ಆಗಸ್ಟ್ನಲ್ಲಿ ಚಂದ್ರಯಾನ-3 ಉಡಾವಣೆಗೆ ಇಸ್ರೋ ಸಜ್ಜು
ನವದೆಹಲಿ, ಫೆಬ್ರವರಿ 04: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಗಸ್ಟ್ 2022 ರಲ್ಲಿ ಚಂದ್ರಯಾನ-3 ಅನ್ನು ಉಡಾವಣೆ ಮಾಡಲು ಸಿದ್ಧವಾಗಿದೆ. ಈ ಬಗ್ಗೆ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿ ಕೇಂದ್ರ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.
"ಚಂದ್ರಯಾನ-2 ರಿಂದ ಕಲಿತುಕೊಂಡಿರುವ ಮತ್ತು ರಾಷ್ಟ್ರೀಯ ಮಟ್ಟದ ತಜ್ಞರು ನೀಡಿದ ಸಲಹೆಗಳ ಆಧಾರದ ಮೇಲೆ, ಚಂದ್ರಯಾನ-3ರ ತಯಾರಿ ನಡೆಸಲಾಗುತ್ತಿದೆ. ಸಂಬಂಧಿತ ಹಲವು ಹಾರ್ಡ್ವೇರ್ ಮತ್ತು ಅವುಗಳ ವಿಶೇಷ ಪರೀಕ್ಷೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಉಡಾವಣೆಯು ಆಗಸ್ಟ್ 2022ಕ್ಕೆ ನಿಗದಿಯಾಗಿದೆ," ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಇನ್ನು ಈ ಸಂದರ್ಭದಲ್ಲಿ 2022 (ಜನವರಿಯಿಂದ ಡಿಸೆಂಬರ್ 22) ಅವಧಿಯಲ್ಲಿ 19 ಮಿಷನ್ಗಳನ್ನು ಯೋಜಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಎಂಟು ಉಡಾವಣಾ ವಾಹನ ಕಾರ್ಯಾಚರಣೆಗಳು, ಏಳು ಬಾಹ್ಯಾಕಾಶ ನೌಕೆ ಕಾರ್ಯಾಚರಣೆಗಳು ಮತ್ತು ನಾಲ್ಕು ತಂತ್ರಜ್ಞಾನ ಪ್ರದರ್ಶಕ ಕಾರ್ಯಾಚರಣೆಗಳನ್ನು ನಡೆಸಲು ನಿರ್ಧಾರ ಮಾಡಿದ್ದೇವೆ ಎಂದು ಕೂಡಾ ಹೇಳಿದರು.

ಕೊರೊನಾ ಸಾಂಕ್ರಾಮಿಕದಿಂದಾಗಿ ತಡೆ
''ಜುಲೈ 2019 ರ ಚಂದ್ರಯಾನ-2 ರ ನಂತರದ ಮಿಷನ್ ಚಂದ್ರಯಾನ-3 ಆಗಿದೆ. ಇದು ಚಂದ್ರನ ದಕ್ಷಿಣ ಧ್ರುವದಲ್ಲಿ ರೋವರ್ ಅನ್ನು ಇಳಿಸುವ ಗುರಿಯನ್ನು ಹೊಂದಿದೆ. ಇದನ್ನು ದೇಶದ ಅತ್ಯಂತ ಶಕ್ತಿಶಾಲಿ ಜಿಯೋಸಿಂಕ್ರೋನಸ್ ಲಾಂಚ್ ವೆಹಿಕಲ್ನಲ್ಲಿ ಕಳುಹಿಸಲಾಗಿದೆ. ಚಂದ್ರಯಾನ-2ರ ಕಲಿಕೆಗಳು ಮತ್ತು ರಾಷ್ಟ್ರೀಯ ಮಟ್ಟದ ತಜ್ಞರು ನೀಡಿದ ಸಲಹೆಗಳ ಆಧಾರದ ಮೇಲೆ ಚಂದ್ರಯಾನ-3ರ ತಯಾರಿ ಪ್ರಗತಿಯಲ್ಲಿದೆ. ಸಂಬಂಧಿತ ಹಾರ್ಡ್ವೇರ್ ಮತ್ತು ಅವುಗಳ ವಿಶೇಷ ಪರೀಕ್ಷೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಉಡಾವಣೆಯನ್ನು ಆಗಸ್ಟ್ 2022 ಕ್ಕೆ ನಿಗದಿಪಡಿಸಲಾಗಿದೆ," ಎಂದು ರವನೀತ್ ಸಿಂಗ್ ಮತ್ತು ಸುಬ್ಬುರಾಮನ್ ತಿರುನಾವುಕ್ಕರಸರ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿ ಕೇಂದ್ರ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಇನ್ನು ವಿಳಂಬವಾಗಲು ಕೊರೊನಾ ವೈರಸ್ ಸಾಂಕ್ರಾಮಿಕವೇ ಕಾರಣ ಎಂದು ಕೂಡಾ ಹೇಳಿದ್ದಾರೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೊನೆಯ ಪ್ರಮುಖ ಉಪಗ್ರಹ ಉಡಾವಣೆಗಳೆಂದರೆ ಕಳೆದ ಆಗಸ್ಟ್ನಲ್ಲಿ ಭೂ ವೀಕ್ಷಣಾ ಉಪಗ್ರಹ -3 ಮತ್ತು ಫೆಬ್ರವರಿಯಲ್ಲಿ ಅಮೆಜೋನಿಯಾ ಉಪಗ್ರಹ ಆಗಿದೆ. ಈ ಹಣಕಾಸು ವರ್ಷದಲ್ಲಿ ಇಸ್ರೋಗೆ 13,700 ಕೋಟಿ ರೂಪಾಯಿ ಮಂಜೂರು ಮಾಡಲಾಗಿದ್ದು, ಕಳೆದ ವರ್ಷ ಖರ್ಚು ಮಾಡಿದ್ದಕ್ಕಿಂತ ಸುಮಾರು 1,000 ಕೋಟಿ ರೂಪಾಯಿ ಅಧಿಕ ಮಂಜೂರು ಮಾಡಲಾಗಿದೆ. ಈ ವರ್ಷ ಹಲವಾರು ಮಿಷನ್ಗಳನ್ನು ಯೋಜಿಸಲಾಗಿದ್ದರೂ, ಈ ವರ್ಷ ಬಜೆಟ್ನ ವೆಚ್ಚವು ಕಳೆದ ವರ್ಷ ನಿಗದಿಪಡಿಸಿದ 13,949 ಕೋಟಿ ರೂಪಾಯಿಗಿಂತ ಕಡಿಮೆಯಾಗಿದೆ.
Recommended Video
ಕಳೆದ ಅಧಿವೇಶನದಲ್ಲಿ ಈ ಬಗ್ಗೆ ಲೋಕಸಭೆಗೆ ಪ್ರತಿಕ್ರಿಯೆ ನೀಡಿದ್ದ ಸಚಿವ ಜಿತೇಂದ್ರ ಸಿಂಗ್, "ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಯೋಜನೆಯ ಸಾಕಾರದ ಪ್ರಗತಿಗೆ ಅಡ್ಡಿಯುಂಟಾಗಿದೆ. ಆದರೂ ಲಾಕ್ಡೌನ್ ಸಮಯದಲ್ಲೂ ಸಹ ಮನೆಯಿಂದಲೇ ಕೆಲಸ ಮಾಡುತ್ತಾ ಸಾಧ್ಯವಾದಷ್ಟೂ ಕೆಲಸಗಳನ್ನು ಕೈಗೊಳ್ಳಲಾಗಿದೆ. ಅನ್ಲಾಕ್ ಅವಧಿ ಆರಂಭದ ನಂತರ ಚಂದ್ರಯಾನ-3 ಯೋಜನೆ ಸಾಕಾರದ ಕಾರ್ಯ ಆರಂಭವಾಗಿದೆ ಮತ್ತು ಅದು ಸಾಕಾರದ ಪ್ರಬುದ್ಧ ಹಂತದಲ್ಲಿದೆ. ಎಲ್ಲವೂ ಮಾಮೂಲಿಯಂತೆ ಕೆಲಸ ಕಾರ್ಯಗಳು ನಡೆದರೆ 2022ರ ಮೂರನೇ ತ್ರೈಮಾಸಿಕದ ವೇಳೆಗೆ ಚಂದ್ರಯಾನ-3 ಉಡಾವಣೆ ಮಾಡುವ ಸಾಧ್ಯತೆ ಇದೆ," ಎಂದು ಮಾಹಿತಿ ನೀಡಿದ್ದರು. (ಒನ್ಇಂಡಿಯಾ ಸುದ್ದಿ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications