ಅಪ್ಪನ ಬಂಧನದ ಬಗ್ಗೆ ಕಾರ್ತಿ ಚಿದಂಬರಂ ತೀವ್ರ ಆಕ್ರೋಶ
ನವದೆಹಲಿ, ಆಗಸ್ಟ್ 21: ಪಿ.ಚಿದಂಬರಂ ಅವರ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಮಗ ಕಾರ್ತಿ ಚಿದಂಬರಂ ಇದೊಂದು ರಾಜಕೀಯ ಭೇಟೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಿ.ಚಿದಂಬರಂ ಅವರ ಬಂಧನವಾದ ಕೆಲವೇ ನಿಮಿಷಗಳ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ತಿ ಚಿದಂಬರಂ, 2017 ರಲ್ಲಿ ಪ್ರಕರಣ ದಾಖಲಾಗಿದೆ ಆದರೆ ಈವರೆಗೂ ಚಾರ್ಜ್ ಶೀಟ್ ಸಹ ಸಲ್ಲಿಸಲಾಗಿಲ್ಲ ಇದೇ ಸಾಬೀತು ಪಡಿಸುತ್ತದೆ ಇದೊಂದು ರಾಜಕೀಯ ಪ್ರೇರಿತ ಪ್ರಕರಣವೆಂದು ಎಂದು ಅವರು ಹೇಳಿದರು.
ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಪ್ರಕರಣ ದಾಖಲಿಸಲಾಗಿದೆ. ನನ್ನ ಮೇಲೆ ಸಿಬಿಐ ನಾಲ್ಕು ಬಾರಿ ದಾಳಿ ಮಾಡಿದೆ. ಈ ವರೆಗೆ ಯಾರ ಮೇಲೂ ಇಷ್ಟು ದಾಳಿ ನಡೆದಿಲ್ಲ. ಇಪ್ಪತ್ತು ಬಾರಿ ವಿಚಾರಣೆಗೆ ಹಾಜರಾಗಿದ್ದೇನೆ, ಅದೂ ಪ್ರತಿಬಾರಿ ಹತ್ತು ಗಂಟೆ ವಿಚಾರಣೆ ನಡೆಸುತ್ತಾರೆ. ಸತತ ಹನ್ನೊಂದು ದಿನ ಕಸ್ಟಡಿಯಲ್ಲಿಯೇ ಇದ್ದೆ ಇಷ್ಟೆಲ್ಲಾ ಆದಾಗ್ಯೂ ಇನ್ನೂ ಚಾರ್ಜ್ ಶೀಟ್ ಸಲ್ಲಿಸಿಲ್ಲ ಎಂದು ಕಾರ್ತಿ ಚಿದಂಬರಂ ಹೇಳಿದರು.

ಯಾರದೋ ಕೆಲವರ ಆದೇಶದ ಮೇರೆಗೆ ಹೂಡಿರುವ ಪ್ರಕರಣ ಇದು, ಮಾಧ್ಯಮಗಳಿಗಾಗಿ, ಟಿವಿ ಟಿಆರ್ಪಿಗಳಿಗಾಗಿ ಈ ಪ್ರಕರಣಕ್ಕೆ ಪ್ರಾಮುಖ್ಯ ನೀಡಲಾಗುತ್ತಿದೆ ಎಂದು ಅವರು ಮಾಧ್ಯಮಗಳ ಮೇಲೂ ಅಸಮಾಧಾನ ಹೊರಹಾಕಿದ್ದರು.
2008 ರಲ್ಲಿ ಪ್ರಕರಣ ನಡೆದಿದೆ ಎನ್ನುತ್ತಾರೆ 2017 ರಲ್ಲಿ ಪ್ರಕರಣ ದಾಖಲಾಗಿದೆ. ಎರಡು ವರ್ಷ ವಿಚಾರಣೆ ನಡೆಸಿದ್ದಾರೆ ಆದರೆ ಚಾರ್ಜ್ ಶೀಟ್ ಹಾಕಿ ಆರೋಪಿಗಳನ್ನಾಗಿಯೇ ಮಾಡಲಾಗಿಲ್ಲ. ಆರೋಪಿಗಳಲ್ಲದವರನ್ನು ಸುಮ್ಮನೇ ಬಂಧಿಸಲಾಗುತ್ತಿದೆ ಎಂದು ಅವರು ಸಿಟ್ಟು ಹೊರಹಾಕಿದರು.
This is a political witch-hunt. Outrageous media leaks are the preferred tactics of the @dir_ed I have nothing to do with INX or the FIPB. All my assets and liabilities are duly declared in statutory and regulatory filings. I have repeated this ad nauseam https://t.co/jBmkrxLNeX
— Karti P Chidambaram (@KartiPC) August 21, 2019
ನಮ್ಮ ತಂದೆ ಎಲ್ಲಿಯೂ ತಲೆಮರೆಸಿಕೊಂಡಿರಲಿಲ್ಲ. ಅವರು ಬೆಳಿಗ್ಗಿನಿಂದಲೂ ತಮ್ಮ ವಕೀಲರುಗಳೊಂದಿಗೆ ಇದ್ದರು. ನ್ಯಾಯ ನಮ್ಮ ಪರವಾಗುವ ಎಲ್ಲ ವಿಶ್ವಾಸವಿದೆ ಎಂದು ಕಾರ್ತಿ ಚಿದಂಬರಂ ಹೇಳಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications