IT Raid: ಕರ್ನಾಟಕ ಸೇರಿ ಅನೇಕ ಕಡೆಗಳಲ್ಲಿ ಐಟಿ ದಾಳಿ: 94 ಕೋಟಿ ರೂ.ಪತ್ತೆ
ನವದೆಹಲಿ, ಅಕ್ಟೋಬರ್ 16: ತೆರಿಗೆ ವಂಚನೆ ಮಾಡುತ್ತಿರುವವರ ವಿರುದ್ಧ ಆದಾಯ ತೆರಿಗೆ ಇಲಾಖೆ (Income Tax dept) ಅಧಿಕಾರಿಗಳು ನಿರಂತರ ಸಮರ ಸಮರ ಸಾರಿದ್ದಾರೆ. ಬೆಂಗಳೂರು, ಕರ್ನಾಟಕದ ಇತರ ಭಾಗಗಳು ಸೇರಿದಂತೆ ಹಲವು ರಾಜ್ಯಗಳಲ್ಲಿ ಐಟಿ ದಾಳಿಗಳು ನಡೆದಿವೆ. ಇದರಿಂದ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (ಸಿಬಿಡಿಟಿ) ತಿಳಿಸಿದೆ.
ಬೆಂಗಳೂರು ಒಳಗೊಂಡಂತೆ ಕರ್ನಾಟಕದಲ್ಲಿ ಮತ್ತು ಇನ್ನಿತರ ರಾಜ್ಯಗಳಲ್ಲಿ ಸರ್ಕಾರಿ ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳು ಐಟಿ ದಾಳಿಗೆ ಒಳಗಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಈ ಎಲ್ಲ ದಾಳಿಗಳಿಂದ ಒಟ್ಟು 94 ಕೋಟಿ ರೂಪಾಯಿ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.

ಅಷ್ಟೇ ಅಲ್ಲದೇ 8 ಕೋಟಿ ರೂಪಾಯಿ ಮೌಲ್ಯದ ವಜ್ರಗಳು ಸೇರಿದಂತೆ ಚಿನ್ನಭರಣ, 30 ಐಷಾರಾಮಿ ವಿದೇಶಿ ವಾಚ್ಗಳನ್ನು ಜಪ್ತಿಮಾಡಿದ್ದಾರೆ. ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಅಕ್ಟೋಬರ್ 12ರಂದು ಐಟಿ ಅಧಿಕಾರಿಗಳು ವಿವಿಧ ಗುತ್ತಿಗೆದಾರರ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲಿಂದ ಶೋಧ ಕಾರ್ಯ ಆರಂಭವಾಗಿತ್ತು.
ಕರ್ನಾಟಕದ ಬೆಂಗಳೂರು, ಆಂಧ್ರಪ್ರದೇಶ, ತೆಲಂಗಾಣ, ರಾಷ್ಟ್ರ ರಾಜಧಾನಿ ದೆಹಲಿಯ ಕೆಲವು ನಗರಗಳಲ್ಲಿ ಇಲಾಖೆಯು ಒಟ್ಟು 55 ಕಡೆಗಳಲ್ಲಿ ದಾಳಿ ನಡೆಸಿದೆ. ಇದರಲ್ಲಿ ರಾಜಕೀಯ ನಾಯಕರ ಒಂದಷ್ಟು ಮನೆಗಳು ಸೇರಿವೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ 42 ಕೋಟಿ ರೂಪಾಯಿ ಸಿಕ್ಕಿತ್ತು. ಇದು ಇತ್ತೀಚಿನ ಐಟಿ ದಾಳಿಗಳ ಪ್ರಕರಣದಲ್ಲಿ ಅತ್ಯಧಿಕ ನಗದು ಸಿಕ್ಕ ಪ್ರಕವರಣವಾಗಿದೆ ಎನ್ನಲಾಗಿದೆ.
ಇನ್ನೂ ಒಟ್ಟು ಐಟಿ ದಾಳಿಗಳಲ್ಲಿ ಅಂದಾಜು 94 ಕೋಟಿ ರೂಪಾಯಿ ನಗದು ಹಣ ಹಾಗೂ ಎಂಟು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (ಸಿಬಿಡಿಟಿ) ಹೇಳಿಕೆಯಲ್ಲಿ ತಿಳಿಸಿದೆ ಎಂದು ವರದಿ ಆಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ












Click it and Unblock the Notifications