ಯೂಟ್ಯೂಬ್ ವಿಡಿಯೋಗಳಿಂದ ಕೋಟಿ ಗಳಿಸಿದ್ದ ಉತ್ತರ ಪ್ರದೇಶದ ಯೂಟ್ಯೂಬರ್ ಮೇಲೆ ತೆರಿಗೆ ಅಧಿಕಾರಿಗಳ ದಾಳಿ
ಲಕ್ನೋ, ಜುಲೈ. 18: ಯೂಟ್ಯೂಬ್ ಶೋಗಳನ್ನು ಹೋಸ್ಟ್ ಮಾಡುವ ಮೂಲಕ ಗಳಿಸಿದ ಆದಾಯದ ಮೇಲಿನ ತೆರಿಗೆ ವಂಚನೆ ಆರೋಪದ ಮೇಲೆ ಉತ್ತರ ಪ್ರದೇಶ ಮೂಲದ ಯೂಟ್ಯೂಬರ್ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ದಾಳಿ ನಡೆಸಿದೆ. ದಾಳಿ ವೇಳೆ ಬರೇಲಿಯಲ್ಲಿರುವ ಅವರ ನಿವಾಸದಲ್ಲಿ 24 ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣ ಹಾಗೂ ಇತರೆ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ.
ಉತ್ತರ ಪ್ರದೇಶದ ಬರೇಲಿಯ ತಸ್ಲೀಮ್, 'ಟ್ರೇಡಿಂಗ್ ಹಬ್ 3.0' ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದು, ಅದರ ಮೂಲಕ ಷೇರು ಮಾರುಕಟ್ಟೆಗೆ ಸಂಬಂಧಿಸಿದ ವೀಡಿಯೊಗಳನ್ನು ಹಂಚಿಕೊಳ್ಳುತ್ತಾರೆ. ಅವರು ಕಳೆದ ಕೆಲವು ವರ್ಷಗಳಿಂದ ತಮ್ಮ ಚಾನೆಲ್ ಅನ್ನು ನಡೆಸುತ್ತಿದ್ದಾರೆ. ಸುಮಾರು 1 ಕೋಟಿ ರೂಪಾಯಿ ಗಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ತಸ್ಲೀಮ್ ಅವರ 'ಟ್ರೇಡಿಂಗ್ ಹಬ್ 3.0' ಯೂಟ್ಯೂಬ್ ಚಾನೆಲ್ ಪ್ರಸ್ತುತ 58 ವಿಡಿಯೋಗಳೊಂದಿಗೆ 1 ಲಕ್ಷ ಚಂದಾದಾರರನ್ನು ಹೊಂದಿದೆ. ತಸ್ಲೀಮ್ನ ಆರ್ಥಿಕ ಚಟುವಟಿಕೆಗಳ ಬಗ್ಗೆ ಪೊಲೀಸರು ಮಾಹಿತಿ ನೀಡಿದ ನಂತರ ಐಟಿ ಇಲಾಖೆ ಕ್ರಮ ತೆಗೆದುಕೊಂಡಿದೆ. ಇದಾದ ನಂತರ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ. ಅವರ ವಹಿವಾಟುಗಳು, ಬ್ಯಾಂಕ್ ಖಾತೆಗಳು ಮತ್ತು ಅವರು ಈ ಹಿಂದೆ ಸಲ್ಲಿಸಿದ ಆದಾಯ ತೆರಿಗೆ ರಿಟರ್ನ್ಸ್ (ITR) ಗಳನ್ನು ಪರಿಶೀಲಿಸುತ್ತಿದ್ದಾರೆ.
