ಇಂದು ಸಂಜೆ ಇಸ್ರೋದಿಂದ ದೈತ್ಯ ರಾಕೆಟ್ ‘ಜಿಎಸ್ಎಲ್ವಿ ಮಾರ್ಕ್-3’ ಉಡಾವಣೆ
ಶ್ರೀ ಹರಿಕೋಟಾ, ಜೂನ್ 4: ತನ್ನ ಇತಿಹಾಸದ ಅತೀ ದೊಡ್ಡ ಹಾಗೂ ತೂಕದ ಉಪಗ್ರಹ ಉಡಾವಣಾ ವಾಹಕ 'ಜಿಎಸ್ಎಲ್ವಿ ಮಾರ್ಕ್-3' ಉಡಾವಣೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಜ್ಜಾಗಿದೆ. ಶ್ರೀ ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ ಸಂಜೆ 5.28 ನಿಮಿಷಕ್ಕೆ ಈ ರಾಕೆಟ್ ಉಡಾವಣೆಯಾಗಲಿದೆ.
ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಸಾಮರ್ಥ್ಯವನ್ನು ಈ ರಾಕೆಟ್ ಹೊಂದಿರುವುದರಿಂದ ಬಾಹ್ಯಾಕಾಶಕ್ಕೆ ಗಗನಯಾನಿಗಳನ್ನು ಕಳುಹಿಸುವ ಭಾರತದ ಕನಸು ಮತ್ತಷ್ಟು ಹತ್ತಿರವಾಗಲಿದೆ. ಇಲ್ಲಿಯವರೆಗೆ ರಷ್ಯಾ, ಚೀನಾ ಮತ್ತು ಅಮೆರಿಕಾ ಮಾತ್ರ ತಮ್ಮದೇ ಉಡಾವಣಾ ವಾಹಕದಲ್ಲಿ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿದ್ದು, ಈ ಅವಕಾಶ ಭಾರತದ ಪಾಲಿಗೂ ತೆರೆದುಕೊಳ್ಳಲಿದೆ.[ಐತಿಹಾಸಿಕ ದಿನ: ದಕ್ಷಿಣ ಏಷ್ಯಾ ರಾಷ್ಟ್ರಗಳ ಉಪಗ್ರಹ ಉಡಾಯಿಸಿದ ಇಸ್ರೋ]

ಈಗಾಗಲೇ ಬಾಹ್ಯಾಕಾಶ ಯಾತ್ರೆಗೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಇಸ್ರೋ ನಡೆಸುತ್ತಿದ್ದು ಅದರಲ್ಲಿ 'ಜಿಎಸ್ಎಲ್ವಿ ಮಾರ್ಕ್ 3' ಪ್ರಮುಖ ಹೆಜ್ಜೆಯಾಗಿದೆ.
ಈ ಕುರಿತು ಹೇಳಿಕೆ ನೀಡಿರುವ ಇಸ್ರೋ ಅಧ್ಯಕ್ಷ ಎ.ಎಸ್ ಕಿರಣ್ ಕುಮಾರ್, "ಇದೊಂದು ಪ್ರಮುಖ ಘಟ್ಟ. ಈ ಉಡಾವಣೆಯ ಮೂಲಕ ನಾವು ನಮ್ಮ ನೆಲದಿಂದಲೇ ಸಂವಹನ ಉಪಗ್ರಹಗಳನ್ನು ಉಡಾಯಿಸಬಹುದಾಗಿದೆ," ಎಂದು ಹೇಳಿದ್ದಾರೆ.[ಭಾರತದ ಸಖತ್ ಉಡುಗೊರೆಯನ್ನು ನಯವಾಗಿ ತಿರಸ್ಕರಿಸಿದ ಪಾಕ್]
It is an important event because this will help us in putting our Communication satellites from our own soil: ISRO Chairman AS Kiran Kumar pic.twitter.com/kvAkA0RIPl
— ANI (@ANI_news) June 4, 2017
300 ಕೋಟಿ ಖರ್ಚು
ಒಂದು 'ಜಿಎಸ್ಎಲ್ವಿ ಮಾರ್ಕ್ 3' ಉಡಾವಣೆಗೆ ಸುಮಾರು 300 ಕೋಟಿ ರೂಪಾಯಿ ಖರ್ಚಾಗಲಿದೆ. ಸತತ ಆರು ಪರೀಕ್ಷೆಗಳು ಯಶಸ್ವಿಯಾದ ಬಳಿಕ ಈ 'ಜಿಎಸ್ಎಲ್ವಿ ಮಾರ್ಕ್ 3'ಯಲ್ಲಿ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಬಹುದಾಗಿದೆ. ಒಂದು ಅಂದಾಜಿನ ಪ್ರಕಾರ ಮುಂದಿನ 15 ವರ್ಷಗಳ ಒಳಗೆ ಭಾರತ ಗಗನಯಾನಿಗಳನ್ನು ಅಂತರಿಕ್ಷಕ್ಕೆ ಕಳುಹಿಸಲಿದೆ.[ಇಸ್ರೊ ಅಂಗ ಸಂಸ್ಥೆ ಎನ್ ಆರ್ ಎಸ್ ಸಿಯಲ್ಲಿ ವಿವಿಧ ಉದ್ಯೋಗಾವಕಾಶಗಳು]
ಈ ರಾಕೆಟ್ 43 ಮೀಟರ್ ಉದ್ದವಿದೆ. ಅಂದರೆ 13 ಮಹಡಿಗಳ ಕಟ್ಟಡದಷ್ಟು ದೊಡ್ಡದಿದೆ. ಒಟ್ಟು ಈ ರಾಕೆಟ್ 640 ಟನ್ ತೂಕವಿದ್ದು ಏಕಕಾಲಕ್ಕೆ 4 ಟನ್ ಗಳಷ್ಟು ತೂಕದ ಉಪಗ್ರಹಗಳನ್ನು ಹೊತ್ತೊಯ್ಯಬಲ್ಲುದಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications