ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಟಿ ಅಧಿಕಾರಿಗಳ ವಿಚಾರಣೆ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 21: ಮಾಜಿ ಡಿಸಿಎಂ ಪರಮೇಶ್ವರ್ ನಿವಾಸ ಹಾಗೂ ಅವರ ಒಡೆತನದ ಕಾಲೇಜಿನ ಮೇಲೆ ನಡೆದಿದ್ದ ದಾಳಿಗೆ ಸಂಬಂಧಿಸಿದಂತೆ ಇಂದು ಐಟಿ ವಿಚಾರಣೆಗೆ ಪರಮೇಶ್ವರ್ ಹಾಜರಾಗಿದ್ದರು.

ಮಧ್ಯಾಹ್ನದ ವೇಳೆಗೆ ವಿಚಾರಣೆ ಅಂತ್ಯಗೊಳಿಸಿದ ಐಟಿ ಅಧಿಕಾರಿಗಳು, ಕಾಲೇಜಿನಲ್ಲಿ ದೊರಕಿದ ದಾಖಲೆಗಳು, ನಗದು ಹಣ, ಆಸ್ತಿ, ಪರಮೇಶ್ವರ್ ಆಪ್ತರ ಹೆಸರಲ್ಲಿ ಇದೆ ಎನ್ನಲಾಗುತ್ತಿರುವ ಹಣ-ಆಸ್ತಿಯ ಕುರಿತು ಪ್ರಶ್ನೆಗಳನ್ನು ಕೇಳಿದೆ ಎನ್ನಲಾಗಿದೆ.

ಪರಮೇಶ್ವರ್ ಮೇಲೆ ಐಟಿ ದಾಳಿ ಅಂತ್ಯ: ಭಾರಿ ಅಕ್ರಮ ಆಸ್ತಿ ಪತ್ತೆ?ಪರಮೇಶ್ವರ್ ಮೇಲೆ ಐಟಿ ದಾಳಿ ಅಂತ್ಯ: ಭಾರಿ ಅಕ್ರಮ ಆಸ್ತಿ ಪತ್ತೆ?

Recommended Video

ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಸ್ಪೀಕರ್ | Oneindia Kannada

ಸತತ ಮೂರು ಗಂಟೆ ಪರಮೇಶ್ವರ್ ಅವರನ್ನು ಐಟಿ ಅಧಿಕಾರಿಗಳು ಪ್ರಶ್ನೆ ಮಾಡಿದರು. ಅಕ್ಟೋಬರ್ 10 ರಂದು ಬೆಳಿಗ್ಗೆ ಪರಮೇಶ್ವರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

IT Officers Today Questioned G Parameshwar

ಐಟಿ ಅಧಿಕಾರಿಗಳ ವಿಚಾರಣೆ ನಂತರ ಮಾತನಾಡಿದ ಪರಮೇಶ್ವರ್, 'ಐಟಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆಲ್ಲಾ ಉತ್ತರ ನೀಡಿದ್ದೇನೆ, ದಾಖಲೆಗಳು ನೀಡಲು ಹೇಳಿದ್ದರು, ಅದರಂತೆ ದಾಖಲೆಗಳನ್ನೂ ನೀಡಿದ್ದೇನೆ. ಮತ್ತೆ ವಿಚಾರಣೆ ಹಾಜರಾಗುವಂತೆ ಅಧಿಕಾರಿಗಳು ಹೇಳಿಲ್ಲ' ಎಂದರು.

ಪರಮೇಶ್ವರ್ ಒಡೆತನದ ಸಿದ್ಧಾರ್ಥ ಕಾಲೇಜಿನಲ್ಲಿ ದೇವರ ಹುಂಡಿ ಹಣ!ಪರಮೇಶ್ವರ್ ಒಡೆತನದ ಸಿದ್ಧಾರ್ಥ ಕಾಲೇಜಿನಲ್ಲಿ ದೇವರ ಹುಂಡಿ ಹಣ!

ಪರಮೇಶ್ವರ್ ನಿವಾಸದ ಮೇಲೆ ಐಟಿ ದಾಳಿ ಆದ ನಂತರ ಪರಮೇಶ್ವರ್ ಆಪ್ತ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದ. ಐಟಿ ಅಧಿಕಾರಿಗಳು ದಾಳಿ ಮಾಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ರಮೇಶ್ ಆತ್ಮಹತ್ಯೆ ಪತ್ರ ಬರೆದಿಟ್ಟಿದ್ದರು.

English summary
Former DCM G Parameshwar apeared front of IT Officers regarding IT raid on his house and Siddartha college.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X