ಈ ಬಗ್ಗೆ ಇನ್ನು ತನಿಖೆ ಮುಂದುವರೆದಿದ್ದು, ಸದ್ಯಕ್ಕೆ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಐಟಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಆದರೆ, ತೆರಿಗೆ ವಂಚನೆ ಆರೋಪವನ್ನು ತಸ್ಲಿಮ್ ಕುಟುಂಬ ತಳ್ಳಿಹಾಕಿದೆ. ಅವರ ಸಹೋದರ ಫಿರೋಜ್ ಮಾತಾಡಿ, ತಾವು ಸುಮಾರು ಐದು ವರ್ಷಗಳಿಂದ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದಾರೆ. ಅವರು ಗಳಿಸಿದ ಹಣಕ್ಕೆ ಆದಾಯ ತೆರಿಗೆ ಪಾವತಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಎನ್ಡಿಟಿವಿಯೊಂದಿಗೆ ಮಾತನಾಡಿದ ಫಿರೋಜ್, "ನಾವು ಯಾವುದೇ ತಪ್ಪು ಕೆಲಸ ಮಾಡುವುದಿಲ್ಲ, ನಾವು ನಮ್ಮ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತೇವೆ, ಇದರಿಂದ ನಾವು ಉತ್ತಮ ಆದಾಯವನ್ನು ಗಳಿಸುತ್ತೇವೆ ಇದು ಸತ್ಯ. ಈ ದಾಳಿಯು ಯೋಜಿತ ಪಿತೂರಿಯಾಗಿದೆ" ಎಂದು ಆರೋಪಿಸಿದ್ದಾರೆ.
ಕೇರಳದಲ್ಲಿ ಸುಮಾರು 10 ಯೂಟ್ಯೂಬರ್ಗಳು ಮತ್ತು ಇತರ ಸಾಮಾಜಿಕ ಮಾಧ್ಯಮದ ಪ್ರಭಾವಿಗಳ ಮೇಲೆ ತೆರಿಗೆ ಇಲಾಖೆ ದಾಳಿ ನಡೆಸಿದ ವಾರಗಳ ನಂತರ ಈ ಬೆಳವಣಿಗೆ ಬಂದಿದೆ. ಹೆಚ್ಚಾಗಿ ಯುವ ಕಲಾವಿದರು ಮತ್ತು ನಟರ ಮೇಲೆ ದಾಳಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ. ಜೂನ್ನಲ್ಲಿ, ಐಟಿ ಇಲಾಖೆಯು ಹಲವಾರು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ತಮ್ಮ ಆದಾಯ ಮತ್ತು ಲಾಭವನ್ನು ಅವರ ಗಳಿಕೆಗೆ ಅನುಗುಣವಾಗಿ ಬಹಿರಂಗಪಡಿಸದವರ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು.
ಐಟಿ ಇಲಾಖೆಯ ಆಡಳಿತಾತ್ಮಕ ಪ್ರಾಧಿಕಾರವಾದ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT), ವ್ಯಾಪಾರ ಅಥವಾ ವೃತ್ತಿಯಲ್ಲಿ ಪಡೆದ ಪ್ರಯೋಜನಗಳಿಗೆ ಸಂಬಂಧಿಸಿದಂತೆ ಕಳೆದ ವರ್ಷ ಹೊಸ ಟಿಡಿಎಸ್ ನಿಬಂಧನೆಯನ್ನು ಪರಿಚಯಿಸಿದೆ. ಐಟಿ ಕಾಯಿದೆಯಲ್ಲಿ 194R ಎಂಬ ಹೊಸ ವಿಭಾಗವನ್ನು ತರಲಾಗಿದೆ. ಇದು ವ್ಯಾಪಾರ ಅಥವಾ ವೃತ್ತಿಯಿಂದ ಉಂಟಾಗುವ ಯಾವುದೇ ಲಾಭ ಅಥವಾ ಒಂದು ವರ್ಷದಲ್ಲಿ 20,000 ರೂಪಾಯಿಗಿಂತ ಹೆಚ್ಚಿನ ಮೊತ್ತವನ್ನು ಪಡೆಯುವವರಿಗೆ 10% ಟಿಡಿಎಸ್ ಕಡಿತಗೊಳಿಸುವ ಅಗತ್ಯವಿರುತ್ತದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications