ತೆಲಂಗಾಣ ಸಚಿವ ಮಲ್ಲಾರೆಡ್ಡಿ ಹಾಗೂ ಕುಟುಂಬಸ್ಥರ ನಿವಾಸಗಳಲ್ಲಿ ಐಟಿ ದಾಳಿ
ಹೈದರಾಬಾದ್, ನವೆಂಬರ್ 22: ತೆಲಂಗಾಣ ಕಾರ್ಮಿಕ ಕಾರ್ಮಿಕ ಸಚಿವ ಹಾಗೂ ಟಿಆರ್ಎಸ್ ನಾಯಕ ಮಲ್ಲಾರೆಡ್ಡಿ ಮತ್ತು ಅವರ ಕುಟುಂಬ ಸದಸ್ಯರಿಗೆ ಸೇರಿದ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರೆದಿದೆ.
ಆದಾಯ ತೆರಿಗೆ ಅಧಿಕಾರಿಗಳು ಕಾರ್ಮಿಕ ಸಚಿವ ಮಲ್ಲಾರೆಡ್ಡಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ತೆರಿಗೆ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಲ್ಲಾ ರೆಡ್ಡಿ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೂ ದಾಳಿ ನಡೆಸಲಾಗಿದೆ. ಮಲ್ಲಾ ರೆಡ್ಡಿ ಅವರು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಸಂಪುಟದಲ್ಲಿ ಎರಡನೇ ವ್ಯಕ್ತಿಯಾಗಿದ್ದು, ಅವರ ವಿರುದ್ಧ ಕೇಂದ್ರ ಸರ್ಕಾರಿ ಸಂಸ್ಥೆಯಾದ ಆಧಾಯ ತೆರಿಗೆ ಇಲಾಖೆಯಿಂದ ಈಗ ಶೋಧ ನಡೆಸಲಾಗಿದೆ.
ನವೆಂಬರ್ 9ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗ್ರಾನೈಟ್ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಸಚಿವ ಗಂಗೂಲ ಕಮಲಾಕರ್ ಅವರಿಗೆ ಸಂಬಂಧಿಸಿದ ನಿವಾಸಗಳ ಮೇಲೆ ದಾಳಿ ನಡೆಸಿದ್ದರು. ತೆಲಂಗಾಣ ರಾಜ್ಯದಲ್ಲಿ ಗ್ರಾನೈಟ್ ವಹಿವಾಟಿನಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆಗಾಗಿ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದ್ದು, ಅಕ್ರಮ ಹಣ ವರ್ಗಾವಣೆಯ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಕೂಡ ಪ್ರಕರಣ ದಾಖಲಿಸಿದೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ 40 ಜನರ ತಂಡಗಳ ಏಕಕಾಲಕ್ಕೆ ಮಲ್ಲಾರೆಡ್ಡಿ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳು ಹಾಗೂ ರಿಯಲ್ ಎಸ್ಟೇಟ್ ಕಂಪೆನಿಗಳಲ್ಲಿ ಶೋಧ ನಡೆಸಿದ್ದವು. ಮಲ್ಲಾರೆಡ್ಡಿ ಕಾಲೇಜುಗಳ ಬ್ಯಾಂಕ್ ಖಾತೆಗಳಿಗೆ ಸಂದಾಯವಾಗಿರುವ ಕ್ರಾಂತಿ ಎಂಬ ಬ್ಯಾಂಕ್ನಲ್ಲಿ ಸಂಸ್ಥೆ ಇಟ್ಟಿರುವ ಹಣದ ಬಗ್ಗೆಯೂ ಶೋಧ ನಡೆಸಲಾಗಿದೆ.
ಐಟಿ ಅಧಿಕಾರಿಗಳು ದಾಳಿ ಆರಂಭಿಸಿದಾಗ ಸಚಿವರು ಅವರ ನಿವಾಸದಲ್ಲೇ ಇದ್ದರು. ಸಿಎಂಆರ್ ಕಾಲೇಜುಗಳ ಅಧ್ಯಕ್ಷರಾಗಿರುವ ಮಲ್ಲಾರಡ್ಡಿ ಅವರ ಸಹೋದರ ಗೋಪಾಲರೆಡ್ಡಿ ಓಡಿಹೋಗಲು ಪ್ರಯತ್ನಿಸಿದರು. ಆದರೆ ಅಧಿಕಾರಿಗಳು ಅವರನ್ನು ತಡೆದು ಶೋಧ ಮುಂದುವರಿಸಿದರು. ಬೋಯಿನಪಲ್ಲಿ ಹಾಗೂ ಕೊಂಪಲ್ಲಿಯಲ್ಲಿರುವ ಸಚಿವ ಮಲ್ಲಾರೆಡ್ಡಿ ಅವರ ನಿವಾಸ ಹಾಗೂ ಮೇಡ್ಚಲ್ ಬಳಿಯ ಇತರ ಕೆಲವು ಸ್ಥಳಗಳಲ್ಲಿ ಐಟಿ ಶೋಧ ನಡೆಸಿದೆ. ಸಚಿವ ಮಲ್ಲಾರೆಡ್ಡಿ ಅವರ ಅಳಿಯ ಮಲಕಜಗಿರಿಯಿಂದ ಲೋಕಸಭೆಗೆ ಸ್ಪರ್ಧಿಸಿ 2019ರ ಚುನಾವಣೆಯಲ್ಲಿ ರೇವಂತ್ ರೆಡ್ಡಿ ಅವರ ವಿರುದ್ಧ ಸೋತಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications