ಜಿಪಿಎಸ್ ತಂತ್ರಜ್ಞಾನದಲ್ಲಿ ಭಾರತ ಆಗಲಿದೆ ಸಾರ್ವಭೌಮ
ಶ್ರೀಹರಿಕೋಟಾ, ಅ. 16: ಮಂಗಳಯಾನದ ಯಶಸ್ಸಿನಲ್ಲಿ ಬೀಗುತ್ತಿರುವ ಇಸ್ರೋ ಗುರುವಾರ ಮತ್ತೊಂದು ಸಾಧನೆ ಮಾಡಿದೆ ದೇಶದ ಹೆಮ್ಮ ಹೆಚ್ಚಿಸಿದೆ. ದಿಕ್ಸೂಚಿ ಉಪಗ್ರಹವೊಂದನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾ ಕೇಂದ್ರದಿಂದ ಗುರುವಾರ ಬೆಳಗಿನ ಜಾವ ಉಡಾವಣೆ ಮಾಡಲಾಗಿದ್ದು ಯಶಸ್ವಿಯಾಗಿ ಕಕ್ಷೆ ಸೇರಿದೆ.
ನೇವಿಗೇಶನ್ ವಿಭಾಗದಲ್ಲಿ ಇದು ಹೊಸ ಸಂಚಲನ ಮೂಡಿಸಿದ್ದು ಭಾರತ ಜಿಪಿಎಸ್ ಸೌಲಭ್ಯಕ್ಕೆ ಬೇರಾವ ದೇಶದ ಮುಂದೆ ಕೈ ಚಾಚಬೇಕಾಗಿಲ್ಲ. ಜಿಪಿಎಸ್ ತಂತ್ರಜ್ಞಾನ ಅಭಿವೃದ್ಧಿಗೆ ಈ ಇಂಡಿಯನ್ ರಿಜನಲ್ ನೆವಿಗೇಶನ್ ಸೆಟ್ ಲೈಟ್ ಸಿಸ್ಟಮ್ (ಐಆರ್ ಎನ್ ಎಸ್ ಎಸ್) ನೆರವು ನೀಡುತ್ತದೆ.[ಮಂಗಳನಿಂದ ಬಂದ ವಿಡಿಯೋ ನೋಡಿದ್ದೀರಾ?]

ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಐಆರ್ಎನ್ಎಸ್ಎಸ್ -1ಸಿ ಪ್ರಾದೇಶಿಕ ದಿಕ್ಸೂಚಿ ಉಪಗ್ರಹವನ್ನುಪಿಎಸ್ ಎಲ್ವಿ ಸಿ -26 ವಾಹಕದ ಮೂಲಕ ಗುರುವಾರ ಬೆಳಗಿನ ಜಾವ 1.32ರ ವೇಳೆಗೆ ಉಡಾವಣೆ ಮಾಡಲಾಗಿದ್ದು ಉಪಗ್ರಹ ಯಶಸ್ವಿಯಾಗಿ ಕಕ್ಷೆ ಸೇರಿದೆ.
ಸೋಮವಾರ ಮುಂಜಾನೆಯಿಂದ ಸತತ 67 ಗಂಟೆಗಳ ಕಾಲ ಪ್ರಯತ್ನದ ನಂತರ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. 1,425 ಕೆ.ಜಿ ತೂಕದ ಈ ಉಪಗ್ರಹ ಉಡಾವಣೆಯಾದ 20 ನಿಮಿಷಗಳ ನಂತರ ನಿಗದಿತ ಕಕ್ಷೆಗೆ ಸೇರಿದೆ.[ಹೆಮ್ಮೆ ಪಡುವಂತೆ ಮಾಡಿದವರಿಂದ ಹಣ ಪಡೆಯಲ್ಲ']

ಕಾರ್ಯಕ್ರಮದ ಯಶಸ್ಸಿಗೆ ಸಂತಸ ವ್ಯಕ್ತಪಡಿಸಿರುವ ಇಸ್ರೋ ಅಧ್ಯಕ್ಷ ಕೆ. ರಾಧಾಕೃಷ್ಣನ್ ಯೋಜನೆಗೆ ಶ್ರಮಿಸಿದ ಎಲ್ಲರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಉಪಗ್ರಹದ ಜೀವಿತಾವಧಿ ಹತ್ತು ವರ್ಷಗಳಾಗಿರುವುದು. ನಿಗದಿಯಂತೆ ಅಕ್ಟೋಬರ್ 10ರಂದೇ ಉಪಗ್ರಹ ಉಡಾವಣೆಯಾಗಬೇಕಿತ್ತು. ಆದರೆ ಕೆಲ ತಾಂತ್ರಿಕ ತೊಂದರೆಗಳು ಹಿನ್ನಡೆ ಉಂಟುಮಾಡಿದವು ಎಂದು ತಿಳಿಸಿದರು.
ಪ್ರಧಾನಮಂತ್ರಿ ಕಾರ್ಯಾಲಯದ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಉಪಸ್ಥಿತರಿದ್ದು, ವಿಜ್ಞಾನಿಗಳನ್ನು ಅಭಿನಂದಿಸಿದರು. ಅಲ್ಲದೇ ಭಾರತ ವೈಜ್ಞಾನಿಕ ಬೆಳವಣಿಗೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಜಗತ್ತಿನಲ್ಲಿಯೇ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications