಸರ ವಿವರ ಇತ್ಯಾದಿಯನ್ನು ಅಧ್ಯಯನ ನಡೆಸಲು ಇಸ್ರೋದ ಶುಕ್ರ ಯೋಜನೆಯಲ್ಲಿ ಉದ್ದೇಶಿಸಲಾಗಿದೆ.
ಯೋಜನೆಗೆ 2024, ಡಿಸೆಂಬರ್ ಕಾಲ ಯಾಕೆ?; ಈ ಅವಧಿಯಲ್ಲಿ ಭೂಮಿಗೆ ಶುಕ್ರ ಗ್ರಹ ಸಮೀಪ ಬರುತ್ತದೆ. ಆಗ ಗಗನ ನೌಕೆಯನ್ನ ಹೆಚ್ಚು ಶಕ್ತಿಯ ಅಗತ್ಯ ಇಲ್ಲದೇ ಶುಕ್ರ ಗ್ರಹ ಕಕ್ಷೆಗೆ ಸೇರಿಸಲು ಸಾಧ್ಯವಾಗುತ್ತದೆ ಎಂಬುದು ಇಸ್ರೋದ ಚಿಂತನೆ. ಮತ್ತೆ ಇಂಥ ಕಾಲ ಸಿಗಲು 2031ರವರೆಗೆ ಕಾಯಬೇಕಾಗುತ್ತದೆ. ಹೀಗಾಗಿ, 2024ಕ್ಕೆ ಶುಕ್ರ ಯೋಜನೆ ಪೂರ್ಣಗೊಳಿಸಲು ಇಸ್ರೋ ನಿರ್ಧರಿಸಿದೆ.

ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಶುಕ್ರಯಾನ-1 ಯೋಜನೆ ಬಗ್ಗೆ ಮಾತನಾಡಿ, "ಪ್ರಾಜೆಕ್ಟ್ ರಿಪೋರ್ಟ್ ಸಿದ್ಧಪಡಿಸಲಾಗಿದ್ದು, ವೆಚ್ಚವನ್ನು ಅಂದಾಜಿಸಲಾಗಿದೆ. ಭಾರತದಲ್ಲಿ ಇಂದು ತಾಂತ್ರಿಕ ನಿಪುಣತೆ ಲಭ್ಯ ಇರುವುದರಿಂದ ಬಹಳ ಕಡಿಮೆ ಅವಧಿಯಲ್ಲಿ ಶುಕ್ರ ಗ್ರಹ ಯೋಜನೆ ನಡೆಸಲು ಸಾಧ್ಯವಾಗುತ್ತಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳ, ಚಂದ್ರ ಯೋಜನೆಗಳು: ಭಾರತದ ಬಾಹ್ಯಾಕಾಶ ಯೋಜನೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಎರಡು ಬಾರಿ ಭಾರತ ಚಂದ್ರಯಾನ ಯೋಜನೆ ಕೈಗೊಂಡಿದೆ. ಎರಡೂ ಕೂಡ ಯಶಸ್ವಿಯಾಗಿದೆ. ಚಂದ್ರನಲ್ಲಿ ನೀರು ಇರುವುದನ್ನು ಮೊದಲು ಗುರುತಿಸಿದ್ದು ಭಾರತವೇ. ನಂತರ ಮಂಗಳಯಾನ ಯೋಜನೆ ನಡೆಸಲಾಯಿತು. ಆದರೆ, ಗ್ರಹದ ನೆಲದ ಮೇಲೆ ರೋವರ್ ಅನ್ನು ಸುರಕ್ಷಿತವಾಗಿ ಇಳಿಸಲು ಸಾಧ್ಯವಾಗದೇ ಹೋಗಿದ್ದು ಬಿಟ್ಟರೆ ಮಂಗಳಯಾನ ಬಹುತೇಕ ಯಶಸ್ವಿಯಾಗಿದೆ. ಮಂಗಳನ ಕಕ್ಷೆಯಲ್ಲಿ ನೌಕೆ ಇದ್ದು ಅಲ್ಲಿಂದಲೇ ಗ್ರಹದ ಅಧ್ಯಯನ ನಡೆಸಲಾಗುತ್ತಿದೆ. ಈ ವರ್ಷ ಆಗಸ್ಟ್ ತಿಂಗಳಲ್ಲಿ ಚಂದ್ರಯಾನ್-3 ನಡೆಯಲಿದೆ.
(ಒನ್ಇಂಡಿಯಾ ಸುದ್ದಿ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications